Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:13 - ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಂದ ಆಪಾದನೆ ದೊಡ್ಡದಾದುದರಿಂದ ಇವರನ್ನು ನಾಶಮಾಡುವುದಕ್ಕಾಗಿ ಸರ್ವೇಶ್ವರ ನಮ್ಮನ್ನು ಕಳಿಸಿದ್ದಾರೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವು ಈ ಸ್ಥಳವನ್ನು ನಾಶಮಾಡುವದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:13
21 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವ ದೇವರು, “ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿದೆ. ಅವರ ಪಾಪವೂ ಘೋರವಾಗಿದೆ.


ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.


ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’ ” ಎಂದನು.


ಕೆಡುಕರಿಗೆ ಕಷ್ಟ! ಅವರಿಗೆ ಕೇಡೇ ಇರಲಿ. ಏಕೆಂದರೆ ಅವರ ಕೈಗಳ ಪ್ರತಿಫಲವು ಅವರಿಗೆ ಕೊಡಲಾಗುವುದು.


ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.


ಆ ದೂತರಿಬ್ಬರು ಲೋಟನಿಗೆ, “ಇಲ್ಲಿ ನಿನಗೆ ಇನ್ನೂ ಯಾರಾದರೂ ಇದ್ದಾರೋ? ನಿನ್ನ ಅಳಿಯಂದಿರನ್ನೂ, ನಿನ್ನ ಪುತ್ರರನ್ನೂ, ಪುತ್ರಿಯರನ್ನೂ, ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಈ ಸ್ಥಳದಿಂದ ಹೊರಗೆ ಕರೆದುಕೊಂಡು ಬಾ.


ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.


ನಾನು ಈ ದಿನ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆದು, ನಿಮಗೆ ಹೇಳುವುದೇನೆಂದರೆ, ನೀವು ಯೊರ್ದನನ್ನು ದಾಟಿ ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ, ಸಂಪೂರ್ಣವಾಗಿ ನಶಿಸುವಿರಿ.


ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಕೇಳದೆ ಅವರು ನಿಮಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ನಿಯಮಗಳನ್ನೂ ಕೈಗೊಳ್ಳದೆ ಇದ್ದುದರಿಂದ, ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬಂದು, ನಿಮ್ಮನ್ನು ನಾಶಮಾಡುವವರೆಗೂ ನಿಮ್ಮನ್ನು ಹಿಂದಟ್ಟುವುವು.


ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.


“ಈ ಜನರ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು