Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:29 - ಕನ್ನಡ ಸಮಕಾಲಿಕ ಅನುವಾದ

29 ದೇವರು, “ಇಗೋ, ಭೂಮಿಯ ಮೇಲಿರುವ ಬೀಜಬಿಡುವ ಸಕಲ ಸಸ್ಯಗಳನ್ನೂ ಬೀಜಬಿಡುವ ಸಕಲ ಹಣ್ಣಿನ ಮರಗಳನ್ನೂ ನಿಮಗೆ ಕೊಟ್ಟಿದ್ದೇನೆ. ಅವು ನಿಮಗೆ ಆಹಾರಕ್ಕಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮತ್ತು ದೇವರು - ಇಗೋ, ಸಮಸ್ತಭೂವಿುಯ ಮೇಲೆ ಬೀಜವುಳ್ಳ ಎಲ್ಲಾ ಪೈರುಗಳನ್ನೂ ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇದಲ್ಲದೆ ದೇವರು ಅವರಿಗೆ, “ಬೀಜಫಲಿಸುವ ಎಲ್ಲಾ ಸಸಿಗಳನ್ನು ಮತ್ತು ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಎಲ್ಲಾ ಮರಗಳನ್ನು ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:29
22 ತಿಳಿವುಗಳ ಹೋಲಿಕೆ  

ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ. ಹಸಿರು ಪಲ್ಯಗಳ ಹಾಗೆಯೇ, ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.


ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ದೇವರಲ್ಲಿಯೇ.’ ನಿಮ್ಮ ಕವಿಗಳಲ್ಲಿ ಕೆಲವರು ಹೇಳಿರುವಂತೆ, ‘ನಾವು ನಿಜಕ್ಕೂ ದೇವರ ಮಕ್ಕಳೇ ಆಗಿದ್ದೇವೆ.’


ಆದರೂ ದೇವರು ತಮ್ಮ ಬಗ್ಗೆ ಸಾಕ್ಷಿಕೊಡದೆ ಇರಲಿಲ್ಲ. ಆಕಾಶದಿಂದ ಮಳೆಯನ್ನೂ ಸಕಾಲದಲ್ಲಿ ಬೆಳೆಯನ್ನೂ ನಿಮಗೆ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೆಯದನ್ನು ಮಾಡುತ್ತಾ ಬಂದವರು ದೇವರೇ.”


ದೇವರು ಪಶುಗಳಿಗೂ, ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾರೆ.


ಸಕಲ ಜೀವಿಗಳಿಗೂ ಆಹಾರವನ್ನು ಕೊಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ನಮ್ಮ ಅನುದಿನದ ಆಹಾರವನ್ನು ನಮಗೆ ಈ ದಿನವೂ ದಯಪಾಲಿಸಿರಿ.


ಈ ರೀತಿಯಾಗಿ ದೇವರು ದೇಶಗಳನ್ನು ಆಳುತ್ತಾರೆ ಸಮೃದ್ಧಿಯಾಗಿ ದೇವರು ಆಹಾರ ಕೊಡುತ್ತಾರೆ.


ಇದಲ್ಲದೆ ಯೆಹೋವ ದೇವರು ಮನುಷ್ಯನಿಗೆ, “ನೀನು ತೋಟದ ಎಲ್ಲಾ ಮರಗಳ ಹಣ್ಣುಗಳನ್ನು ನಿನ್ನ ಇಷ್ಟಾನುಸಾರವಾಗಿ ತಿನ್ನಬಹುದು.


ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


ಏಕೆಂದರೆ ಅವರು ಬಾಳನಿಗಾಗಿ ಉಪಯೋಗಿಸಿದ ಧಾನ್ಯ, ದ್ರಾಕ್ಷಾರಸ ಹಾಗೂ ಎಣ್ಣೆಯನ್ನು ನಾನೇ ಅವಳಿಗೆ ಕೊಟ್ಟು, ಬೆಳ್ಳಿಬಂಗಾರವನ್ನು ನಾನೇ ಧಾರಾಳವಾಗಿ ಹೆಚ್ಚಿಸಿದೆನೆಂದು ಅವಳು ತಿಳಿಯಲಿಲ್ಲ.


ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿರುವುವು. ರೊಟ್ಟಿಯು ಅವನಿಗೆ ಒದಗುವುದು. ನೀರು ತಪ್ಪುವುದಿಲ್ಲ.


ಅವರು ದಬ್ಬಾಳಿಕೆಯಾದ ನ್ಯಾಯತೀರಿಸುತ್ತಾರೆ, ಹಸಿದವರಿಗೆ ಆಹಾರವನ್ನು ಕೊಡುತ್ತಾರೆ. ಯೆಹೋವ ದೇವರು ಸೆರೆಯವರನ್ನು ಬಿಡಿಸುತ್ತಾರೆ.


ಉನ್ನತ ಆಕಾಶಗಳು ಯೆಹೋವ ದೇವರದೇ, ಆದರೆ ಅವರು ಭೂಮಿಯನ್ನು ಮಾನವರಿಗೆ ಕೊಟ್ಟಿದ್ದಾರೆ.


ಅವರು ತಮಗೆ ಭಯಪಡುವವರಿಗೆ ಆಹಾರ ಕೊಟ್ಟಿದ್ದಾರೆ; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವರು.


ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ತಿಳಿದುಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವುದಕ್ಕೋಸ್ಕರ ದೇವರು ಸೃಷ್ಟಿಸಿದ ಆಹಾರವನ್ನು ತಿನ್ನಬಾರದೆಂತಲೂ ಆಜ್ಞಾಪಿಸುತ್ತಾರೆ.


ನೀನು, ಎಲ್ಲ ವಿಧವಾದ ಆಹಾರ ಪದಾರ್ಥಗಳನ್ನು ಕೂಡಿಸಿಡಬೇಕು. ಅದು ನಿಮಗೂ ಮತ್ತು ಪ್ರಾಣಿಗಳಿಗೂ ಆಹಾರವಾಗಿರಬೇಕು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು