Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:8 - ಕನ್ನಡ ಸಮಕಾಲಿಕ ಅನುವಾದ

8 “ಸಾರಯಳ ದಾಸಿ ಹಾಗರಳೇ, ನೀನು ಎಲ್ಲಿಂದ ಬಂದೆ? ನೀನು ಎಲ್ಲಿಗೆ ಹೋಗುತ್ತೀ?” ಎಂದು ವಿಚಾರಿಸಿದನು. ಅವಳು, “ನನ್ನ ಯಜಮಾನಿ ಸಾರಯಳನ್ನು ಬಿಟ್ಟು ಓಡಿ ಹೋಗುತ್ತಿದ್ದೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ ಎಂದು ಕೇಳಲು ಅವಳು - ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:8
15 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಮನುಷ್ಯನನ್ನು ಕರೆದು ಅವನಿಗೆ, “ನೀನು ಎಲ್ಲಿದ್ದೀ?” ಎಂದರು.


ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.


ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ, ನಿನ್ನ ಉದ್ಯೋಗವನ್ನು ಬಿಟ್ಟುಬಿಡಬೇಡ. ಏಕೆಂದರೆ ತಾಳ್ಮೆಯು ದೊಡ್ಡ ಅಪರಾಧಗಳನ್ನು ಶಾಂತಪಡಿಸುತ್ತದೆ.


ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.


ಅವನು ಹಾಗರಳನ್ನು ಕೂಡಿದನು. ಆಗ ಅವಳು ಗರ್ಭಿಣಿಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ, ಅವಳು ತನ್ನ ಯಜಮಾನಿಯನ್ನು ತಿರಸ್ಕರಿಸಿದಳು.


ಅಬ್ರಾಮನ ಹೆಂಡತಿ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಹಾಗರಳೆಂಬ ಈಜಿಪ್ಟಿನ ದಾಸಿ ಇದ್ದಳು.


ಯೆಹೋವ ದೇವರ ದೂತನು ಆಕೆಗೆ, “ನಿನ್ನ ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಆಕೆಗೆ ಅಧೀನಳಾಗಿರು,” ಎಂದನು.


ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಅಲ್ಲಿ ಅವನಿಗೆ ಯೆಹೋವ ದೇವರ ವಾಕ್ಯವು ಬಂದು, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದರು.


ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದು ವಾಣಿ ಕೇಳಿಸಿತು.


ದೇವರು ಆ ಹುಡುಗನ ಅಳುವ ಸ್ವರವನ್ನು ಕೇಳಿದರು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು, ಆಕೆಗೆ, “ಹಾಗರಳೇ, ವ್ಯಥೆಪಡುವುದೇಕೆ? ಅಂಜಬೇಡ ದೇವರು ಹುಡುಗನ ಸ್ವರವನ್ನು ಕೇಳಿದ್ದಾರೆ.


ಆ ಮುದುಕನು ತನ್ನ ಕಣ್ಣೆತ್ತಿ ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದ ಯಾತ್ರಿಕನನ್ನು ಕಂಡು, “ನೀನು ಎಲ್ಲಿಗೆ ಹೋಗುತ್ತೀ? ಎಲ್ಲಿಂದ ಬಂದೆ?” ಎಂದನು.


ಆಗ ಗೇಹಜಿಯು ಒಳಗೆ ಪ್ರವೇಶಿಸಿ, ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದನು. ಅದಕ್ಕೆ ಗೇಹಜಿಯು, “ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು