Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:12 - ಕನ್ನಡ ಸಮಕಾಲಿಕ ಅನುವಾದ

12 ಆ ದೂತರಿಬ್ಬರು ಲೋಟನಿಗೆ, “ಇಲ್ಲಿ ನಿನಗೆ ಇನ್ನೂ ಯಾರಾದರೂ ಇದ್ದಾರೋ? ನಿನ್ನ ಅಳಿಯಂದಿರನ್ನೂ, ನಿನ್ನ ಪುತ್ರರನ್ನೂ, ಪುತ್ರಿಯರನ್ನೂ, ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಈ ಸ್ಥಳದಿಂದ ಹೊರಗೆ ಕರೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಳಿಕ ಆ ಮನುಷ್ಯರಿಬ್ಬರು ಲೋಟನಿಗೆ, “ನಿನಗೆ ಇಲ್ಲಿ ಯಾರು ಯಾರು ಇದ್ದಾರೆಯೋ, ಗಂಡುಹೆಣ್ಣು ಮಕ್ಕಳು, ಅಳಿಯಂದಿರು ಹಾಗೂ ಪಟ್ಟಣದಲ್ಲಿ ನಿನಗಿರುವ ಬೇರೆ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಆ ದೂತರು ಲೋಟನಿಗೆ - ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಬೇರೆ ಎಲ್ಲರನ್ನೂ ಊರಹೊರಕ್ಕೆ ಕರೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಇಬ್ಬರು ಪುರುಷರು ಲೋಟನಿಗೆ, “ನಿನ್ನ ಕುಟುಂಬದ ಬೇರೆ ಯಾರಾದರೂ ಈ ನಗರದಲ್ಲಿ ಇದ್ದಾರೆಯೇ? ನಿನಗೆ ಅಳಿಯಂದಿರಾಗಲಿ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇಲ್ಲಿ ವಾಸವಾಗಿದ್ದಾರೆಯೇ? ನಿನ್ನ ಕುಟುಂಬದ ಯಾರಾದರೂ ಈ ನಗರದಲ್ಲಿದ್ದರೆ ಈಗಲೇ ಇಲ್ಲಿಂದ ಹೊರಡುವಂತೆ ಅವರಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:12
13 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನೋಹನಿಗೆ, “ನೀನೂ, ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಸೇರಿಕೊಳ್ಳಿರಿ. ಏಕೆಂದರೆ ಈ ಕಾಲದವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವುದನ್ನು ನಾನು ನೋಡಿದ್ದೇನೆ.


ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “ ‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’


ದೇವರು ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದರು.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು.


ಅವರನ್ನು ಹೊರಗೆ ತಂದಮೇಲೆ ಅವರಲ್ಲಿ ಒಬ್ಬನು, “ಹಿಂದಕ್ಕೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ. ನೀನು ನಾಶವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗು,” ಎಂದನು.


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ಬೇಗನೆ ತಪ್ಪಿಸಿಕೊಂಡು ಅಲ್ಲಿಗೆ ಹೋಗು, ಏಕೆಂದರೆ ನೀನು ಅಲ್ಲಿ ಸೇರುವ ತನಕ ನಾನೇನೂ ಮಾಡಲಾರೆನು,” ಎಂದನು. ಆದ್ದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.


ಆಗ ಲೋಟನು ಹೊರಟುಹೋಗಿ, ತನ್ನ ಪುತ್ರಿಯರನ್ನು ಗೊತ್ತುಮಾಡಿದ್ದ ಅಳಿಯಂದಿರ ಸಂಗಡ ಮಾತನಾಡಿ, “ಎದ್ದು ಈ ಸ್ಥಳದಿಂದ ಹೊರಡಿರಿ. ಏಕೆಂದರೆ ಯೆಹೋವ ದೇವರು ಈ ಪಟ್ಟಣವನ್ನು ನಾಶಮಾಡುವುದಕ್ಕಿದ್ದಾರೆ,” ಎಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಪರಿಹಾಸ್ಯಮಾಡುವಂತೆ ಕಾಣಿಸಿದನು.


ಬಾಗಿಲಲ್ಲಿದ್ದವರನ್ನು ಕಿರಿಯರಿಂದ ಹಿರಿಯರವರೆಗೆ ಕುರುಡಾಗುವಂತೆ ಮಾಡಿದರು. ಆಗ ಆ ಊರಿನವರು ಬಾಗಿಲನ್ನು ಕಂಡುಕೊಳ್ಳದೆ ಬೇಸರಗೊಂಡರು.


ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.”


“ನನ್ನ ಜನರೇ, ಅದರೊಳಗಿಂದ ಹೊರಡಿರಿ. ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ಯೆಹೋವ ದೇವರ ಕೋಪಕ್ಕೆ ತಪ್ಪಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು