Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:9 - ಕನ್ನಡ ಸಮಕಾಲಿಕ ಅನುವಾದ

9 ದೇಶವೆಲ್ಲಾ ನಿನ್ನ ಮುಂದೆ ಇರುತ್ತದೆಯಲ್ಲವೆ? ನಾವು ಪ್ರತ್ಯೇಕವಾಗೋಣ. ನೀನು ಎಡಕ್ಕೆ ಹೋದರೆ, ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ, ನಾನು ಎಡಕ್ಕೆ ಹೋಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾಡೆಲ್ಲಾ ನಿನ್ನ ಕಣ್ಮುಂದಿದೆ. ದಯವಿಟ್ಟು ನನ್ನನ್ನು ಬಿಟ್ಟು ಬೇರೆ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುತ್ತೇನೆ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇಶವೆಲ್ಲಾ ನಿನ್ನೆದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಪ್ರತ್ಯೇಕವಾಗೋಣ. ನಿನಗೆ ಬೇಕಾದ ಸ್ಥಳವನ್ನು ನೀನು ಆರಿಸಿಕೊ. ನೀನು ಎಡಗಡೆಗೆ ಹೋಗುವುದಾದರೆ, ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋಗುವುದಾದರೆ, ನಾನು ಎಡಗಡೆಗೆ ಹೋಗುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:9
11 ತಿಳಿವುಗಳ ಹೋಲಿಕೆ  

ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.


ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ. ದೇಶವು ನಿಮ್ಮ ಮುಂದೆ ಇದೆ. ನೀವು ಅದರಲ್ಲಿ ವಾಸಿಸಿ, ಅದರಲ್ಲಿ ವ್ಯಾಪಾರಮಾಡಿ, ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ,” ಎಂದನು.


ಅಬೀಮೆಲೆಕನು, “ನನ್ನ ದೇಶವು ನಿನ್ನ ಮುಂದೆ ಇದೆ, ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು,” ಎಂದನು.


ನಿಮ್ಮ ನಿಮ್ಮಲ್ಲಿ ವ್ಯಾಜ್ಯವಿರುವುದೇ, ನೀವು ಈಗಾಗಲೇ ಸಂಪೂರ್ಣವಾಗಿ ಸೋತವರೆಂಬುದಕ್ಕೆ ಸೂಚನೆಗಳಾಗಿವೆ. ಆದರೆ ಅನ್ಯಾಯವನ್ನು ಏಕೆ ಸಹಿಸಬಾರದು? ಏಕೆ ಮೋಸಹೊಂದಬಾರದು?


ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ.


ನಾನು ಶಾಂತಿ ಪ್ರಿಯನು; ಆದರೆ ನಾನು ಮಾತಾಡಿದರೆ ಅವರು ಯುದ್ಧಕ್ಕೆ ಬರುತ್ತಾರೆ.


ಅಬ್ರಾಮನು ಲೋಟನಿಗೆ, “ನನಗೂ, ನಿನಗೂ; ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಿರಬಾರದು. ಏಕೆಂದರೆ ನಾವು ಬಳಗದವರು.


ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.


ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು