Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:5 - ಕನ್ನಡ ಸಮಕಾಲಿಕ ಅನುವಾದ

5 ಭೂಮಿಯಲ್ಲಿ ಯಾವ ಗಿಡವೂ ಇನ್ನೂ ಬೆಳೆದಿರಲಿಲ್ಲ, ಯಾವ ಪಲ್ಯವೂ ಇನ್ನೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ. ಆಗ ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವರಾದ ಸರ್ವೇಶ್ವರ ಸ್ವಾಮಿ ಪರಲೋಕ - ಭೂಲೋಕಗಳನ್ನು ಸೃಷ್ಟಿಮಾಡಿದಾಗ ಯಾವ ಗಿಡಗಳೂ ಭೂಮಿಯಲ್ಲಿ ಇರಲಿಲ್ಲ. ಯಾವ ಬೀಜವೂ ಮೊಳೆತಿರಲಿಲ್ಲ. ಏಕೆಂದರೆ ದೇವರಾದ ಸರ್ವೇಶ್ವರ ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡಲು ಮನುಷ್ಯನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ಗಿಡವಾದರೂ ಭೂವಿುಯಲ್ಲಿ ಇರಲಿಲ್ಲ, ಯಾವ ಪಲ್ಯವೂ ಹುಟ್ಟಿರಲಿಲ್ಲ. ಯಾಕಂದರೆ ಯೆಹೋವದೇವರು ಭೂವಿುಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ; ಭೂವಿುಯನ್ನು ವ್ಯವಸಾಯ ಮಾಡುವದಕ್ಕೆ ಮನುಷ್ಯನೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಭೂಮಿಯ ಮೇಲೆ ಯಾವ ಮರಗಿಡಗಳೂ ಇರಲಿಲ್ಲ. ಭೂಮಿಯ ಮೇಲೆ ಯಾವ ಸಸಿಯೂ ಬೆಳೆಯುತ್ತಿರಲಿಲ್ಲ; ಯಾಕೆಂದರೆ ಯೆಹೋವನು ಭೂಮಿಯ ಮೇಲೆ ಇನ್ನೂ ಮಳೆಯನ್ನು ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡಲು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:5
15 ತಿಳಿವುಗಳ ಹೋಲಿಕೆ  

ಆದ್ದರಿಂದ ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕೆ ಯೆಹೋವ ದೇವರು ಏದೆನ್ ತೋಟದೊಳಗಿಂದ ಅವನನ್ನು ಹೊರಗೆ ಕಳುಹಿಸಿಬಿಟ್ಟರು.


ಭೂಮಿಯು ತನ್ನ ಮೇಲೆ ಆಗಾಗ್ಗೆ ಬೀಳುವ ಮಳೆಯನ್ನು ಹೀರಿಕೊಂಡು ಅದು ತನ್ನ ಒಡೆಯನಿಗೆ ಯೋಗ್ಯವಾದ ಬೆಳೆಯನ್ನು ಕೊಡುವುದಾದರೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.


ಭೂಮಿಯ ಮೇಲೆ ಮಳೆಯನ್ನು ಕೊಡುತ್ತಾರೆ; ಹೊಲಗಳ ಮೇಲೆ ನೀರನ್ನು ಸುರಿಸುತ್ತಾರೆ.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.


ಅನಂತರ ಆಕೆಯು ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾದನು ಮತ್ತು ಕಾಯಿನನು ವ್ಯವಸಾಯ ಮಾಡುವವನಾದನು.


ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.


ಭೂಮಿಯ ಎಲ್ಲಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಯನ್ನೂ ಮಿಂಚನ್ನೂ ಕಳುಹಿಸುತ್ತಾರೆ. ಗಾಳಿಯನ್ನು ತಮ್ಮ ಉಗ್ರಾಣಗಳಿಂದ ಬೀಸುವಂತೆ ಮಾಡುತ್ತಾರೆ.


ದೇವರು ಪಶುಗಳಿಗೋಸ್ಕರ ಹುಲ್ಲನ್ನೂ, ಮನುಷ್ಯನ ವ್ಯವಸಾಯಕ್ಕೋಸ್ಕರ ಪಲ್ಯಗಳನ್ನೂ ಮೊಳೆಸುತ್ತಾರೆ. ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾರೆ.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.


ಆದರೆ ಭೂಮಿಯಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸಿತು.


ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.


ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ. ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು