Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:22 - ಕನ್ನಡ ಸಮಕಾಲಿಕ ಅನುವಾದ

22 ದೇವರು ಅವುಗಳನ್ನು ಆಶೀರ್ವದಿಸಿ ಅವುಗಳಿಗೆ, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಸಮುದ್ರಗಳಲ್ಲಿ ನೀರನ್ನು ತುಂಬಿರಿ, ಭೂಮಿಯ ಮೇಲೆ ಪಕ್ಷಿಗಳ ಸಂಖ್ಯೆ ಹೆಚ್ಚಾಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವುಗಳಿಗೆ ದೇವರು, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ,” ಎಂದು ಹೇಳಿ ಆಶೀರ್ವದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದಲ್ಲದೆ ದೇವರು ಅವುಗಳಿಗೆ - ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಹೆಚ್ಚಲಿ ಎಂದು ಹೇಳಿ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇದಲ್ಲದೆ ದೇವರು, “ಜಲಚರಗಳು ಅಸಂಖ್ಯಾತವಾಗಿ ಸಮುದ್ರಗಳನ್ನು ತುಂಬಿಕೊಳ್ಳಲಿ; ಪಕ್ಷಿಗಳು ಅಸಂಖ್ಯಾತವಾಗಿ ಭೂಮಿಯಲ್ಲೆಲ್ಲಾ ಹರಡಿಕೊಳ್ಳಲಿ” ಎಂದು ಹೇಳಿ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:22
16 ತಿಳಿವುಗಳ ಹೋಲಿಕೆ  

ನಿನ್ನ ಬಳಿಯಲ್ಲಿರುವ ಪಕ್ಷಿ, ಪಶು, ಕ್ರಿಮಿ, ಮುಂತಾದ ಎಲ್ಲಾ ಜೀವಿಗಳನ್ನು ಹೊರಗೆ ತೆಗೆದುಕೊಂಡು ಬಾ. ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ, ಅವು ಅಭಿವೃದ್ಧಿಯಾಗಿ ಹೆಚ್ಚಲಿ,” ಎಂದು ಹೇಳಿದರು.


ದೇವರು ಅವರನ್ನು ಆಶೀರ್ವದಿಸಿದ್ದರಿಂದ, ಅವರು ಬಹಳವಾಗಿ ಹೆಚ್ಚಿದರು; ದೇವರು ದನಗಳು ಕಡಿಮೆಯಾಗುವಂತೆ ಮಾಡಲಿಲ್ಲ.


“ನಾನು ನಿನ್ನ ಹಾಗೆ ಸೃಷ್ಟಿಮಾಡಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ತಿನ್ನುತ್ತದೆ.


ದೇವರು ಅವರನ್ನು ಆಶೀರ್ವದಿಸಿ, “ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ,” ಎಂದು ಅವರಿಗೆ ಹೇಳಿದರು.


ಇದಲ್ಲದೆ ಯೆಹೋವ ದೇವರು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಅಧಿಕವಾಗಿ ಆಶೀರ್ವದಿಸಿದರು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಕತ್ತೆಗಳೂ ದೊರಕಿದವು.


ದೇವರು ನೋಹನನ್ನೂ, ಅವನ ಪುತ್ರರನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿ, ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.


ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.


ನಿನ್ನ ಹೆಂಡತಿಯು ನಿನ್ನ ಮನೆಯಲ್ಲಿರುವ ಫಲಭರಿತವಾದ ದ್ರಾಕ್ಷಿಬಳ್ಳಿಯ ಹಾಗೆ ಇರುವಳು. ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು, ಓಲಿವ್ ಮರಗಳ ಸಸಿಗಳ ಹಾಗೆ ಇರುವರು.


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ಅವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


“ ‘ನಾನು ನಿಮ್ಮನ್ನು ಲಕ್ಷಿಸಿ, ನಿಮ್ಮನ್ನು ಅಭಿವೃದ್ಧಿ ಮಾಡಿ, ನಿಮ್ಮನ್ನು ಹೆಚ್ಚಿಸಿ, ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.


ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.


ನಾನು ಬರುವುದಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಯೆಹೋವ ದೇವರು ನಿನ್ನನ್ನು ಆಶೀರ್ವದಿಸಿದ್ದಾರೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ?” ಎಂದನು.


ಲಾಬಾನನು ಅವನಿಗೆ, “ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವನಾಗಿದ್ದರೆ, ನನ್ನ ಬಳಿಯಲ್ಲಿಯೇ ಇರು. ಏಕೆಂದರೆ ಯೆಹೋವ ದೇವರು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾರೆಂದು ನಾನು ಭವಿಷ್ಯಜ್ಞಾನ ಅನುಭವದಿಂದ ಕಲಿತುಕೊಂಡಿದ್ದೇನೆ.


ಹೀಗೆ ದೇವರು ದೊಡ್ಡ ಜಲಚರಗಳನ್ನು, ನೀರಿನಲ್ಲಿ ತುಂಬಿರುವ ಎಲ್ಲಾ ಚಲಿಸುವ ಜೀವ ಜಂತುಗಳನ್ನು, ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಯನ್ನು ಅವುಗಳ ಜಾತಿಗನುಸಾರವಾಗಿ ಸೃಷ್ಟಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.


ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು