Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:23 - ಕನ್ನಡ ಸಮಕಾಲಿಕ ಅನುವಾದ

23 ನಿನಗೆ ಸೇರಿದ ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ, ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ’ ಎಂದು ನೀನು ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವುದನ್ನೂ ನಾನು ತೆಗೆದುಕೊಳ್ಳುವುದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರಾಗಿರುವ ಯೆಹೋವನ ಕಡೆಗೆ ಕೈ ಎತ್ತಿ ಪ್ರಮಾಣಮಾಡುತ್ತೇನೆ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವುದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿನಗೆ ಸೇರಿದವುಗಳಲ್ಲಿ ಯಾವುದನ್ನೂ, ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದ’ ಎಂದು ಹೇಳಿಕೊಳ್ಳುವುದಕ್ಕೂ ನಿನಗೆ ಆಸ್ಪದ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿನ್ನದಾಗಿರುವ ಯಾವುದನ್ನೂ ನಾನು ಇಟ್ಟುಕೊಳ್ಳುವುದಿಲ್ಲ; ಅದು ದಾರವಾಗಿದ್ದರೂ, ಪಾದರಕ್ಷೆಯ ಬಾರಾಗಿದ್ದರೂ, ನಾನಿಟ್ಟುಕೊಳ್ಳುವುದಿಲ್ಲ. ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದೆ’ ಎಂದು ನೀನು ಹೇಳಿಕೊಳ್ಳುವುದು ನನಗೆ ಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:23
8 ತಿಳಿವುಗಳ ಹೋಲಿಕೆ  

ಆದರೆ ಪ್ರವಾದಿಯು, “ನಾನು ಯಾರ ಮುಂದೆ ನಿಲ್ಲುತ್ತೇನೋ ಆ ಯೆಹೋವ ದೇವರ ಜೀವದಾಣೆ, ನಾನು ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ಅವನು ತೆಗೆದುಕೊಳ್ಳಬೇಕೆಂದು ಬಲವಂತ ಮಾಡಿದರೂ, “ಬೇಡ,” ಎಂದನು.


ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ಇಗೋ, ನಾನು ನಿಮ್ಮ ಬಳಿಗೆ ಬರುವುದಕ್ಕೆ ಸಿದ್ದನಾಗಿರುವುದು ಇದು ಮೂರನೆಯ ಸಾರಿ. ನಾನು ಬಂದಾಗ ನಿಮಗೆ ಭಾರವಾಗಲು ಬಿಡುವುದಿಲ್ಲ. ನಾನು ನಿಮ್ಮ ಸೊತ್ತನ್ನು ಆಶಿಸುವುದಿಲ್ಲ. ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ನಿಕ್ಷೇಪವನ್ನು ಕೂಡಿಸಿಡುವುದಿಲ್ಲ. ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುತ್ತಾರಷ್ಟೇ.


ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು.


ಆದರೆ ದೇವರ ಮನುಷ್ಯನು ಅರಸನಿಗೆ ಉತ್ತರವಾಗಿ, “ನೀನು ನನಗೆ ನಿನ್ನ ಅರ್ಧ ಆಸ್ತಿಯನ್ನು ಕೊಟ್ಟರೂ, ನಾನು ನಿನ್ನ ಸಂಗಡ ಹೋಗುವುದಿಲ್ಲ. ಈ ಸ್ಥಳದಲ್ಲಿ ರೊಟ್ಟಿ ತಿನ್ನುವುದಿಲ್ಲ, ಕುಡಿಯುವುದಿಲ್ಲ.


ಅವರೇ ನನ್ನ ಬಳಿಕ ಬರುವವರು. ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು