Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:3 - ಕನ್ನಡ ಸಮಕಾಲಿಕ ಅನುವಾದ

3 ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ, ಅವರು ತಿರುಗಿಬಂದು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣ ಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿದನು. ಅವರು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು, “ಇಲ್ಲ, ನಾವು ಬೀದಿಯಲ್ಲೇ ರಾತ್ರಿಯನ್ನು ಕಳೆಯುತ್ತೇವೆ,” ಎಂದು ಉತ್ತರಿಸಿದರು. ಅವನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅವನ ಮನೆಯಲ್ಲೇ ತಂಗಲು ಒಪ್ಪಿಕೊಂಡರು. ಅವರು ಮನೆಗೆ ಬಂದಾಗ ಲೋಟನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಸಿದ್ಧಗೊಳಿಸಿದನು; ಅವರು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅನ್ನಲು ಅವನು ಅವರನ್ನು ಬಹಳ ಬಲವಂತಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಲೋಟನು ತನ್ನ ಮನೆಗೆ ಬರುವಂತೆ ಒತ್ತಾಯಿಸಿದ್ದರಿಂದ ಅವರು ಅವನ ಮನೆಗೆ ಹೋದರು. ಲೋಟನು ಅವರಿಗಾಗಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಅಡಿಗೆ ಮಾಡಿಸಿದನು. ದೇವದೂತರು ಅದನ್ನು ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:3
18 ತಿಳಿವುಗಳ ಹೋಲಿಕೆ  

ಆ ಸ್ತ್ರೀಯ ಮನೆಯಲ್ಲಿ ಒಂದು ಕೊಬ್ಬಿದ ಕರುವು ಇತ್ತು. ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ನಾದಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು,


ಆಗ ಗಿದ್ಯೋನನು ಒಳಗೆ ಹೋಗಿ, ಒಂದು ಮೇಕೆಯ ಮರಿಯನ್ನೂ, ಹದಿನಾರು ಕಿಲೋಗ್ರಾಂ ಹಿಟ್ಟಿನಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿ, ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು, ರಸವನ್ನು ಪಾತ್ರೆಯಲ್ಲಿ ಹೊಯ್ದು, ಅದನ್ನು ಹೊರಗೆ ಏಲಾ ಮರದ ಕೆಳಗೆ ಇದ್ದ ಅವರ ಬಳಿಯಲ್ಲಿ ತಂದಿಟ್ಟನು.


ಪರಕೀಯರಿಗೆ ಸತ್ಕಾರ ಮಾಡುವುದನ್ನು ಅಲಕ್ಷ್ಯ ಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರ ಮೂಲಕ, ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಆದಕಾರಣ ಹಗೆತನ, ದುಷ್ಟತನ, ಎಂಬ ಹಳೇ ಹುಳಿಯಿಂದಲ್ಲ, ಯಥಾರ್ಥತೆ ಹಾಗೂ ಸತ್ಯ ಎಂಬ ಹುಳಿಯಿಲ್ಲದ ರೊಟ್ಟಿಯಿಂದಲೇ ಹಬ್ಬವನ್ನು ಆಚರಿಸೋಣ.


ಆಗ ಅವರು ಈಜಿಪ್ಟಿನಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿಯಾಗದ ಕಾರಣ, ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿದರು. ಏಕೆಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಈಜಿಪ್ಟಿನಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ.


ಕ್ರಿಸ್ತ ಯೇಸುವಿನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ. ಏಕೆಂದರೆ, ಎಲ್ಲರಿಗೋಸ್ಕರ ಕ್ರಿಸ್ತ ಯೇಸು ಸತ್ತದ್ದರಿಂದ, ಎಲ್ಲರೂ ಸತ್ತಂತಾಯಿತು.


ಅಲ್ಲಿ ಅವರು ಯೇಸುವಿಗಾಗಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟಕ್ಕೆ ಕುಳಿತವರಲ್ಲಿ ಲಾಜರನೂ ಒಬ್ಬನಾಗಿದ್ದನು.


“ಆಗ ಯಜಮಾನನು ಸೇವಕನಿಗೆ, ‘ನೀನು ಬೀದಿಗಳಿಗೂ ಓಣಿಗಳಿಗೂ ಹೊರಟುಹೋಗಿ ನನ್ನ ಮನೆ ತುಂಬುವಂತೆ, ಇಲ್ಲಿ ಬರುವುದಕ್ಕೆ ಕಂಡವರನ್ನು ಬಲವಂತಮಾಡು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ಅವನು ಸ್ನೇಹಿತನಾಗಿರುವುದರಿಂದ ಎದ್ದು ಇವನಿಗೆ ಕೊಡದೆಹೋದರೂ ಮೇಲಿಂದ ಮೇಲೆ ನಾಚಿಕೆಪಡದೆ ಬೇಡುವುದರಿಂದ ಎದ್ದು ಇವನಿಗೆ ಬೇಕಾದಷ್ಟು ಕೊಡುವನು.


ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಯೇಸುವಿಗೆ ದೊಡ್ಡ ಔತಣವನ್ನು ಮಾಡಿಸಲು, ಬಹಳ ಜನ ಸುಂಕದವರು ಮತ್ತು ಇತರರು ಯೇಸುವಿನೊಂದಿಗೆ ಊಟಮಾಡುತ್ತಿದ್ದರು.


ಒಂದು ದಿನ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬಳು ಶ್ರೀಮಂತ ಸ್ತ್ರೀಯು ಇದ್ದಳು. ಅವಳು ಅವನನ್ನು ಊಟ ಮಾಡಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗಲೆಲ್ಲಾ, ಅಲ್ಲಿ ಊಟ ಮಾಡಲು ಹೋಗುತ್ತಿದ್ದನು.


ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.


ಇಸಾಕನು ಬೆಳೆದು ಬಾಲಕನಾಗಿ ತಾಯಿಯ ಹಾಲು ಕುಡಿಯುವುದನ್ನು ಬಿಟ್ಟನು. ಆ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣ ಮಾಡಿಸಿದನು.


“ಸ್ವಾಮಿಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ತಂಗಿ, ರಾತ್ರಿ ಕಳೆಯಿರಿ. ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ. ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ಹಾಗಲ್ಲ, ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ,” ಎಂದರು.


ಲಾಬಾನನು ಅವನಿಗೆ, “ಯೆಹೋವ ದೇವರಿಂದ ಆಶೀರ್ವಾದ ಪಡೆದವನೇ, ಒಳಗೆ ಬಾ, ಏಕೆ ಹೊರಗೆ ನಿಂತಿರುವೆ? ನಾನು ಮನೆಯನ್ನೂ, ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ,” ಎಂದನು.


ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ತಿಂದು ಕುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು