Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:10 - ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಯೆಹೋವ ದೇವರ ದೂತನು ಅವಳಿಗೆ, “ನಿನ್ನ ಸಂತಾನವನ್ನು ಲೆಕ್ಕಿಸಲಾಗದಷ್ಟು ಹೆಚ್ಚಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದೂ ಅಲ್ಲದೆ ಸ್ವಾಮಿಯ ದೂತನು, “ನಿನ್ನ ಸಂತಾನವನ್ನು ಲೆಕ್ಕಿಸಲಾಗದಷ್ಟು ದೊಡ್ಡದಾಗಿಸುವೆನು”, ಎಂದು ಹೇಳಿ ಇಂತೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದಲ್ಲದೆ ಯೆಹೋವನ ದೂತನು ಅವಳಿಗೆ - ನಿನಗೆ ಬಹುಸಂತಾನವಾಗ ಮಾಡುವೆನು; ಅದು ಲೆಕ್ಕಿಸಕೂಡದಷ್ಟು ಅಪರಿವಿುತವಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದಲ್ಲದೆ ಯೆಹೋವನ ದೂತನು ಹಾಗರಳಿಗೆ, “ನಾನು ನಿನ್ನ ಸಂತತಿಯವರನ್ನು ಅಸಂಖ್ಯಾತರನ್ನಾಗಿ ಮಾಡುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:10
25 ತಿಳಿವುಗಳ ಹೋಲಿಕೆ  

ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ನಾನು ಅವನನ್ನು ಸಹ ಆಶೀರ್ವದಿಸುವೆನು. ಅವನನ್ನು ಅಭಿವೃದ್ಧಿ ಮಾಡಿ, ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು.


ಎದ್ದು ಹುಡುಗನನ್ನು ಎತ್ತಿಕೊಂಡು ನಿನ್ನ ಕೈಯಲ್ಲಿ ತೆಗೆದುಕೋ. ನಾನು ಅವನನ್ನು ದೊಡ್ಡ ಜನಾಂಗದವನನ್ನಾಗಿ ಮಾಡುವೆನು,” ಎಂದನು.


ದಾಸಿಯ ಮಗನೂ ನಿನ್ನ ಸಂತಾನವಾಗಿರುವುದರಿಂದ, ಅವನನ್ನೂ ನಾನು ಜನಾಂಗವಾಗಿ ಮಾಡುವೆನು,” ಎಂದರು.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದರೆ ಯೆಹೋವ ದೇವರು ಅವನಿಗೆ, “ನಾನು ನಿನ್ನ ಸಂಗಡ ಖಂಡಿತವಾಗಿ ಇರುವುದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ,” ಎಂದರು.


ಯೆಹೋವ ದೇವರ ದೂತನು ಬಂದು ಅಬೀಯೆಜೆರನಾದ ಯೋವಾಷನಿಗೆ ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷಿಯ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.


ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು, “ಮಗುವಿನ ಸಾವನ್ನು ನಾನು ನೋಡಲಾರೆನು,” ಎಂದು ಹೇಳಿ ಸ್ವರವೆತ್ತಿ ಅತ್ತಳು.


ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.


ಯೆಹೋವ ದೇವರ ದೂತನು ಆಕೆಗೆ, “ನಿನ್ನ ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಆಕೆಗೆ ಅಧೀನಳಾಗಿರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು