Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಬೇರೆ. ಇದೂ ಅಲ್ಲದೆ, ಆ ಕಾಲದಲ್ಲಿ ಕಾನಾನ್ಯರೂ ಪೆರಿಜೀಯರೂ ಅದೇ ನಾಡಿನಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದರಿಂದ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಹುಟ್ಟಿತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಬ್ರಾಮನ ಮಂದೆಕಾಯುವವರು ಮತ್ತು ಲೋಟನ ಮಂದೆಕಾಯುವವರು ವಾದ ಮಾಡಲಾರಂಭಿಸಿದರು. ಆ ಕಾಲದಲ್ಲಿ ಕಾನಾನ್ಯರು ಮತ್ತು ಪೆರಿಜೀಯರು ಸಹ ಆ ಸ್ಥಳದಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:7
20 ತಿಳಿವುಗಳ ಹೋಲಿಕೆ  

ಗೆರಾರಿನ ಮಂದೆಯನ್ನು ಮೇಯಿಸುವವರು, “ಈ ನೀರು ನಮ್ಮದು,” ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ, ಏಸೆಕ್, ಎಂದು ಹೆಸರಿಟ್ಟನು.


ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆ ಎಂಬ ಮಹಾವೃಕ್ಷದವರೆಗೆ ಪ್ರಯಾಣಮಾಡಿದನು. ಆಗ ಕಾನಾನ್ಯರು ಆ ದೇಶದಲ್ಲಿ ಇದ್ದರು.


ಏಕೆಂದರೆ ನಿಮ್ಮಲ್ಲಿ ಹೊಟ್ಟೆಕಿಚ್ಚೂ ಸ್ವಾರ್ಥ ಉದ್ದೇಶವೂ ಇರುವಲ್ಲಿ ಗಲಿಬಿಲಿಯೂ ಸಕಲ ವಿಧವಾದ ಕೆಟ್ಟ ಅಭ್ಯಾಸವೂ ಇರುತ್ತವೆ.


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ?


ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,


ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ.


ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಂಡು ಹೊರಗಿನವರೊಂದಿಗೆ ಜಾಣತನದಿಂದ ನಡೆದುಕೊಳ್ಳಿರಿ.


ಏಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ಹೇಗೆಂದರೆ, ನಿಮ್ಮೊಳಗೆ ಅಸೂಯೆ, ಜಗಳಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದೀರಲ್ಲದೆ ಕೇವಲ ಮಾನವರಂತೆ ನಡೆಯುತ್ತೀರಲ್ಲವೇ?


ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ.


ಕುರುಬರು ಬಂದು ಅವರನ್ನು ಅಲ್ಲಿಂದ ಓಡಿಸಲು, ಮೋಶೆಯು ಎದ್ದು ಬಂದು ಅವರಿಗೆ ಸಹಾಯಮಾಡಿ, ಅವರ ಕುರಿಗಳಿಗೆ ನೀರು ಕುಡಿಸಿದನು.


ಅಬೀಮೆಲೆಕನ ಸೇವಕರು ಬಲಾತ್ಕಾರದಿಂದ ತೆಗೆದುಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಿದನು.


ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.


ನೀವು ಅವನಿಗೆ, ‘ಚಿಕ್ಕಂದಿನಿಂದ ಇಂದಿನವರೆಗೂ ನಿನ್ನ ದಾಸರಾದ ನಾವೂ ನಮ್ಮ ಪೂರ್ವಿಕರೂ ಪಶುಗಳನ್ನು ಕಾಯುವವರಾಗಿದ್ದೇವೆ,’ ಎಂದು ಹೇಳಬೇಕು. ಏಕೆಂದರೆ ಕುರಿ ಕಾಯುವವರೆಲ್ಲಾ ಈಜಿಪ್ಟಿನವರಿಗೆ ಅಸಹ್ಯವಾಗಿದ್ದರಿಂದ, ನೀವು ಗೋಷೆನ್ ಪ್ರಾಂತದಲ್ಲಿ ವಾಸವಾಗಿರುವಂತೆ ನೇಮಿಸುವನು,” ಎಂದನು.


ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು; ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ.


ಒಂದು ಕುಟುಂಬ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ಕುಟುಂಬವು ನಿಲ್ಲುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು