Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:8 - ಕನ್ನಡ ಸಮಕಾಲಿಕ ಅನುವಾದ

8 ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ಪ್ರವಾಸವಾಗಿರುವ ಕಾನಾನ್‍ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟು ಅವರಿಗೆ ದೇವರಾಗಿರುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:8
47 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವರಾಗಿರುವೆನು. ನೀವು ನನ್ನ ಜನರಾಗಿರುವಿರಿ.


“ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”


ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ಆ ಒಡಂಬಡಿಕೆ ಯಾವುದೆಂದರೆ, ದೇವರು ನಿಮಗೆ ಹೇಳಿದಂತೆಯೂ, ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದಂತೆಯೂ, ಈ ಹೊತ್ತು ನಿಮ್ಮನ್ನು ತಮ್ಮ ಜನರನ್ನಾಗಿ ಸ್ಥಾಪಿಸಿ, ನಿಮಗೆ ದೇವರಾಗಬೇಕೆಂಬುದೇ.


ಈ ಹೊತ್ತು ನಿಮಗೆ ಯೆಹೋವ ದೇವರು ಘೋಷಿಸಿದಂತೆ, ನೀವು ಅವರ ಜನರೂ ಅವರ ಸಂಗ್ರಹಿಸಿದ ಆಸ್ತಿಯೂ ಆಗಿದ್ದೀರೆಂದು ವಾಗ್ದಾನಮಾಡಿದ್ದಾರೆ. ನೀವು ಅವರ ಎಲ್ಲಾ ಆಜ್ಞೆಗಳನ್ನು ಪಾಲಿಸಿರಿ.


ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ.


ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾರೆ.


ದೇವರು ನಿಮ್ಮ ಪಿತೃಗಳನ್ನು ಪ್ರೀತಿಮಾಡಿದ್ದರಿಂದ, ಅವರ ತರುವಾಯ ಅವರ ಸಂತತಿಯನ್ನು ಆಯ್ದುಕೊಂಡು, ನಿಮ್ಮನ್ನು ತಮ್ಮ ದೃಷ್ಟಿಯಲ್ಲಿ ತಮ್ಮ ದೊಡ್ಡ ಬಲದಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ನೀನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೂ, ನಿನ್ನ ಸಂತತಿಗೂ ಕೊಡಲಿ,” ಎಂದನು.


ಎದ್ದು ದೇಶದ ಉದ್ದಗಲಕ್ಕೂ ನಡೆದಾಡು. ನಾನು ನಿನಗೆ ಅದನ್ನು ಕೊಡುವೆನು,” ಎಂದರು.


“ನನ್ನ ಮನೆ ದೇವರೊಂದಿಗೆ ಸರಿಯಾಗಿರದಿದ್ದರೆ, ನಿಶ್ಚಯವಾಗಿಯೂ ಅವರು ನನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಿರಲಿಲ್ಲ, ಪ್ರತಿಯೊಂದು ವಿಭಾಗದಲ್ಲಿಯೂ ವ್ಯವಸ್ಥೆಗೊಳಿಸಲಾಗಿದೆ ಮತ್ತು ಭದ್ರಪಡಿಸಲಾಗಿದೆ. ದೇವರು ನಿಶ್ಚಯವಾಗಿಯೂ ನನ್ನ ರಕ್ಷಣೆಯನ್ನು ಪೂರ್ತಿಗೊಳಿಸುವುದಿಲ್ಲ. ದೇವರು ನನ್ನ ಎಲ್ಲಾ ಅಪೇಕ್ಷೆಗಳನ್ನು ಪೂರೈಸುವುದಿಲ್ಲ.


ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.


ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.


ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ, ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವರನ್ನೂ ನೀನು ಅಭಿಷೇಕಿಸು. ಅವರ ಈ ಅಭಿಷೇಕದಿಂದ ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವುದು,” ಎಂದು ಹೇಳಿದರು.


ದೇವರು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು, ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಶಾಶ್ವತವಾದ ಸ್ವತ್ತನ್ನಾಗಿ ಕೊಡುತ್ತೇನೆ,’ ಎಂದು ಹೇಳಿದರು.


“ನಾನು ನಿಮ್ಮೊಂದಿಗೆ ಪರದೇಶಸ್ಥನೂ, ಪರವಾಸಿಯೂ ಆಗಿದ್ದೇನೆ. ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ. ಆಗ ನನ್ನ ಹೆಂಡತಿಯ ಶವವನ್ನು ಹೂಳಿಡುವೆನು,” ಎಂದನು.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.


“ಹೀಗೆ ಇಸ್ರಾಯೇಲರ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತ ಮಾಡುವುದು, ನಿಮಗೆ ನಿರಂತರವಾದ ನಿಯಮವಾಗಿರುವುದು,” ಎಂದು ಹೇಳಿದರು. ಯೆಹೋವ ದೇವರು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.


ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು, ಬಾಗಿಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ, ಅವನ ಯಜಮಾನನು ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ದಾಸನಾಗಿರಬೇಕು.


ದೇವರು ಅವನಿಗೆ ಇಲ್ಲಿ ಕಾಲಿಡುವಷ್ಟು ಸ್ಥಳವನ್ನಾಗಲಿ, ಯಾವುದೇ ಬಾಧ್ಯಸ್ತಿಕೆಯನ್ನಾಗಲಿ ಕೊಡಲಿಲ್ಲ. ಆದರೆ ಅಬ್ರಹಾಮನಿಗೆ ಆ ಸಮಯದಲ್ಲಿ ಮಕ್ಕಳಿಲ್ಲದಿದ್ದರೂ ಅವನೂ ಅವನ ನಂತರ ಅವನ ಸಂತತಿಯವರೂ ದೇಶವನ್ನು ಹೊಂದುವರೆಂದು ದೇವರು ಅವನಿಗೆ ವಾಗ್ದಾನ ಮಾಡಿದರು.


ಜಯಹೊಂದುವವರು ಇವುಗಳಿಗೆ ಬಾಧ್ಯನಾಗುವರು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಮಕ್ಕಳಾಗಿರುವರು.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.


ಏಕೆಂದರೆ ಅವರ ಸಂಪತ್ತು ಅವರು ಕೂಡಿ ಇರುವುದಕ್ಕೆ ಆಗದಷ್ಟು ಅಭಿವೃದ್ಧಿಯಾಗಿತ್ತು. ಅವರ ಪಶುಪ್ರಾಣಿಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.


ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು.


“ಯೆಹೋವ ದೇವರು ನಿಮಗೂ ನಿಮ್ಮ ಪಿತೃಗಳಿಗೂ ಪ್ರಮಾಣ ಮಾಡಿದ ಪ್ರಕಾರ, ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ, ಅದನ್ನು ನಿಮಗೆ ಕೊಟ್ಟನಂತರ,


ಇಸ್ರಾಯೇಲರ ಮಧ್ಯದಲ್ಲಿ ನಾನು ವಾಸಮಾಡಿ, ಅವರಿಗೆ ನಾನು ದೇವರಾಗಿರುವೆನು.


ಆ ನಿಮ್ಮ ಸೇವಕರಾದ ಅಬ್ರಹಾಮನನ್ನೂ, ಇಸಾಕನನ್ನೂ, ಇಸ್ರಾಯೇಲನನ್ನೂ ಜ್ಞಾಪಕಮಾಡಿಕೊಳ್ಳಿರಿ, ಯಾರಿಗೆ ನೀವು ಆಣೆಯಿಟ್ಟು ಪ್ರಮಾಣಮಾಡಿ: ‘ಆಕಾಶದ ನಕ್ಷತ್ರಗಳ ಹಾಗೆ ನಿನ್ನ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯವರಿಗೆ ಕೊಡುವೆನು ಮತ್ತು ಅವರು ನಿತ್ಯವಾಗಿ ಸ್ವಾಧೀನವಾಗಿಟ್ಟುಕೊಳ್ಳುವರು’ ಎಂದು ಮಾತುಕೊಡಲಿಲ್ಲವೆ?” ಎಂದನು.


ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.


ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.


“ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ.


ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ಅಬ್ರಹಾಮನೂ, ಇಸಾಕನೂ ಪ್ರವಾಸಿಗರಾಗಿ ವಾಸವಾಗಿದ್ದ ಹೆಬ್ರೋನ್ ಎಂಬ ಕಿರ್ಯತ್ ಅರ್ಬ ಪಟ್ಟಣಕ್ಕೆ ಬಂದನು.


ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.


“ನಾನು ನಿಮಗೆ ಸೊತ್ತಾಗಿ ಕೊಡುವ ಕಾನಾನ್ ದೇಶದೊಳಗೆ ನೀವು ಬಂದ ಬಳಿಕ ನಾನು ನಿಮಗೆ ಸೊತ್ತಾಗಿ ಕೊಡುವ ಮನೆಯಲ್ಲಿ ಬೂಜನ್ನು ಬರಮಾಡಿದಾಗ,


ಮೋಶೆ ತನ್ನ ಮಾವನಾಗಿದ್ದ ಮಿದ್ಯಾನನಾದ ರೆಯೂವೇಲನ ಮಗ ಹೊಬಾಬನಿಗೆ, “ಯೆಹೋವ ದೇವರು ನಮಗೆ ಕೊಡುತ್ತೇನೆಂದು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ. ನಮ್ಮ ಸಂಗಡ ನೀನೂ ಬಾ, ನಾವು ನಿನಗೆ ಒಳ್ಳೆಯದನ್ನು ಮಾಡುವೆವು. ಏಕೆಂದರೆ ಯೆಹೋವ ದೇವರು ಇಸ್ರಾಯೇಲರನ್ನು ಕುರಿತು ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾರೆ,” ಎಂದು ಹೇಳಿದನು.


ಆಗ ಯೆಹೋವ ದೇವರು ಮೋಶೆಗೆ, “ನೀನು ಈ ಅಬಾರೀಮ್ ಪರ್ವತದ ಮೇಲೆ ಏರಿ, ನಾನು ಇಸ್ರಾಯೇಲರಿಗೆ ಕೊಟ್ಟ ದೇಶವನ್ನು ನೋಡು.


“ನೀನು ಈ ಅಬಾರೀಮ್ ಬೆಟ್ಟದ ಮೇಲೆ ಅಂದರೆ, ಮೋವಾಬ್ ದೇಶದಲ್ಲಿ ಯೆರಿಕೋವಿಗೆ ಎದುರಾಗಿ ಇರುವ ನೆಬೋ ಪರ್ವತದ ಮೇಲೆ ಏರಿ ಹೋಗು. ನಾನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವ ಕಾನಾನ್ ದೇಶವನ್ನು ನೋಡು.


ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು.


“ನನ್ನ ಸೇವಕನಾದ ಮೋಶೆಯು ಮರಣಹೊಂದಿದನು. ಈಗ ನೀನು ಇಸ್ರಾಯೇಲರಾದ ಈ ಜನರೆಲ್ಲರ ಸಹಿತವಾಗಿ ಎದ್ದು, ಯೊರ್ದನ್ ನದಿಯನ್ನು ದಾಟಿ, ಇಸ್ರಾಯೇಲರಿಗೆ ನಾನು ಕೊಡುವ ದೇಶಕ್ಕೆ ಹೋಗು.


“ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”


ಆಗ ಅವರು ನನ್ನ ನಿಯಮಗಳನ್ನು ಕೈಗೊಂಡು ಜಾಗರೂಕತೆಯಿಂದ ಪಾಲಿಸುವರು. ನನ್ನ ನಿಯಮಗಳನ್ನು ಕೈಗೊಳ್ಳುವರು. ಅವರು ನನ್ನ ಜನರಾಗುವರು, ನಾನು ಅವರ ದೇವರಾಗುವೆನು.


“ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು ಹೀಗೆ ಹೇಳುತ್ತಾರೆ, ‘ಅಬ್ರಹಾಮನು ಒಬ್ಬೊಂಟಿಗನಾಗಿದ್ದರೂ ಈ ದೇಶ ಅವನಿಗೆ ಸೊತ್ತಾಗಿ ಸಿಕ್ಕಿತು. ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸೊತ್ತಾಗಿ ಕೊಡಲಾಗಿದೆ,’ ಎಂದು ಹೇಳುತ್ತಾರೆ.


ನಾನು ಅವರನ್ನು ತರುವೆನು. ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು. ನಾನು ಅವರಿಗೆ ನಂಬಿಗಸ್ತನೂ, ನೀತಿವಂತನೂ ಆದ ದೇವರಾಗಿರುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು