Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:6 - ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು, “ಇವರಿಗೆ ಒಂದೇ ಜನಾಂಗವೂ ಒಂದೇ ಭಾಷೆಯೂ ಇದೆ. ಇವರು ಇದನ್ನು ಮಾಡಲಾರಂಭಿಸಿದ್ದಾರೆ. ಈಗ ಇನ್ನು ಮುಂದೆ ಇವರು ಮಾಡುವುದಕ್ಕೆ ಉದ್ದೇಶಿಸುವುದು ಇವರಿಗೆ ಅಸಾಧ್ಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೋಡಿದ ಮೇಲೆ, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಇದು ಇವರು ಕೈಗೊಂಡಿರುವ ಕಾರ್ಯದ ಪ್ರಾರಂಭ ಮಾತ್ರ. ಮುಂದಕ್ಕೆ ಇವರು ಏನು ಬೇಕಾದರೂ ಮಾಡಿಯಾರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೋಡಿದ ಮೇಲೆ ಆತನು - ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇಷ್ಟು ದೊಡ್ಡ ಕೆಲಸ ಮಾಡುವವರಾಗಿರಲು ಮುಂದೆ ಏನು ಆಲೋಚಿಸಿದರೂ ಇವರಿಗೆ ಅಸಾಧ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು, “ಈ ಜನರೆಲ್ಲರು ಒಂದೇ ಭಾಷೆಯನ್ನು ಮಾತಾಡುವುದರಿಂದ ಒಟ್ಟಾಗಿ ಸೇರಿಕೊಂಡಿದ್ದಾರೆ. ಪ್ರಾರಂಭದಲ್ಲೇ ಇಂಥ ಕಾರ್ಯವನ್ನು ಮಾಡುತ್ತಿರುವ ಇವರು ಮುಂದೆ ಏನು ಬೇಕಾದರೂ ಮಾಡಲು ಶಕ್ತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:6
12 ತಿಳಿವುಗಳ ಹೋಲಿಕೆ  

ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ತಿಳಿದು, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.


ಆ ಕಾಲದಲ್ಲಿ ಭೂಲೋಕದಲ್ಲೆಲ್ಲಾ ಒಂದೇ ಭಾಷೆಯಿತ್ತು. ಭಾಷಾಭೇದವೇನೂ ಇರಲಿಲ್ಲ.


ದೇವರು ತಮ್ಮ ಭುಜಪರಾಕ್ರಮವನ್ನು ಮಾಡಿ; ಹೃದಯದ ಯೋಚನೆಯಲ್ಲಿ ಗರ್ವಿಷ್ಠರಾದವರನ್ನು ಚದರಿಸಿಬಿಟ್ಟಿದ್ದಾರೆ.


ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.


ಮನುಷ್ಯನ ದುಷ್ಟತನವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ಈ ಮೂವರು ನೋಹನ ಮಕ್ಕಳು; ಭೂಮಿಯ ಮೇಲೆ ಚೆದರಿದ ಎಲ್ಲ ಜನರು ಇವರಿಂದಲೇ ಉತ್ಪತ್ತಿಯಾದರು.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.


ನೀವು ಹೋಗಿ ನಿಮಗೆ ನೀವೇ ಆಯ್ದುಕೊಂಡ ದೇವರುಗಳಿಗೆ ಕೂಗಿರಿ, ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ,” ಎಂದರು.


ಮಧ್ಯಾಹ್ನದಲ್ಲಿ ಎಲೀಯನು ಅವರನ್ನು ಗೇಲಿಮಾಡಿ ಅವರಿಗೆ, “ದೊಡ್ಡ ಶಬ್ದದಿಂದ ಕೂಗಿರಿ, ಏಕೆಂದರೆ ಅವನು ಒಬ್ಬ ದೇವರಲ್ಲವೇ? ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವುದೋ ಕೆಲಸದಲ್ಲಿರಬಹುದು; ಇಲ್ಲವೆ ಪ್ರಯಾಣದಲ್ಲಿದ್ದಾನೆ; ಇಲ್ಲವೆ ಅವನು ನಿದ್ದೆಯಲ್ಲಿದ್ದಾನೆ; ಈಗ ಅವನು ಎಚ್ಚರವಾಗಬೇಕು,” ಎಂದನು.


“ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು