Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:16 - ಕನ್ನಡ ಸಮಕಾಲಿಕ ಅನುವಾದ

16 ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣವನ್ನು ಕೊಟ್ಟಿದ್ದೇನೆ. ನೋಡು, ನಡೆದ ಘಟನೆಗೆ ಇದು ಪ್ರಾಯಶ್ಚಿತ್ತವಾಗಿದೆ. ನಿನ್ನ ಸಂಗಡ ಇರುವವರೆಲ್ಲರಿಗೂ ಉಳಿದವರೆಲ್ಲರಿಗೂ ನೀನು ನಿರ್ದೋಷಿಯೆಂದು ಇದು ಸಾಕ್ಷಿಯಾಗಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಅವನು ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಾರಳಿಗೆ ಅವನು ಹೇಳಿದ್ದೇನೆಂದರೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದೇನೆ. ಇದರಿಂದ ನೀನು ನಿರ್ದೋಷಿಯೆಂದು ರುಜುವಾತಾಗಲಿ; ನೀನು ತಪ್ಪು ಮಾಡಿಲ್ಲವೆಂದು ಎಲ್ಲರಿಗೂ ಸ್ಪಷ್ಟವಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಅವನು ಸಾರಳಿಗೆ - ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಲಕ್ಷ್ಯಕ್ಕೆ ತೆಗೆದುಕೊಳ್ಳದಂತೆ ಇದು ಪ್ರಾಯಶ್ಚಿತ್ತವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಬೀಮೆಲೆಕನು ಸಾರಳಿಗೆ, “ನಾನು ನಿನ್ನ ಅಣ್ಣನಾದ ಅಬ್ರಹಾಮನಿಗೆ ಒಂದು ಸಾವಿರ ಬೆಳ್ಳಿಯ ನಾಣ್ಯಗಳನ್ನು ಕೊಡುವೆ. ನಡೆದ ಈ ಘಟನೆಗಳಿಗೆ ಇದು ಪ್ರಾಯಶ್ಚಿತ್ತವಾಗಿದೆ. ನೀನು ನಿಷ್ಕಳಂಕಳೆಂದು ಇದು ಪ್ರತಿಯೊಬ್ಬರಿಗೂ ಸಾಕ್ಷಿಯಾಗಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:16
11 ತಿಳಿವುಗಳ ಹೋಲಿಕೆ  

ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.


ಅವನು ನನಗೆ, ‘ಅವಳು ನನ್ನ ತಂಗಿ,’ ಎಂದು ಹೇಳಲಿಲ್ಲವೋ? ಅವಳೇ, ‘ಅವನು ನನ್ನ ಅಣ್ಣ,’ ಎಂದು ಹೇಳಿದ್ದಾಳೆ. ಆದ್ದರಿಂದ ನಾನು ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಹಸ್ತದಿಂದಲೂ ಇದನ್ನು ಮಾಡಿದ್ದೇನೆ,” ಎಂದನು.


ಆಕೆಯು ಆ ಸೇವಕನಿಗೆ, “ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು?” ಎಂದಳು. ಅದಕ್ಕೆ ಸೇವಕನು, “ಅವನೇ ನನ್ನ ಯಜಮಾನನು,” ಎಂದಾಗ, ಆಕೆಯು ಮುಸುಕು ಹಾಕಿಕೊಂಡಳು.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು, “ನೀನು ನಿದ್ರೆ ಮಾಡುವುದೇಕೆ? ಎದ್ದು ನಿನ್ನ ದೇವರನ್ನು ಪ್ರಾರ್ಥಿಸು. ಒಂದು ವೇಳೆ ನಿನ್ನ ದೇವರು ನಮ್ಮ ಮೇಲೆ ಲಕ್ಷ್ಯವಿಟ್ಟು, ನಾವು ನಾಶವಾಗದಂತೆ ಕಾಪಾಡಿಯಾರು!” ಎಂದನು.


ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.


ಶಿಸ್ತನ್ನು ಪ್ರೀತಿಸುವವನು ಪರಿಜ್ಞಾನವನ್ನು ಪ್ರೀತಿಸುವವನಾಗಿದ್ದಾನೆ, ಆದರೆ ತಿದ್ದುವಿಕೆಯನ್ನು ಹಗೆಮಾಡುವವನು ದಡ್ಡನು.


ಅಬೀಮೆಲೆಕನು ತನ್ನ ಜನರಿಗೆಲ್ಲಾ, “ಈ ಮನುಷ್ಯನನ್ನಾಗಲಿ, ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು,” ಎಂದು ಅಪ್ಪಣೆಕೊಟ್ಟನು.


ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆಮಾಡಿದನು. ದೇವರು ಅಬೀಮೆಲೆಕನನ್ನೂ, ಅವನ ಹೆಂಡತಿಯನ್ನೂ ದಾಸಿಯರನ್ನೂ ವಾಸಿಮಾಡಿದರು. ಆದ್ದರಿಂದ ಅವರಿಗೆ ಮಕ್ಕಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು