Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:5 - ಕನ್ನಡ ಸಮಕಾಲಿಕ ಅನುವಾದ

5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ, ಹಾಮಿನಲ್ಲಿ ಜೂಜ್ಯರನ್ನೂ, ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಮತ್ತು ಅವನಿಗೆ ಸೇರಿದ ರಾಜರೂ ಬಂದು ಅಷ್ಟರೋತ್ ಕರ್ನಯಿಮ್ ಎಂಬಲ್ಲಿ ರೆಫಾಯರನ್ನೂ ಹಾಮ್ ಎಂಬಲ್ಲಿ ಏಮಿಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿವಿುನಲ್ಲಿ ರೆಫಾಯರನ್ನೂ ಹಾವಿುನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿವಿುನಲ್ಲಿ ಏವಿುಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಹದಿನಾಲ್ಕನೆಯ ವರ್ಷದಲ್ಲಿ, ರಾಜನಾದ ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅವರ ವಿರೋಧವಾಗಿ ಯುದ್ಧಮಾಡಲು ಬಂದರು. ಕೆದೊರ್ಲಗೋಮರನು ಮತ್ತು ಅವನೊಡನಿದ್ದ ರಾಜರುಗಳು ಅಷ್ಟರೋತ್-ಕರ್ನಯಿಮಿನಲ್ಲಿದ್ದ ರೆಫಾಯರನ್ನೂ ಹಾಮಿನಲ್ಲಿದ್ದ ಜೂಜ್ಯರನ್ನೂ ಶಾವೆಕೆರ್ಯಾತಯಿಮಿನಲ್ಲಿದ್ದ ಏಮಿಯರನ್ನೂ ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:5
28 ತಿಳಿವುಗಳ ಹೋಲಿಕೆ  

ರೆಫಾಯರಲ್ಲಿ ಬಾಷಾನಿನ ಅರಸನಾದ ಓಗನು ಮಾತ್ರ ಉಳಿದಿದ್ದನು. ಅವನ ಮಂಚವು ಕಬ್ಬಿಣದ ಮಂಚ. ಅದು ಅಮ್ಮೋನಿಯರ ರಬ್ಬಾದಲ್ಲಿ ಈಗಲೂ ಉಂಟಲ್ಲವೋ? ಅದರ ಉದ್ದ ಪುರುಷನ ಕೈ ಅಳತೆಯ ಪ್ರಕಾರ ಒಂಬತ್ತು ಮೊಳ, ಅಗಲ ನಾಲ್ಕು ಮೊಳ ಇತ್ತು.


ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದ ಮೇಲೆಯೂ, ಅಷ್ಟಾರೋತ್‌ನಲ್ಲಿ, ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಎದ್ರೈಯಲ್ಲಿ ಸೋಲಿಸಿದ ಮೇಲೆಯೂ ಮೋಶೆ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿದನು.


ಹಿತ್ತಿಯರೂ ಪೆರಿಜೀಯರೂ ರೆಫಾಯರೂ


ನೀವು ಅವುಗಳಿಗೆ ಭಯಪಡಬೇಡಿರಿ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೋಸ್ಕರ ಯುದ್ಧಮಾಡುವರು,” ಎಂದೆನು.


ಕಿರ್ಯಾತಯಿಮ್, ಬೇತ್ ಗಾಮುಲ್, ಬೇತ್ ಮೆಯೋನ್,


ಮೋವಾಬನ್ನು ಕುರಿತದ್ದು: ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೆಬೋ ಊರಿನವರಿಗೆ ಕಷ್ಟ! ಆ ಊರು ಸೂರೆಯಾಯಿತು; ಕಿರ್ಯಾತಯಿಮು ಶತ್ರುವಿನ ಕೈವಶವಾಗಿ ಅವಮಾನಕ್ಕೆ ಗುರಿಯಾಗಿದೆ; ಬಲವಾದ ಕೋಟೆಯು ಸಹ ಚದರಿ ನಾಚಿಕೆಗೆ ಈಡಾಗಿದೆ.


ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ, ರೆಫಾಯಿಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವುದು.


ಹಾಮ ದೇಶದಲ್ಲಿ ಅದ್ಭುತಗಳನ್ನೂ, ಕೆಂಪುಸಮುದ್ರದ ಬಳಿಯಲ್ಲಿ ಅತಿಶಯವಾದವುಗಳನ್ನೂ ಮಾಡಿದ ದೇವರನ್ನು ಮರೆತುಬಿಟ್ಟರು.


ಇವರು ದೇವರ ಸೂಚಕಕಾರ್ಯಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.


ಅನಂತರ ಇಸ್ರಾಯೇಲನು ಈಜಿಪ್ಟಿಗೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.


ಈಜಿಪ್ಟಿನಲ್ಲಿ ಚೊಚ್ಚಲರೆಲ್ಲರನ್ನೂ, ಹಾಮನ ಗುಡಾರಗಳಲ್ಲಿ ಪುರುಷತ್ವದ ಪ್ರಥಮ ಫಲವನ್ನೂ ದಂಡಿಸಿದರು.


ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು.


ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಗುಡ್ಡಕ್ಕೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು.


ಅವರು ರಸವತ್ತಾದ ಒಳ್ಳೆಯ ಮೇವನ್ನು ಕಂಡುಕೊಂಡರು. ಆ ದೇಶವು ವಿಸ್ತಾರವಾಗಿಯೂ, ಶಾಂತವಾಗಿಯೂ, ಸಮಾಧಾನವಾಗಿಯೂ ಇತ್ತು. ಪೂರ್ವದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.


ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು.


ಫಿಲಿಷ್ಟಿಯರು ಮತ್ತೆ ತಿರುಗಿಬಂದು, ರೆಫಾಯಿಮಿನ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.


ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು.


ಗಿಲ್ಯಾದಿನ ಅರ್ಧ ಭಾಗ, ಬಾಷಾನಿನಲ್ಲಿರುವ ಓಗ್ ರಾಜನ ಪಟ್ಟಣಗಳಾದ ಅಷ್ಟಾರೋತ್, ಎದ್ರೈ, ಇವೆಲ್ಲವೂ ಮನಸ್ಸೆಯ ಮಗ ಮಾಕೀರನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನರಿಗೆ ಕೊಟ್ಟನು.


ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ ಶಹರ್,


ಅಂದರೆ, ಬಾಷಾನಿನಲ್ಲಿ ಅಷ್ಟಾರೋತ್, ಎದ್ರೈ ಎಂಬ ಊರುಗಳಲ್ಲಿ ಆಳಿದ ರೆಫಾಯರ ವಂಶಸ್ಥನಾದ ಓಗನ ಸಮಸ್ತ ರಾಜ್ಯವೆಲ್ಲಾ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ, ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.


ಅಷ್ಟಾರೋತ್ ಮತ್ತು ಎದ್ರೈ ಎಂಬ ಊರುಗಳಲ್ಲಿ ವಾಸಮಾಡಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ಎರಡನೆಯವನು.


ಯೆಹೋವ ದೇವರು ನಿಮಗೆ ವಿಶ್ರಾಂತಿ ಕೊಟ್ಟ ಹಾಗೆಯೇ ನಿಮ್ಮ ಸಹೋದರರಿಗೂ ವಿಶ್ರಾಂತಿಯನ್ನು ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವರು. ಅದುವರೆಗೆ ನೀವು ಅವರೊಂದಿಗೆ ಸೇರಿ ಯುದ್ಧಕ್ಕೆ ಹೋಗಿರಿ. ಅನಂತರ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ನಿಮಗೆ ಕೊಟ್ಟ ಸ್ಥಳಗಳಗೆ ಹಿಂತಿರುಗಿ ಬರಬಹುದು.”


ಅವರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಸೇವೆಮಾಡಿ, ಹದಿಮೂರನೆಯ ವರ್ಷದಲ್ಲಿ ತಿರುಗಿಬಿದ್ದರು.


ರೂಬೇನನ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್,


ಮಿಕ್ಕ ಗಿಲ್ಯಾದನ್ನು ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಗೋತ್ರಕ್ಕೆ ಕೊಟ್ಟೆನು. ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಸೀಮೆಯನ್ನೂ, ರೆಫಾಯರ ದೇಶವೆಂದು ಎನಿಸಿಕೊಳ್ಳುವ ಸಮಸ್ತ ಬಾಷಾನನ್ನೂ ಅವರಿಗೆ ಕೊಟ್ಟೆನು.


ಯೊರ್ದನ್ ನದಿಗೆ ಆಚೆ ಇರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ, ಅಷ್ಟಾರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು