Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:21 - ಕನ್ನಡ ಸಮಕಾಲಿಕ ಅನುವಾದ

21 ದೂತನು ಅವನಿಗೆ, “ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ. ನೋಡು, ನೀನು ಹೇಳಿದ ಆ ಊರನ್ನು ನಾನು ಕೆಡವಿ ಹಾಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕಾತನು, “ಸರಿ, ಹಾಗೆಯೇ ಆಗಲಿ, ಈ ನಿನ್ನ ಕೋರಿಕೆಯನ್ನೂ ನೆರವೇರಿಸುತ್ತೇನೆ, ನೀನು ಹೇಳಿದ ಆ ಊರನ್ನು ಹಾಳುಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಕ್ಕಾತನು - ಈ ವಿಷಯದಲ್ಲಿಯೂ ನಿನಗೆ ಅನುಗ್ರಹಮಾಡಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡಹುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಪುರುಷನು ಲೋಟನಿಗೆ, “ಆಗಲಿ, ನಿನಗೆ ಅಪ್ಪಣೆ ಕೊಟ್ಟಿದ್ದೇನೆ. ನಾನು ಆ ಊರನ್ನು ನಾಶಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:21
16 ತಿಳಿವುಗಳ ಹೋಲಿಕೆ  

ತಮಗೆ ಭಯಪಡುವವರ ಇಷ್ಟವನ್ನು ನೆರವೇರಿಸುತ್ತಾರೆ. ಅವರ ಮೊರೆಯನ್ನು ಕೇಳಿ, ಅವರನ್ನು ರಕ್ಷಿಸುತ್ತಾರೆ.


ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.


ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ, ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ಅವನು ಸ್ನೇಹಿತನಾಗಿರುವುದರಿಂದ ಎದ್ದು ಇವನಿಗೆ ಕೊಡದೆಹೋದರೂ ಮೇಲಿಂದ ಮೇಲೆ ನಾಚಿಕೆಪಡದೆ ಬೇಡುವುದರಿಂದ ಎದ್ದು ಇವನಿಗೆ ಬೇಕಾದಷ್ಟು ಕೊಡುವನು.


ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, ಜಜ್ಜಿದ ದಂಟನ್ನು ಮುರಿಯುವವನಲ್ಲ, ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ.


ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ, ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?


“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.


ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.


ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”


ಆ ಪಟ್ಟಣವನ್ನು ನೋಡಿರಿ. ನಾನು ಅಲ್ಲಿಗೆ ಓಡಿಹೋಗಲು ಸಮೀಪವಾಗಿದೆ ಮತ್ತು ಅದು ಸಣ್ಣದು. ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುತ್ತೇನೆ. ಇದರಿಂದ ನನ್ನ ಪ್ರಾಣವು ಉಳಿಯುವುದು,” ಎಂದನು.


ಬೇಗನೆ ತಪ್ಪಿಸಿಕೊಂಡು ಅಲ್ಲಿಗೆ ಹೋಗು, ಏಕೆಂದರೆ ನೀನು ಅಲ್ಲಿ ಸೇರುವ ತನಕ ನಾನೇನೂ ಮಾಡಲಾರೆನು,” ಎಂದನು. ಆದ್ದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.


ಅವಳು ತನಗೆ ತಂದದ್ದನ್ನು ದಾವೀದನು ತೆಗೆದುಕೊಂಡು ಅವಳಿಗೆ, “ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ನಾನು ನಿನ್ನ ಮಾತನ್ನು ಕೇಳಿ ನಿನ್ನ ಮುಖ ದಾಕ್ಷಿಣ್ಯವನ್ನು ನೋಡಿದೆನು,” ಎಂದನು.


ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು