Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:29 - ಕನ್ನಡ ಸಮಕಾಲಿಕ ಅನುವಾದ

29 ಅಬ್ರಹಾಮನು ದೇವರ ಸಂಗಡ ಇನ್ನೂ ಮಾತನಾಡಿ, “ಅಲ್ಲಿ ನಲವತ್ತು ಮಂದಿ ದೊರೆತರೆ, ಏನು ಮಾಡುವಿರಿ?” ಎನ್ನಲು, ಅದಕ್ಕೆ ದೇವರು, “ನಲವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ, “ಒಂದು ವೇಳೆ ಅಲ್ಲಿ ನಲ್ವತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ನಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶ ಮಾಡುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅಬ್ರಹಾಮನು ಇನ್ನೂ ಮುಂದುವರೆದು, “ಒಂದು ವೇಳೆ ಅಲ್ಲಿ ನಲವತ್ತು ಮಂದಿ ಸಿಕ್ಕಾರು"ಎನ್ನಲು "ನಲವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಬ್ರಹಾಮನು ಆತನ ಸಂಗಡ ಇನ್ನೂ ಮಾತಾಡಿ - ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಎನ್ನಲು ಆತನು - ನಾಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶಮಾಡುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮತ್ತೆ ಅಬ್ರಹಾಮನು ದೇವರಿಗೆ, “ಕೇವಲ ನಲವತ್ತು ಮಂದಿ ನೀತಿವಂತರನ್ನು ಕಂಡರೆ, ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಲವತ್ತು ಮಂದಿ ನೀತಿವಂತರನ್ನು ಕಂಡರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:29
4 ತಿಳಿವುಗಳ ಹೋಲಿಕೆ  

ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.


ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.


ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ, ಆ ಐದು ಮಂದಿ ಇಲ್ಲದ್ದರಿಂದ ಪಟ್ಟಣವನ್ನು ನಾಶಮಾಡುವಿರೋ?” ಎಂದು ಕೇಳಿದನು. ಅದಕ್ಕೆ ದೇವರು, “ನಲವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವುದಿಲ್ಲ,” ಎಂದರು.


ಅವನು, “ಯೆಹೋವ ದೇವರಿಗೆ ಕೋಪಬಾರದೆ ಇರಲಿ, ನಾನು ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಇದ್ದರೆ,” ಎಂದಾಗ, ದೇವರು, “ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ, ನಾಶಮಾಡುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು