Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:28 - ಕನ್ನಡ ಸಮಕಾಲಿಕ ಅನುವಾದ

28 ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ, ಆ ಐದು ಮಂದಿ ಇಲ್ಲದ್ದರಿಂದ ಪಟ್ಟಣವನ್ನು ನಾಶಮಾಡುವಿರೋ?” ಎಂದು ಕೇಳಿದನು. ಅದಕ್ಕೆ ದೇವರು, “ನಲವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಒಂದು ವೇಳೆ ಐವತ್ತು ಮಂದಿ ಸಜ್ಜನರಿಗೆ ಐದು ಮಂದಿ ಕಡಿಮೆಯಾಗಿದ್ದಾರು. ಐದು ಮಂದಿ ಕಡಿಮೆಯಾದುದಕ್ಕೆ ಪಟ್ಟಣವನ್ನೆಲ್ಲ ನಾಶಮಾಡುವಿರೋ?” ಎಂದು ಕೇಳಲು ಸರ್ವೇಶ್ವರ, “ಅಲ್ಲಿ ನಲವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವುದಿಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಒಂದು ವೇಳೆ ಐವತ್ತು ಮಂದಿ ನೀತಿವಂತರಿಗೆ ಐದು ಮಂದಿ ಕಡಿಮೆಯಾಗಿದ್ದಾರು; ಐದು ಮಂದಿ ಕಡಿಮೆಯಾದದ್ದಕ್ಕೆ ಪಟ್ಟಣವನ್ನೆಲ್ಲಾ ನಾಶಮಾಡುವಿಯಾ ಎಂದು ಹೇಳಲು ಯೆಹೋವನು - ಅಲ್ಲಿ ನಾಲ್ವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಒಂದುವೇಳೆ ಐದು ಮಂದಿ ಕಡಿಮೆಯಾಗಿದ್ದು ನಲವತ್ತೈದು ಮಂದಿ ಮಾತ್ರ ನೀತಿವಂತರಿದ್ದರೆ ಆ ಪಟ್ಟಣವನ್ನು ನಾಶಮಾಡುವಿಯಾ?” ಎಂದು ಕೇಳಿದನು. ಅದಕ್ಕೆ ಯೆಹೋವನು ಅವನಿಗೆ, “ನಾನು ನಲವತ್ತೈದು ಮಂದಿ ನೀತಿವಂತರನ್ನು ಕಂಡರೂ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:28
7 ತಿಳಿವುಗಳ ಹೋಲಿಕೆ  

ಅಬ್ರಹಾಮನು ದೇವರ ಸಂಗಡ ಇನ್ನೂ ಮಾತನಾಡಿ, “ಅಲ್ಲಿ ನಲವತ್ತು ಮಂದಿ ದೊರೆತರೆ, ಏನು ಮಾಡುವಿರಿ?” ಎನ್ನಲು, ಅದಕ್ಕೆ ದೇವರು, “ನಲವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವುದಿಲ್ಲ,” ಎಂದರು.


ಅದಕ್ಕೆ ಯೆಹೋವ ದೇವರು, “ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ, ಅವರಿಗೋಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು,” ಎಂದರು.


ಆಗ ಅಬ್ರಹಾಮನು, “ಇಗೋ, ಮಣ್ಣೂ, ಬೂದಿಯೂ ಆಗಿರುವ ನಾನು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ.


ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು