Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:32 - ಕನ್ನಡ ಸಮಕಾಲಿಕ ಅನುವಾದ

32 ಆಗ ಅವನು, “ಯೆಹೋವ ದೇವರೇ, ನಿಮಗೆ ಕೋಪಬಾರದೆ ಇರಲಿ. ಇನ್ನು ಒಂದೇ ಸಾರಿ ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಿದರೆ,” ಎಂದಾಗ, ದೇವರು, “ಹತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅಬ್ರಹಾಮನು, “ಸ್ವಾಮೀ, ಸಿಟ್ಟುಗೊಳ್ಳಬೇಡಿ; ಇನ್ನು ಒಂದೇ ಒಂದು ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತೇ ಮಂದಿ ಸಿಕ್ಕಾರು” ಎನ್ನಲು, ಸರ್ವೇಶ್ವರ, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅಬ್ರಹಾಮನು - ಸ್ವಾಮೀ, ನಿನಗೆ ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು ಎನ್ನಲು ಆತನು - ಹತ್ತು ಮಂದಿಯ ನಿವಿುತ್ತವೂ ಅದನ್ನು ಉಳಿಸುವೆನು, ನಾಶಮಾಡುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆಮೇಲೆ ಅಬ್ರಹಾಮನು, “ಯೆಹೋವನೇ, ದಯಮಾಡಿ ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಇದೊಂದು ಸಲ ಮಾತ್ರ ಪ್ರಶ್ನೆ ಕೇಳುವೆ. ಹತ್ತು ಮಂದಿ ನೀತಿವಂತರನ್ನು ಕಂಡರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಾನು ಆ ಪಟ್ಟಣದಲ್ಲಿ ಹತ್ತು ಮಂದಿ ನೀತಿವಂತರನ್ನು ಕಂಡರೂ, ಅದನ್ನು ನಾಶಮಾಡುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:32
21 ತಿಳಿವುಗಳ ಹೋಲಿಕೆ  

ಗಿದ್ಯೋನನು ದೇವರಿಗೆ, “ನಾನು ಇನ್ನೊಂದು ಸಾರಿ ಮಾತನಾಡುವುದರಿಂದ ನಿಮ್ಮ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆಯ ತುಪ್ಪಟದಿಂದ ಇನ್ನೊಂದು ಸಾರಿ ನಾನು ನಿಮ್ಮನ್ನು ಶೋಧಿಸುವೆನು. ತುಪ್ಪಟ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ,” ಎಂದನು.


“ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ಯೆಹೋವ ದೇವರು ಹೀಗೆನ್ನುತ್ತಾರೆ: “ರಸ ದೊರೆಯಬಹುದಾದ ದ್ರಾಕ್ಷಿ ಗೊಂಚಲನ್ನು ಒಬ್ಬನು ನೋಡಿ, ‘ಹಾಳು ಮಾಡಬೇಡ, ಅದರಲ್ಲಿ ಪ್ರಯೋಜನವಿದೆ,’ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದುಕೊಳ್ಳುವೆನು.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ಆಗ ಸಹಸ್ರ ದೂತರಲ್ಲಿ ಒಬ್ಬನು ಮಧ್ಯಸ್ಥನಾಗಿ ಆ ಮನುಷ್ಯನ ಯಥಾರ್ಥತೆಯನ್ನು ತಿಳಿಸುವುದಕ್ಕೆ ಅವನ ಬಳಿಯಲ್ಲಿದ್ದರೆ,


ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು.


ಅವನು, “ಯೆಹೋವ ದೇವರಿಗೆ ಕೋಪಬಾರದೆ ಇರಲಿ, ನಾನು ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಇದ್ದರೆ,” ಎಂದಾಗ, ದೇವರು, “ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ, ನಾಶಮಾಡುವುದಿಲ್ಲ,” ಎಂದರು.


ಅವನು, “ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಬಂದಿದ್ದೇನೆ. ಒಂದು ವೇಳೆ ಇಪ್ಪತ್ತು ಮಂದಿ ಸಿಕ್ಕಿದರೆ ಏನು ಮಾಡುವಿರಿ?” ಎಂದನು. ಅದಕ್ಕೆ ದೇವರು, “ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.


ಯೆಹೂದನು ಅವನ ಸಮೀಪಕ್ಕೆ ಬಂದು, “ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಏಕೆಂದರೆ ನೀನು ಫರೋಹನಿಗೆ ಸಮಾನನು.


“ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು