Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಅಬ್ರಾಮನಿಗೆ ಹೀಗೆ ಹೇಳಿದರು, “ನೀನು ನಿನ್ನ ಸ್ವದೇಶದಿಂದಲೂ ಬಂಧುಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರಬಂದು, ನಾನು ನಿನಗೆ ತೋರಿಸುವ ನಾಡಿಗೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ‍ಸ್ವಾಮಿ ಅಬ್ರಾಮನಿಗೆ ಹೀಗೆಂದರು - “ನೀನು ನಿನ್ನ ಸ್ವಂತ ನಾಡನ್ನೂ ಬಂಧುಬಳಗದವರನ್ನೂ ತವರು ಮನೆಯನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೊರಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಅಬ್ರಾಮನಿಗೆ - ನೀನು ಸ್ವದೇಶವನ್ನೂ ಬಂಧು ಬಳಗವನ್ನೂ ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಅಬ್ರಾಮನಿಗೆ, “ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ಹೊರಡು. ನಿನ್ನ ತಂದೆಯ ಕುಟುಂಬವನ್ನು ಬಿಟ್ಟು ನಾನು ತೋರಿಸುವ ದೇಶಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:1
20 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


“ನೀವು ಅಬ್ರಾಮನನ್ನು ಆಯ್ದುಕೊಂಡಿರುವ ಯೆಹೋವ ದೇವರು. ನೀವು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ, ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟಿರಿ.


ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ನಾನು ಅವನನ್ನು ಕರೆದಾಗ ಅವನು ಒಬ್ಬನೇ ಮನುಷ್ಯ, ನಾನು ಅವನನ್ನು ಆಶೀರ್ವದಿಸಿ, ವೃದ್ಧಿಗೊಳಿಸಿದೆನು.


ದೇವರು ಅವನಿಗೆ, “ಈ ದೇಶವನ್ನು ಸೊತ್ತಾಗಿ ನಿನಗೆ ಕೊಡಲು, ಕಸ್ದೀಯರ ಊರ್ ಎಂಬ ಪ್ರದೇಶದಿಂದ ನಿನ್ನನ್ನು ಹೊರಗೆ ತಂದ ಯೆಹೋವ ದೇವರು ನಾನೇ,” ಎಂದು ಹೇಳಿದರು.


“ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು ಹೀಗೆ ಹೇಳುತ್ತಾರೆ, ‘ಅಬ್ರಹಾಮನು ಒಬ್ಬೊಂಟಿಗನಾಗಿದ್ದರೂ ಈ ದೇಶ ಅವನಿಗೆ ಸೊತ್ತಾಗಿ ಸಿಕ್ಕಿತು. ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸೊತ್ತಾಗಿ ಕೊಡಲಾಗಿದೆ,’ ಎಂದು ಹೇಳುತ್ತಾರೆ.


ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ನಿನ್ನನ್ನು ಭೂಮಿಯ ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ದೂರದ ಕೊನೆಯಿಂದ ಕರೆದು, ‘ನೀನು ನನ್ನ ಸೇವಕನು,’ ನಿನ್ನನ್ನು ನಾನು ಆಯ್ದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವುದಿಲ್ಲ.


ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “ ‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’


ದೇವರು ನನ್ನ ತಂದೆಯ ಮನೆಯೊಳಗಿಂದ ನನ್ನನ್ನು ದೇಶಾಂತರಕ್ಕೆ ಕರೆದಾಗ, ನಾನು ಅವಳಿಗೆ, ನೀನು ನನಗೆ ತೋರಿಸತಕ್ಕ ದಯೆಯು ಯಾವುದೆಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ, ‘ಇವನು ನನ್ನ ಅಣ್ಣ,’ ಎಂದು ಹೇಳು ಎಂದು ತಿಳಿಸಿದೆನು,” ಎಂದನು.


ನನ್ನ ದೇಶಕ್ಕೂ, ಬಂಧುಗಳ ಬಳಿಗೂ ಹೋಗಿ ನನ್ನ ಮಗ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಂಡು ಬರುತ್ತೇನೆಂದು ಪರಲೋಕದ ಮತ್ತು ಭೂಲೋಕದ ದೇವರಾಗಿರುವ ಯೆಹೋವ ದೇವರ ಮೇಲೆ ನೀನು ನನಗೆ ಪ್ರಮಾಣಮಾಡಬೇಕು,” ಎಂದನು.


ಆಗ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ಈಜಿಪ್ಟಿಗೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.


ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?


ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು.


ಆದರೆ ನೀನು ನನ್ನ ತಂದೆಯ ಮನೆಗೂ, ನನ್ನ ಬಂಧುಗಳ ಬಳಿಗೂ ಹೋಗಿ, ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬೇಕೆಂದು,’ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದಾನೆ.


ಆಗ ಅವನು ಅವನಿಗೆ, “ನಾನು ಬರುವುದಿಲ್ಲ. ನನ್ನ ದೇಶಕ್ಕೂ ನನ್ನ ಬಂಧುಗಳ ಬಳಿಗೂ ನಾನು ಹೋಗುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು