Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:7 - ಕನ್ನಡ ಸಮಕಾಲಿಕ ಅನುವಾದ

7 ನಾವು ಇಳಿದು ಹೋಗಿ, ಇವರು ಒಬ್ಬರ ಮಾತನ್ನು ಒಬ್ಬರು ತಿಳಿಯದಂತೆ, ಇವರ ಭಾಷೆಯನ್ನು ಗಲಿಬಿಲಿ ಮಾಡೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾವು ಹೋಗಿ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿಗೊಳಿಸೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾವು ಇಳಿದು ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ತಾರುಮಾರುಮಾಡೋಣ ಬನ್ನಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ನಾವು ಕೆಳಗೆ ಹೋಗಿ ಅವರ ಭಾಷೆಯನ್ನು ತಾರುಮಾರು ಮಾಡೋಣ; ಆಗ ಅವರು ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:7
20 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.


ಯೆಹೋವ ದೇವರೇ, ದುಷ್ಟರನ್ನು ಕಳವಳಗೊಳಿಸಿರಿ, ಅವರ ಮಾತುಗಳನ್ನು ನಿಲ್ಲಿಸಿಬಿಡಿರಿ. ಬಲಾತ್ಕಾರವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ಕಾಣುತ್ತಿದ್ದೇನೆ.


ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.


ಆದಕಾರಣ ಸಭೆಯೆಲ್ಲವೂ ಕೂಡಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ, ಅಜ್ಞಾನಿಗಳು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು, ನೀವು ಹುಚ್ಚರೆಂದು ಹೇಳುವುದಿಲ್ಲವೇ?


ಯೆಹೋವ ದೇವರು ಹೀಗೆ ಹೇಳುತ್ತಾರೆ, “ಓ ಇಸ್ರಾಯೇಲ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆ. ಅದು ಬಲವಾದ ಜನಾಂಗವು. ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.


ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು, ಕರ್ತದೇವರು ಅವರನ್ನು ಕಂಡು ಅಪಹಾಸ್ಯ ಮಾಡುವರು.


ದೇವರು ವಿಶ್ವಾಸಾರ್ಹ ಸಲಹೆಗಾರರನ್ನು ಮೌನಗೊಳಿಸುತ್ತಾರೆ; ವೃದ್ಧರ ವಿವೇಚನೆಯನ್ನು ತೆಗೆದುಬಿಡುತ್ತಾರೆ.


ಯೆಹೋವ ದೇವರು ದೂರದಿಂದ ಅಂದರೆ, ಭೂಮಿಯ ಕೊನೆಯಿಂದ ರಣಹದ್ದು ಹೇಗೆ ಹಾರಿಬರುವುದೋ ಹಾಗೆಯೇ, ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವನ್ನು ನಿಮ್ಮ ಮೇಲೆ ಬರುವಂತೆ ಮಾಡುವರು.


ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ,” ಎಂದೆನು.


ಆದರೆ ಯೋಸೇಫನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಿದ್ದನು ಎಂಬುದು ಅವರಿಗೆ ಗೊತ್ತಾಗಲಿಲ್ಲ. ಏಕೆಂದರೆ ಯೋಸೇಫನು ಅನುವಾದಕನ ಮುಖಾಂತರ ಅವರ ಸಂಗಡ ಮಾತಾಡುತ್ತಿದ್ದನು.


ಜನರು ಕಟ್ಟುತ್ತಿದ್ದ ಪಟ್ಟಣವನ್ನೂ ಗೋಪುರವನ್ನೂ ನೋಡುವುದಕ್ಕೆ ಯೆಹೋವ ದೇವರು ಇಳಿದು ಬಂದರು.


ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ, ತಮ್ಮ ಸೀಮೆ ಹಾಗು ದೇಶಗಳಲ್ಲಿಯೂ ಇರುವ ಹಾಮನ ಪುತ್ರರು.


ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ತಿಳಿದು, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.


ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರವಾಗಿ ನೋಹನ ಪುತ್ರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ಹರಡಿಕೊಂಡವು.


ಇವರಿಂದ ಕಡಲತೀರದ ಹಾಗೂ ದ್ವೀಪಗಳ ನಿವಾಸಿಯರು ತಮ್ಮ ಸ್ವಂತ ದೇಶ, ಭಾಷೆ, ಕುಲ ಜನಾಂಗಗಳ ಪ್ರಕಾರ ಹರಡುತ್ತಿದ್ದರು.


ಅದಕ್ಕೆ ಯೆಹೋವ ದೇವರು ಅವನಿಗೆ, “ಮನುಷ್ಯರಿಗೆ ಬಾಯಿ ಕೊಟ್ಟಾತನೂ ಯಾರು? ಮೂಕರನ್ನೂ ಕಿವುಡರನ್ನೂ ಮಾಡಿದಾತನೂ ಯಾರು? ದೃಷ್ಟಿಯುಳ್ಳವರನ್ನೂ ದೃಷ್ಟಿಯಿಲ್ಲದವರನ್ನೂ ಮಾಡಿದಾತನೂ ಯಾರು? ಯೆಹೋವ ದೇವರಾದ ನಾನೇ ಅಲ್ಲವೋ?


ನೀನು ತಿಳಿಯಲಾಗದ ಹಾಗೆ ಕಠಿಣ ಭಾಷೆಯೂ, ಗ್ರಹಿಸಲಾಗದ ಹಾಗೆ ಅಪರೂಪವಾದ ಮಾತನ್ನು ಆಡಿದ ಜನರನ್ನೂ ಇನ್ನು ಮುಂದೆ ನೀನು ನೋಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು