Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ, ಅಬ್ರಾಮನು ಈಜಿಪ್ಟಿನಲ್ಲಿ ಕೆಲವು ಸಮಯ ಇರಲು ಇಳಿದು ಹೋದನು. ಏಕೆಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕಾನಾನ್ ನಾಡಿನಲ್ಲಿ ಕ್ಷಾಮ ತಲೆದೋರಿತು. ಅದು ಘೋರವಾಗಿದ್ದುದರಿಂದ ಅಬ್ರಾಮನು ಕೆಲವು ಕಾಲ ಈಜಿಪ್ಟಿನಲ್ಲಿರಲು ಅಲ್ಲಿಗೆ ಇಳಿದುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ದೇಶದಲ್ಲಿ ಘೋರ ಕ್ಷಾಮವಿದ್ದದರಿಂದ ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಕಾಲದಲ್ಲಿ ಭೂಮಿಯು ಒಣಗಿಹೋಗಿತ್ತು; ಮಳೆ ಇರಲಿಲ್ಲ. ಅಲ್ಲಿ ಆಹಾರವನ್ನು ಬೆಳೆಯಲು ಸಾಧ್ಯವಿರಲಿಲ್ಲ. ಆದ್ದರಿಂದ ಅಬ್ರಾಮನು ವಾಸಿಸುವುದಕ್ಕಾಗಿ ಈಜಿಪ್ಟಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:10
21 ತಿಳಿವುಗಳ ಹೋಲಿಕೆ  

ದೇಶದಲ್ಲಿ ಬರವು ಘೋರವಾಗಿತ್ತು.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


“ಆ ಕಾಲದಲ್ಲಿ ಈಜಿಪ್ಟ್ ಮತ್ತು ಕಾನಾನ್ ದೇಶಗಳ ಎಲ್ಲಾ ಕಡೆಗಳಲ್ಲಿಯೂ ಕ್ಷಾಮ ಬಂದು ಜನರು ಬಹಳ ಬಾಧೆಪಟ್ಟರು, ನಮ್ಮ ಪಿತೃಗಳಿಗೆ ಆಹಾರ ದೊರೆಯದೇ ಹೋಯಿತು.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ಕ್ಷಾಮವನ್ನು ಕುರಿತು ಯೆರೆಮೀಯನಿಗೆ ಉಂಟಾದ ಯೆಹೋವ ದೇವರ ವಾಕ್ಯವು:


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋಗುತ್ತಿದ್ದರು.


ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಯೆಹೋವ ದೇವರು ಅವನನ್ನು ಬಿಡಿಸುತ್ತಾರೆ.


ಆಗ ಸಮಾರ್ಯದಲ್ಲಿ ದೊಡ್ಡ ಬರವಿತ್ತು. ಒಂದು ಕತ್ತೆಯ ತಲೆಯು ಎಂಬತ್ತು ಶೆಕೆಲ್ ಬೆಳ್ಳಿಗೆ, ಸುಮಾರು ನೂರು ಗ್ರಾಂ ಪಾರಿವಾಳದ ಗೊಬ್ಬರವನ್ನು ಐದು ಶೆಕೆಲ್ ಬೆಳ್ಳಿಗೆ ಮಾರಲಾಗುವವರೆಗೂ ಅದನ್ನು ಮುತ್ತಿಗೆಹಾಕಿದನು.


ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು.


ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.


ನ್ಯಾಯಸ್ಥಾಪಕರು ಆಳುತ್ತಿದ್ದ ಆ ದಿನಗಳಲ್ಲಿ ಇಸ್ರಾಯೇಲ್ ದೇಶದೊಳಗೆ ಬರ ಉಂಟಾಗಿದ್ದಾಗ, ಯೆಹೂದದ ಬೇತ್ಲೆಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ತನ್ನ ಇಬ್ಬರು ಪುತ್ರರೊಂದಿಗೆ ಮೋವಾಬ್ ದೇಶದಲ್ಲಿ ಸ್ವಲ್ಪ ಕಾಲ ವಾಸಮಾಡಬೇಕೆಂದು ಹೋದನು.


ಆದರೆ ಬರವು ಅತಿ ಘೋರವಾಗಿದ್ದದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಈಜಿಪ್ಟ್ ದೇಶವೂ, ಕಾನಾನ್ ದೇಶವೂ ಕ್ಷಾಮದಿಂದ ಕ್ಷೀಣವಾದವು.


ಕಾನಾನ್ ದೇಶದಲ್ಲಿ ಬರವಿದ್ದುದರಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಬರುವವರೊಂದಿಗೆ ಇಸ್ರಾಯೇಲನ ಪುತ್ರರೂ ಬಂದರು.


ಇದಲ್ಲದೆ ಭೂಮಿಯ ಮೇಲೆಲ್ಲಾ ಬರಗಾಲವು ಕಠಿಣವಾಗಿದ್ದದರಿಂದ, ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಈಜಿಪ್ಟಿಗೆ ಬರುತ್ತಿದ್ದರು.


ಈಜಿಪ್ಟಿನಲ್ಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಈಜಿಪ್ಟಿನವರಿಗೆ ಮಾರಿದನು. ಆಗ ಬರವು ಈಜಿಪ್ಟ್ ದೇಶದಲ್ಲಿ ಕಠಿಣವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು