Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:13 - ಕನ್ನಡ ಸಮಕಾಲಿಕ ಅನುವಾದ

13 ತಪ್ಪಿಸಿಕೊಂಡವನೊಬ್ಬನು ಹೋಗಿ ಹಿಬ್ರಿಯನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಆಗ ಅಬ್ರಾಮನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದ ಅಮೋರಿಯನಾದ ಮಮ್ರೆಯನ ತೋಪಿನಲ್ಲಿ ವಾಸವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತಪ್ಪಿಸಿಕೊಂಡು ಓಡಿಹೋದವರಲ್ಲಿ ಒಬ್ಬ ವ್ಯಕ್ತಿ ಹಿಬ್ರಿಯನಾದ ಅಬ್ರಾಮನ ಬಳಿಗೆ ಬಂದು ನಡೆದುದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು. ಇವರಿಗೂ ಅಬ್ರಾಮನಿಗೂ ಒಪ್ಪಂದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತಪ್ಪಿಸಿಕೊಂಡವನೊಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಇದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನು ಎಷ್ಕೋಲ ಆನೇರರಿಗೆ ಸಹೋದರನು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ತಪ್ಪಿಸಿಕೊಂಡ ಒಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಹೋಗಿ ನಡೆದ ವಿಷಯವನ್ನೆಲ್ಲಾ ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆ, ಎಷ್ಕೋಲ ಮತ್ತು ಆನೇರ್ ಒಬ್ಬರಿಗೊಬ್ಬರು ಸಹಾಯಮಾಡಲು ಒಂದು ಒಪ್ಪಂದವನ್ನು ಮಾಡಿಕೊಂಡಿದ್ದರು. ಅಲ್ಲದೆ ಅಬ್ರಾಮನಿಗೂ ಸಹಾಯಮಾಡುವುದಾಗಿ ಒಂದು ಒಪ್ಪಂದಕ್ಕೆ ಸಹಿ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:13
23 ತಿಳಿವುಗಳ ಹೋಲಿಕೆ  

ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.


ನನ್ನ ಆಳುಗಳು ಊಟಮಾಡಿದ್ದು ಸಾಕು. ನನ್ನ ಸಂಗಡ ಬಂದ ಆನೇರ, ಎಷ್ಕೋಲ್ ಮತ್ತು ಮಮ್ರೆ ಎಂಬ ಈ ಜನರ ಪಾಲನ್ನು ಬಿಟ್ಟು ನಾನು ಏನನ್ನೂ ತೆಗೆದುಕೊಳ್ಳುವುದಿಲ್ಲ. ಇವರು ತಮ್ಮ ಪಾಲನ್ನು ತೆಗೆದುಕೊಳ್ಳಲಿ,” ಎಂದನು.


ಏಕೆಂದರೆ ನನ್ನನ್ನು ಹಿಬ್ರಿಯರ ದೇಶದೊಳಗಿಂದ ಹಿಡಿದು ತಂದಿದ್ದಾರೆ. ಇಲ್ಲಿಯೂ ಸಹ ನಾನು ಏನೂ ತಪ್ಪುಮಾಡದೆ ಇದ್ದರೂ ನನ್ನನ್ನು ಸೆರೆಯಲ್ಲಿ ಹಾಕಿದರು,” ಎಂದನು.


ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:


ಅವರು ಹೀಬ್ರಿಯರೋ? ನಾನೂ ಹೀಬ್ರಿಯನೇ. ಅವರು ಇಸ್ರಾಯೇಲರೋ? ನಾನೂ ಇಸ್ರಾಯೇಲನೇ. ಅವರು ಅಬ್ರಹಾಮನ ಸಂತತಿಯವರೋ? ನಾನೂ ಕೂಡಾ ಅಬ್ರಹಾಮನ ಸಂತತಿಯೇ.


ಅವನು ಅವರಿಗೆ, “ನಾನು ಹಿಬ್ರಿಯನು. ಸಮುದ್ರವನ್ನೂ, ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರಲೋಕದ ದೇವರಾದ ಯೆಹೋವ ದೇವರಿಗೆ ನಾನು ಆರಾಧಿಸುವವನಾಗಿದ್ದೇನೆ,” ಎಂದು ಹೇಳಿದನು.


ಶೆಬದವರು ಅವುಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಸೇವಕರನ್ನು ಸಹ ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ಅದೇ ದಿವಸದಲ್ಲಿ ಬೆನ್ಯಾಮೀನನಾದ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಯುದ್ಧರಂಗದಿಂದ ಶೀಲೋವಿಗೆ ಓಡಿಬಂದನು.


ಆಗ ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,


ಹಲವು ವರ್ಷಗಳ ನಂತರ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡಿದಾಗ, ಒಬ್ಬ ಈಜಿಪ್ಟಿನವನು ತನ್ನ ಸಹೋದರರಲ್ಲಿ ಒಬ್ಬ ಹಿಬ್ರಿಯನನ್ನು ಹೊಡೆಯುವುದನ್ನು ನೋಡಿದನು.


ಆ ಪೆಟ್ಟಿಗೆಯನ್ನು ತೆರೆದಾಗ, ಕೂಸನ್ನು ನೋಡಿದಳು. ಕೂಸು ಅಳುತ್ತಿತ್ತು. ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. ಅವಳು, “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದು ಹೇಳಿದಳು.


ಆಗ ಅವರು ಯೋಸೇಫನಿಗೆ, ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಈಜಿಪ್ಟಿನವರಿಗೂ ಬೇರೆಬೇರೆಯಾಗಿ ಊಟಕ್ಕೆ ಇಟ್ಟರು. ಏಕೆಂದರೆ ಈಜಿಪ್ಟಿನವರು ಹಿಬ್ರಿಯರ ಕೂಡ ಊಟಮಾಡುತ್ತಿರಲಿಲ್ಲ. ಅದು ಈಜಿಪ್ಟಿನವರಿಗೆ ಅಸಹ್ಯವಾಗಿತ್ತು.


ಮೈಗಾವಲಿನ ದಳಪತಿಗೆ ಸೇವಕನಾಗಿದ್ದ ಹಿಬ್ರಿಯ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ, ಅವನು ನಮ್ಮ ನಮ್ಮ ಕನಸಿನ ಅರ್ಥವನ್ನು ಹೇಳಿದನು.


ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು


ತನ್ನ ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನಮ್ಮನ್ನು ಅವಮಾನ ಮಾಡುವುದಕ್ಕೆ ಈ ಹಿಬ್ರಿಯನು ನಮ್ಮಲ್ಲಿಗೆ ಬಂದಿದ್ದಾನೆ. ಅವನು ನನ್ನ ಮೇಲೆ ಅತ್ಯಾಚಾರಮಾಡುವುದಕ್ಕೆ ನನ್ನ ಹತ್ತಿರ ಬಂದನು. ಆಗ ನಾನು ಗಟ್ಟಿಯಾಗಿ ಕೂಗಿದೆನು.


ಯೆಹೋವ ದೇವರು ಮಮ್ರೆಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡರು. ಹಗಲಿನ ಬಿಸಿಲಿನಲ್ಲಿ ಅವನು ಡೇರೆಯ ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.


ಆಗ ಅಬ್ರಹಾಮನು ಕುರಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು. ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.


ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂದಿರುಗಿದರು.


“ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.


ಅವರು ಎಷ್ಕೋಲ್ ಹಳ್ಳದವರೆಗೂ ಬಂದು, ಅಲ್ಲಿ ದ್ರಾಕ್ಷಿ ಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು, ಅದನ್ನು ಅಡ್ಡ ಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು. ಇದಲ್ಲದೆ ದಾಳಿಂಬೆ, ಅಂಜೂರ ಹಣ್ಣುಗಳನ್ನು ತೆಗೆದುಕೊಂಡು ಹೋದರು.


ಪ್ರತಿಯೊಬ್ಬರೂ ತಮ್ಮ ಗಂಡು ಮತ್ತು ಹೆಣ್ಣು ಹಿಬ್ರಿಯ ಗುಲಾಮರನ್ನು ಇಬ್ಬರನ್ನೂ ಮುಕ್ತಗೊಳಿಸಬೇಕು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಬಂಧನದಲ್ಲಿ ಇಟ್ಟುಕೊಳ್ಳಲಿಲ್ಲ.


ಅದಕ್ಕೆ ಅಬ್ರಹಾಮನು, “ನಾನು ಹಾಗೆಯೇ ಪ್ರಮಾಣ ಮಾಡುತ್ತೇನೆ,” ಎಂದನು.


ಆಗ ಫಿಲಿಷ್ಟಿಯರ ಅಧಿಪತಿಗಳು, “ಈ ಹಿಬ್ರಿಯರು ಏಕೆ?” ಎಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ, “ಇಸ್ರಾಯೇಲಿನ ಅರಸನಾದ ಸೌಲನ ದಾಸನಾದ ಈ ದಾವೀದನು ಇಷ್ಟು ದಿವಸಗಳೂ, ಇಷ್ಟು ವರ್ಷಗಳೂ ನನ್ನ ಸಂಗಡ ಇದ್ದಾನೆ? ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಅವನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು