Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:18 - ಕನ್ನಡ ಸಮಕಾಲಿಕ ಅನುವಾದ

18 ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರ ಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರಹಾಕಿಸಿಕೊಳ್ಳುತ್ತಾ ಹೆಬ್ರೋನಿನಲ್ಲಿರುವ ಮಮ್ರೆ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:18
17 ತಿಳಿವುಗಳ ಹೋಲಿಕೆ  

ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ಅಬ್ರಹಾಮನೂ, ಇಸಾಕನೂ ಪ್ರವಾಸಿಗರಾಗಿ ವಾಸವಾಗಿದ್ದ ಹೆಬ್ರೋನ್ ಎಂಬ ಕಿರ್ಯತ್ ಅರ್ಬ ಪಟ್ಟಣಕ್ಕೆ ಬಂದನು.


ಯೆಹೋವ ದೇವರು ಮಮ್ರೆಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡರು. ಹಗಲಿನ ಬಿಸಿಲಿನಲ್ಲಿ ಅವನು ಡೇರೆಯ ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.


ತಪ್ಪಿಸಿಕೊಂಡವನೊಬ್ಬನು ಹೋಗಿ ಹಿಬ್ರಿಯನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಆಗ ಅಬ್ರಾಮನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದ ಅಮೋರಿಯನಾದ ಮಮ್ರೆಯನ ತೋಪಿನಲ್ಲಿ ವಾಸವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.


ನೋಹನು ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಶುದ್ಧವಾದ ಪ್ರತಿ ಪಶುಗಳಿಂದಲೂ ಶುದ್ಧವಾದ ಪ್ರತಿ ಪಕ್ಷಿಗಳಿಂದಲೂ ಕೆಲವೊಂದನ್ನು ಆಯ್ದುಕೊಂಡು, ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.


ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು.


ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು.


ಯಾಕೋಬನು ಅವನಿಗೆ, “ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ, ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು,” ಎಂದು ಹೇಳಿ ಹೆಬ್ರೋನ್ ಕಣಿವೆಯಿಂದ ಕಳುಹಿಸಿದನು. ಯೋಸೇಫನು ಶೆಕೆಮಿಗೆ ಬಂದಾಗ,


ಅಲ್ಲಿ ಅಬ್ರಾಮನು ಯೆಹೋವ ದೇವರ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ಆಗ ಯೆಹೋಶುವನು ಯೆಫುನ್ನೆಯ ಮಗ ಕಾಲೇಬನನ್ನು ಆಶೀರ್ವದಿಸಿ, ಅವನಿಗೆ ಹೆಬ್ರೋನನ್ನು ಸೊತ್ತಾಗಿ ಕೊಟ್ಟನು.


ಅವಳು ಕಾನಾನ್ ದೇಶದಲ್ಲಿರುವ ಹೆಬ್ರೋನಿನಲ್ಲಿ ಅಂದರೆ ಕಿರ್ಯತ್ ಅರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡಿದನು.


ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗಲೂ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರು ಸಹ ಗುಡಾರಗಳಲ್ಲಿ ವಾಸಿಸಿದರು.


ದೇವರು ಅವನಿಗೆ ಹೇಳಿದ ಸ್ಥಳಕ್ಕೆ ಬಂದಾಗ, ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ, ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ, ತನ್ನ ಮಗ ಇಸಾಕನನ್ನು ಕಟ್ಟಿ, ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.


ಆಗ ಇಸಾಕನು ಅಲ್ಲಿ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಹೇಳಿಕೊಂಡು, ತನ್ನ ಗುಡಾರವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗೆದರು.


ಇದಲ್ಲದೆ ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರ ಯೆಫುನ್ನೆಯ ಮಗ ಕಾಲೇಬನಿಗೆ ಅನಾಕನ ತಂದೆಯ ಕಿರ್ಯತ್ ಅರ್ಬ ಎಂಬ ಹೆಬ್ರೋನನ್ನು ಯೆಹೂದನ ಮಕ್ಕಳ ನಡುವೆ ಸೊತ್ತಾಗಿ ಕೊಟ್ಟನು.


ಇದಾದ ಮೇಲೆ ದಾವೀದನು ಯೆಹೋವ ದೇವರನ್ನು, “ಯೆಹೂದದ ಪಟ್ಟಣಗಳಲ್ಲಿ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಿದನು. ಯೆಹೋವ ದೇವರು ಅವನಿಗೆ, “ಹೋಗು,” ಎಂದರು. ಅದಕ್ಕವನು, “ನಾನು ಎಲ್ಲಿಗೆ ಹೋಗಲಿ?” ಎಂದನು. ಅದಕ್ಕೆ ದೇವರು, “ಹೆಬ್ರೋನಿಗೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು