Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:18 - ಕನ್ನಡ ಸಮಕಾಲಿಕ ಅನುವಾದ

18 ಸಾಲೇಮಿನ ಅರಸ ಮೆಲ್ಕಿಜೆದೇಕನು ರೊಟ್ಟಿ ಮತ್ತು ದ್ರಾಕ್ಷಾರಸವನ್ನು ತಂದನು. ಇವನು ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಾಲೇವಿುನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದು ಅಬ್ರಾಮನನ್ನು ಆಶೀರ್ವದಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸಾಲೇಮಿನ ರಾಜನಾದ ಮೆಲ್ಕೀಚೆದೆಕನು ಸಹ ಅಬ್ರಾಮನನ್ನು ಭೇಟಿಯಾಗಲು ಹೋದನು. ಮಹೋನ್ನತನಾದ ದೇವರ ಯಾಜಕನಾಗಿದ್ದ ಅವನು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:18
23 ತಿಳಿವುಗಳ ಹೋಲಿಕೆ  

ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ.


“ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು.


ದೇವರು ಇನ್ನೊಂದು ಸ್ಥಳದಲ್ಲಿ: “ನೀನು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಪ್ರಕಾರವಿರುವ ಯಾಜಕನು!” ಎಂದು ಹೇಳುತ್ತಾರೆ.


ಯೇಸು ದೇವರಿಂದ ನೇಮಕಗೊಂಡು, ಮೆಲ್ಕಿಜೆದೇಕನ ಕ್ರಮದ ಪ್ರಕಾರ ಮಹಾಯಾಜಕರಾದರು.


ಸಾಲೇಮಿನಲ್ಲಿ ದೇವರ ಗುಡಾರವೂ ಚೀಯೋನಿನಲ್ಲಿ ಅವರ ವಾಸಸ್ಥಾನವೂ ಉಂಟು.


ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.


ಮಹೋನ್ನತನಾದ ದೇವರಿಗೆ, ಮೊರೆಯಿಡುತ್ತೇನೆ. ನನಗಾಗಿ ಕಾರ್ಯಗಳಿಗೆ ನ್ಯಾಯ ನೀಡುವ ದೇವರಿಗೆ ಮೊರೆಯಿಡುತ್ತೇನೆ.


ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.


ಅದಕ್ಕೆ ಅವನು, “ನನ್ನ ಮಗಳೇ, ಯೆಹೋವ ದೇವರಿಂದ ನಿನಗೆ ಆಶೀರ್ವಾದವಾಗಲಿ, ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದುದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದ ದಯೆಯು ಹೆಚ್ಚಾಗಿದೆ.


ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.


“ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:


ನಾನು ಯಾವುದರೊಂದಿಗೆ ಯೆಹೋವ ದೇವರ ಮುಂದೆ ಬಂದು, ಯಾವುದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಮತ್ತು ಒಂದು ವರ್ಷದ ಕರುಗಳ ಸಂಗಡ ಆತನ ಮುಂದೆ ಹೋಗಲೇ?


“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.


ದಾವೀದನು ಯಾಬೇಷ್ ಗಿಲ್ಯಾದಿನವರಿಗೆ ದೂತರನ್ನು ಕಳುಹಿಸಿ, “ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ, ಅವನನ್ನು ಸಮಾಧಿಮಾಡಿದ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ.


ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು. ರಾಜರನ್ನು ಸೋಲಿಸಿ, ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಸಂಧಿಸಿ ಅವನನ್ನು ಆಶೀರ್ವದಿಸಿದನು.


ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.


ಈ ಪ್ರಕಾರ ನೀವು ಸಹ ಇಸ್ರಾಯೇಲರ ಕಡೆಯಿಂದ ತೆಗೆದುಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯ ಒಂದು ಭಾಗವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು, ನೀವು ಅದರಿಂದ ಯೆಹೋವ ದೇವರ ಯಾಜಕನಾದ ಆರೋನನಿಗೆ ಕೊಡಬೇಕು.


ದೇವರ ಮಾತುಗಳನ್ನು ಕೇಳಿದವನೂ, ಮಹೋನ್ನತನ ಜ್ಞಾನವನ್ನು ತಿಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿದ್ದು ತೆರೆದ ಕಣ್ಣುಳ್ಳವನೂ ಹೇಳಿದ್ದು:


ದೇವರು ಅಲ್ಲಿಯೇ ಬಿಲ್ಲಿನ ಉರಿಬಾಣಗಳನ್ನೂ ಗುರಾಣಿಯನ್ನೂ ಖಡ್ಗವನ್ನೂ ಯುದ್ಧಾಯುಧಗಳನ್ನು ಮುರಿದುಬಿಟ್ಟರು.


ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಧ್ವನಿ ಉಂಟಾಯಿತು: “ಅರಸನಾದ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ದೈವೋಕ್ತಿ ಏನೆಂದರೆ: ನಿನ್ನ ರಾಜ್ಯವು ನಿನ್ನಿಂದ ತೆಗೆಯಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು