Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:19 - ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:19
39 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.


ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.


ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದರಿಂದ ದೂರ ಹೋಗುವುದಿಲ್ಲ.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


“ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.


ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ, ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.


ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.


ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನಿಕೆಯಲ್ಲಿಯೂ ಮೊದಲು ಇದ್ದ ನಂಬಿಕೆಯು ಈಗ ನಿನ್ನಲ್ಲಿಯೂ ಇದೆಯೆಂದು ನಾನು ದೃಢವಾಗಿ ನಂಬಿದ್ದೇನೆ.


ಆಗ ಪೌಲನು ಶತಾಧಿಪತಿಗೂ ಸೈನಿಕರಿಗೂ, “ಈ ಜನರು ನೌಕೆಯಲ್ಲಿ ಉಳಿದುಕೊಳ್ಳದಿದ್ದರೆ ನೀವು ತಪ್ಪಿಸಿಕೊಳ್ಳುವುದಕ್ಕಾಗುವುದಿಲ್ಲ,” ಎಂದನು.


“ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.


ಜೀವಂತನು; ಜೀವಂತನೇ ನಿನ್ನನ್ನು ಸ್ತುತಿಸುವೆನು. ಹೌದು, ಜೀವಂತನಾದ ನಾನೇ ಈ ಹೊತ್ತು ನಿಮ್ಮನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿಮ್ಮ ನಿಷ್ಠೆಯನ್ನು ಬೋಧಿಸುವನು.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


“ದಾವೀದನು ಇನ್ನೂ ಹೆಚ್ಚಾಗಿ ಹೇಳಿಕೊಳ್ಳುವುದೇನಿದೆ? ಏಕೆಂದರೆ ನೀವು ನಿಮ್ಮ ಸೇವಕನನ್ನು ಚೆನ್ನಾಗಿ ಬಲ್ಲಿರಿ; ಓ ಸಾರ್ವಭೌಮ ಯೆಹೋವ ದೇವರೇ,


ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.


“ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”


ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನೂ, ನಿನ್ನ ತರುವಾಯ ಬರುವ ನಿನ್ನ ಸಂತತಿಯವರೂ ತಲತಲಾಂತರಕ್ಕೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು.


ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ.


ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಅನುಸರಿಸಿದ್ದೇನೆ, ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.


“ನೀವು ಅಬ್ರಾಮನನ್ನು ಆಯ್ದುಕೊಂಡಿರುವ ಯೆಹೋವ ದೇವರು. ನೀವು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ, ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟಿರಿ.


ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು, ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವುಮಾಡಬೇಕು.


ಮಾನೋಹನು, “ನೀನು ಹೇಳಿದ ಮಾತುಗಳು ನೆರವೇರುವಾಗ, ನಾವು ಆ ಕೂಸಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು?” ಎಂದನು.


ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು.


ಅದೇ ಪ್ರಕಾರ, ಎರಡು ಚಿನ್ನದ ನಾಣ್ಯಗಳನ್ನು ಹೊಂದಿದವನು ಸಹ ಇನ್ನು ಬೇರೆ ಎರಡು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು