Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:7 - ಕನ್ನಡ ಸಮಕಾಲಿಕ ಅನುವಾದ

7 ಅವರು ಹಿಂದಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು, ಅಮಾಲೇಕ್ಯರ ಎಲ್ಲಾ ಬಯಲನ್ನು ಹಜಜೋನ್ ತಾಮಾರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಟಾಟಿಗೆ ಬಂದು ಅಮಾಲೇಕ್ಯರ ಸಮಸ್ತ ನಾಡನ್ನೂ ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಗೆದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಎನ್ಮಿಷ್ಪಾಟ್ ಎನ್ನಲ್ಪಟ್ಟ ಕಾದೇಶ್‍ಗೆ ಹಿಂದಿರುಗಿ ಬಂದು ಅಮಾಲೇಕ್ಯರ ಸಮಸ್ತ ನಾಡನ್ನು ಮತ್ತು ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಅವರು ಹಿಂದಿರುಗಿಕೊಂಡು ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಅಮಾಲೇಕ್ಯರ ಸಮಸ್ತದೇಶವನ್ನೂ ಹಚಚೋನ್‍ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಬಳಿಕ ರಾಜ ಕೆದೊರ್ಲಗೋಮರನು ಉತ್ತರದ ಕಡೆಗೆ ತಿರುಗಿ ಕಾದೇಶ್ ಎನ್ನುವ ಎನ್ಮಿಷ್ಪಾಟಿಗೆ ಬಂದು ಎಲ್ಲಾ ಅಮಾಲೇಕ್ಯರನ್ನು ಸೋಲಿಸಿದನು. ಇದಲ್ಲದೆ ಅವನು ಹಚಚೋನ್‌ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:7
19 ತಿಳಿವುಗಳ ಹೋಲಿಕೆ  

ಆಗ ಕೆಲವರು ಬಂದು ಯೆಹೋಷಾಫಾಟನಿಗೆ, “ಅರಾಮಿನ ಈಚೆಯಲ್ಲಿರುವ ಲವಣ ಸಮುದ್ರದ ಆಚೆಯಿಂದ ನಿನಗೆ ವಿರೋಧವಾಗಿ ಮಹಾ ಸಮೂಹವೊಂದು ಬರುತ್ತದೆ. ಅವರು ಏನ್ಗೆದಿ ಎಂಬ ಹಜಜೋನ್ ತಾಮಾರಿನಲ್ಲಿ ಇದ್ದಾರೆ,” ಎಂದು ತಿಳಿಸಿದರು.


ಅಬ್ರಹಾಮನು ಅಲ್ಲಿಂದ ನೆಗೆವ ಕಡೆಗೆ ಕಾದೇಶಿಗೆ ಪ್ರಯಾಣಮಾಡಿ, ಕಾದೇಶ್ ಹಾಗೂ ಶೂರಿನ ಮಧ್ಯದ ಗೆರಾರಿನಲ್ಲಿ ಸ್ವಲ್ಪಕಾಲ ಪ್ರವಾಸಿಯಾಗಿದ್ದನು.


ಆದ್ದರಿಂದ ಆ ಬಾವಿಗೆ, ಬೇರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.


ನಿಬ್ಷಾನ್, ಉಪ್ಪಿನ ಪಟ್ಟಣವು ಮತ್ತು ಏನ್ಗೆದಿ ಎಂಬ ಪಟ್ಟಣಗಳನ್ನು ಒಳಗೊಂಡ ಆರು ಪಟ್ಟಣಗಳು ಅವುಗಳ ಗ್ರಾಮಗಳು.


ಆಮೇಲೆ ನೀವು ಕಾದೇಶಿನಲ್ಲಿ ಬಹಳ ದಿವಸ ವಾಸವಾಗಿದ್ದಿರಿ.


ಆಗ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ ಪ್ರಕಾರ, ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಮರುಭೂಮಿಯನ್ನೆಲ್ಲಾ ದಾಟಿ, ಕಾದೇಶ್ ಬರ್ನೇಯಕ್ಕೆ ಬಂದೆವು.


ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, ಆದರೆ ಅವನು ಕೊನೆಗೆ ನಾಶವಾಗುವನು.”


ಇಸ್ರಾಯೇಲರ ಸರ್ವ ಸಮೂಹದವರು ಚಿನ್ ಎಂಬ ಮರುಭೂಮಿಗೆ ಮೊದಲನೆಯ ತಿಂಗಳಿನಲ್ಲಿ ಬಂದರು. ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಮರಣಹೊಂದಿದಳು, ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.


ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ, ಕಾನಾನ್ಯರೂ ಇಳಿದು, ಅವರನ್ನು ಹೊಡೆದು, ಹೊರ್ಮಾದವರೆಗೆ ಅಟ್ಟಿಬಿಟ್ಟರು.


ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿರುವುದರಿಂದ ನೀವು ಅವರ ಖಡ್ಗಕ್ಕೆ ತುತ್ತಾಗುವಿರಿ. ನೀವು ಯೆಹೋವ ದೇವರ ಕಡೆಯಿಂದ ತಿರುಗಿದ ಕಾರಣ, ಆತನು ನಿಮ್ಮ ಸಂಗಡ ಇರುವುದಿಲ್ಲ,” ಎಂದನು.


ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.


ಕೋರಹ, ಗತಾಮ್, ಅಮಾಲೇಕ್, ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾ ಎಂಬಾಕೆಯ ಮೊಮ್ಮಕ್ಕಳು.


ತಿಮ್ನಾಳು ಏಸಾವನ ಮಗ ಎಲೀಫಜನಿಗೆ ಉಪಪತ್ನಿಯಾಗಿದ್ದು, ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾ ಎಂಬಾಕೆಯ ಪುತ್ರರು ಇವರೇ.


ಏನ್ಗೆದಿ ಮೊದಲುಗೊಂಡು ಎನ್ ಎಗ್ಲಯಿಮಿನವರೆಗೂ ಬೆಸ್ತರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವುವು. ಅದರ ಮೀನುಗಳು ಮಹಾಸಾಗರದ ಮೀನುಗಳಾಗಿ ಜಾತ್ಯಾನುಸಾರವಾಗಿ ಬಹಳವಾಗಿರುವುವು.


ಗಾದಿನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು