Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:10 - ಕನ್ನಡ ಸಮಕಾಲಿಕ ಅನುವಾದ

10 ನೀನೂ, ನಿನ್ನ ತರುವಾಯ ನಿನ್ನ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ: ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನೂ ನಿನ್ನ ಸಂತತಿಯುವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ, ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀನೂ ನಿನ್ನ ಸಂತತಿಯವರೂ ಕೈಗೊಳ್ಳಬೇಕಾದ ನನ್ನ ಒಡಂಬಡಿಕೆ ಇದು: ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನೂ ನಿನ್ನ ಹಿಂದೆ ಬರುವ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ನಿಬಂಧನೆಯು ಯಾವದಂದರೆ - ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕೆಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನೂ ಮತ್ತು ನಿನ್ನ ಎಲ್ಲಾ ಸಂತತಿಯವರು ಕೈಕೊಳ್ಳಬೇಕಾದ ನಿಬಂಧನೆಯೇನೆಂದರೆ, ನಿಮ್ಮಲ್ಲಿ ಹುಟ್ಟಿದ ಪ್ರತಿಯೊಂದು ಗಂಡುಮಗುವಿಗೂ ಸುನ್ನತಿ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:10
29 ತಿಳಿವುಗಳ ಹೋಲಿಕೆ  

ಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ಸುನ್ನತಿಯವರಿಗೂ ಸುನ್ನತಿಯಿಲ್ಲದವರಿಗೂ ಒಂದೇ ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ.


ಆ ಕಾಲದಲ್ಲಿ ಯೆಹೋವ ದೇವರು ಯೆಹೋಶುವನಿಗೆ, “ನೀನು ಗಟ್ಟಿಯಾದ ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲರಿಗೆ ಸುನ್ನತಿ ಮಾಡು,” ಎಂದರು.


ನೀವು ಸುನ್ನತಿ ಮಾಡಿಸಿಕೊಳ್ಳುವುದು, ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತಾಗಿ ಇರುವುದು.


ಆದಕಾರಣ ಸುನ್ನತಿಮಾಡಿಸಿಕೊಂಡಿದ್ದೇವೆ ಎಂದು ತಮ್ಮ ಬಗ್ಗೆ ಹೇಳಿಕೊಂಡವರು, ಹುಟ್ಟಿದಂದಿನಿಂದ ಯೆಹೂದ್ಯರಲ್ಲದವರಾದ ನಿಮಗೆ ಸುನ್ನತಿಮಾಡಿಸಿಕೊಳ್ಳದವರು ಎಂದು ಹೇಳಿದ್ದನು ನೆನಪುಮಾಡಿಕೊಳ್ಳಿ. ಈ ಸುನ್ನತಿಯು ಮನುಷ್ಯರಿಂದಾದದ್ದಷ್ಟೇ.


ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡುವವರೂ ತಮಗೆ ಕ್ರಿಸ್ತ ಯೇಸುವಿನ ಶಿಲುಬೆಯ ನಿಮಿತ್ತ ಹಿಂಸೆಯಾಗಬಾರದೆಂಬುದಕ್ಕಾಗಿಯೇ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಿಮ್ಮನ್ನು ಒತ್ತಾಯ ಮಾಡುತ್ತಾರೆ.


ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಏಕೆಂದರೆ ನಿಯಮವನ್ನು ಕೈಕೊಳ್ಳುವುದರಿಂದಲೇ. ನಂಬಿಕೆಯಿಂದಲೇ ಒಬ್ಬ ಮನುಷ್ಯನು ನೀತಿವಂತನೆಂದು ನಿರ್ಣಯ ಹೊಂದುತ್ತಾನೆಂದು ಎಣಿಸುತ್ತೇವೆ.


ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ


ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.


ಮೋಶೆ ನಿಮಗೆ ಸುನ್ನತಿಯನ್ನು ಇದಕ್ಕಾಗಿಯೇ ಕೊಟ್ಟನು. ಅದು ಮೋಶೆಯಿಂದಾಗಿರದೆ ನಿಮ್ಮ ಪಿತೃಗಳಿಂದಾದದ್ದು. ಆದರೆ ನೀವು ಸಬ್ಬತ್ ದಿನದಲ್ಲಿಯೂ ಸುನ್ನತಿ ಮಾಡುತ್ತೀರಿ.


ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”


ಯೆಹೋಶುವನು ಸುನ್ನತಿ ಮಾಡಿದ ಕಾರಣವೇನೆಂದರೆ: ಈಜಿಪ್ಟಿನಿಂದ ಹೊರಟ ಗಂಡಸರಲ್ಲಿ ಯುದ್ಧಮಾಡುವ ಸೈನ್ಯದವರೆಲ್ಲರೂ ಮರುಭೂಮಿಯ ಮಾರ್ಗದಲ್ಲಿ ಸತ್ತುಹೋದರು.


ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ.


“ನಿಮ್ಮ ಜೊತೆಯಲ್ಲಿ ವಾಸಮಾಡಿದ ಪರದೇಶದವನು ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ, ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ. ತರುವಾಯ ಅವನು ಅದನ್ನು ಆಚರಿಸುವುದಕ್ಕೆ ಸಮೀಪಬರಲಿ, ಅಂಥವರು ಸ್ವದೇಶದಲ್ಲಿ ಹುಟ್ಟಿದವರಂತೆ ಇರುವರು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.


ಚಿಪ್ಪೋರಳು ಕಲ್ಲಿನ ಚೂರಿ ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ, ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿ ಅವನಿಗೆ, “ಖಂಡಿತವಾಗಿ ನೀನು ನನಗೆ ರಕ್ತಧಾರೆಯಿಂದಾದ ಗಂಡನು,” ಎಂದಳು.


ಆದರೆ ನೀವು ನಮ್ಮ ಹಾಗಿದ್ದು, ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಂಡರೆ ಮಾತ್ರ ನಾವು ನಿಮಗೆ ಒಪ್ಪುವೆವು.


ಅಬ್ರಹಾಮನು ತನ್ನ ಮಗ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರಿಗೂ ತಾನು ಕ್ರಯಕ್ಕೆ ತೆಗೆದುಕೊಂಡವರೆಲ್ಲರಿಗೂ ಹೀಗೆ ತನ್ನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ದೇವರು ತನಗೆ ಹೇಳಿದ ಹಾಗೆ, ಆ ದಿನವೇ ಸುನ್ನತಿ ಮಾಡಿಸಿದನು.


ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದವರಿಗೂ ಪರರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನ ಸಂಗಡವೇ ಸುನ್ನತಿ ಆಯಿತು.


ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು.


ಸುನ್ನತಿ ಮಾಡಿಸಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಮಾಡುವುದಕ್ಕೂ, ಒಂದೇ ಜನಾಂಗವಾಗುವುದಕ್ಕೂ ಒಪ್ಪುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು