Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:4 - ಕನ್ನಡ ಸಮಕಾಲಿಕ ಅನುವಾದ

4 ಅಲ್ಲಿ ಅಬ್ರಾಮನು ಯೆಹೋವ ದೇವರ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬೇತೇಲಿಗೂ ಆಯಿ ಎಂಬ ಊರಿಗೂ ನಡುವೆ ತಾನು ಹಿಂದೆ ಗುಡಾರ ಹಾಕಿ ಬಲಿಪೀಠವನ್ನು ಕಟ್ಟಿದ ಕ್ಷೇತ್ರವನ್ನು ತಲುಪಿದನು. ಅಲ್ಲಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬೇತೇಲಿಗೂ ಆಯಿ ಎಂಬ ಊರಿಗೂ ನಡುವೆ ತಾನು ಪೂರ್ವದಲ್ಲಿ ಗುಡಾರಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಕ್ಷೇತ್ರಕ್ಕೆ ತಿರಿಗಿ ಬಂದು ಅಲ್ಲಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಬ್ರಾಮನು ಯಜ್ಞವೇದಿಕೆಯನ್ನು ಕಟ್ಟಿದ್ದು ಈ ಸ್ಥಳದಲ್ಲೇ. ಅಬ್ರಾಮನು ಯೆಹೋವನನ್ನು ಆರಾಧಿಸಿದ್ದು ಈ ಸ್ಥಳದಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:4
21 ತಿಳಿವುಗಳ ಹೋಲಿಕೆ  

ಆಗ ನನ್ನನ್ನು ಕರೆಯುವಿರಿ. ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ. ನಾನು ನಿಮಗೆ ಕಿವಿಗೊಡುವೆನು.


ಆಗ ನೀನು ಕರೆದರೆ ಯೆಹೋವ ದೇವರು ಉತ್ತರಕೊಡುವರು. ನೀನು ಕೂಗುವೆ, ಆಗ ಅವರು, ‘ನಾನು ಇಲ್ಲಿ ಇದ್ದೇನೆ,’ ಅನ್ನುವರು. “ನೀನು ನಿನ್ನ ಮಧ್ಯದೊಳಗಿಂದ ದಬ್ಬಾಳಿಕೆಯ ನೊಗವನ್ನೂ, ಬೆರಳ ಸನ್ನೆಯನ್ನೂ, ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,


“ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು. ಅವರೆಲ್ಲರೂ ಯೆಹೋವ ದೇವರ ಹೆಸರಿನಿಂದ ಮೊರೆಯಿಡುವರು. ಏಕಮನಸ್ಸಿನಿಂದ ಆತನಿಗೆ ಸೇವೆಮಾಡುವರು.


ಅವರು ನನ್ನ ಸ್ವರಕ್ಕೆ ಕಿವಿಗೊಟ್ಟಿದ್ದರಿಂದ ನನ್ನ ಜೀವಮಾನಕಾಲವೆಲ್ಲಾ ಅವರನ್ನು ಬೇಡುವೆನು.


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ, ಅವರು ಅವರಿಗೆ ಸಮೀಪವಾಗಿದ್ದಾರೆ.


ನಾನು ನಿಮಗೆ ಕೃತಜ್ಞತೆಯ ಬಲಿಯನ್ನು ಅರ್ಪಿಸುವೆನು; ಯೆಹೋವ ದೇವರ ಹೆಸರನ್ನು ಕರೆಯುವೆನು.


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ದೇವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


ಯೆಹೋವ ದೇವರನ್ನು ಕೊಂಡಾಡಿರಿ, ಅವರು ಒಳ್ಳೆಯವರು; ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.


ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರ ಉಪಕಾರಮಾಡಲಿ, ಮಾನವರಿಗೆ ದೇವರು ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ, ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ.


ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.


ಸೇತನಿಗೆ ಒಬ್ಬ ಮಗನು ಹುಟ್ಟಿದನು. ಅವನಿಗೆ ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು, ಯೆಹೋವ ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದರು.


ಆಗ ಇಸಾಕನು ಅಲ್ಲಿ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಹೇಳಿಕೊಂಡು, ತನ್ನ ಗುಡಾರವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು