Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:17 - ಕನ್ನಡ ಸಮಕಾಲಿಕ ಅನುವಾದ

17 ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆಮಾಡಿದನು. ದೇವರು ಅಬೀಮೆಲೆಕನನ್ನೂ, ಅವನ ಹೆಂಡತಿಯನ್ನೂ ದಾಸಿಯರನ್ನೂ ವಾಸಿಮಾಡಿದರು. ಆದ್ದರಿಂದ ಅವರಿಗೆ ಮಕ್ಕಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತರುವಾಯ ಅಬ್ರಹಾಮನು ಅಬೀಮೆಲೆಕನಿಗೋಸ್ಕರ ದೇವರಲ್ಲಿ ಪ್ರಾರ್ಥನೆ ಮಾಡಿದನು. ದೇವರು ಅಬೀಮೆಲೆಕನನ್ನು, ಅವನ ಪತ್ನಿಯನ್ನು ಹಾಗೂ ದಾಸಿಯರನ್ನು ಗುಣಪಡಿಸಿದನು; ಅವರಿಗೆ ಮಕ್ಕಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ ಅವನ ಪತ್ನಿಯನ್ನೂ ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17-18 ದೇವರು ಅಬೀಮೆಲೆಕನ ಕುಟುಂಬದಲ್ಲಿರುವ ಎಲ್ಲ ಸ್ತ್ರೀಯರನ್ನು ಬಂಜೆಯರನ್ನಾಗಿ ಮಾಡಿದ್ದನು. ಅಬ್ರಹಾಮನ ಹೆಂಡತಿಯಾದ ಸಾರಳನ್ನು ಅಬೀಮೆಲೆಕನು ಕರೆಸಿಕೊಂಡಿದ್ದೇ ಅದಕ್ಕೆ ಕಾರಣ. ಅಬ್ರಹಾಮನು ದೇವರಲ್ಲಿ ಪ್ರಾರ್ಥಿಸಿದಾಗ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಸೇವಕಿಯರನ್ನೂ ಗುಣಪಡಿಸಿದ್ದರಿಂದ ಅವರಿಗೆ ಮಕ್ಕಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:17
18 ತಿಳಿವುಗಳ ಹೋಲಿಕೆ  

ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


ಪ್ರಿಯರೇ, ನಮಗಾಗಿ ಪ್ರಾರ್ಥಿಸಿರಿ.


ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು.


“ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


“ಇಸ್ರಾಯೇಲಿನ ಪರಿಶುದ್ಧನೂ, ಅದನ್ನು ರೂಪಿಸಿದವನೂ ಆಗಿರುವ ಯೆಹೋವ ದೇವರು, ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ, ನನ್ನ ಕೈಕೆಲಸದ ವಿಷಯವಾಗಿಯೂ ನೀವು ನನಗೆ ಆಜ್ಞಾಪಿಸುವುದೇನು?


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ಇದಲ್ಲದೆ ಅವರು ಪರಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ, ಅರಸನ ಪ್ರಾಣಕ್ಕೋಸ್ಕರವೂ, ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡಬೇಕು.


ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು.


ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸಿಬಿಡು. ಏಕೆಂದರೆ ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವಂತೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ, ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ,” ಎಂದರು.


“ಸಮುಯೇಲನು ಮೊದಲುಗೊಂಡು, ಮಾತನಾಡಿದ ಎಲ್ಲಾ ಪ್ರವಾದಿಗಳು ಕ್ರಮವಾಗಿ ಈ ದಿನಗಳನ್ನು ಕುರಿತು ಮುಂತಿಳಿಸಿದ್ದಾರೆ.


ಯೆಹೋವ ದೇವರು ದುಷ್ಟರಿಗೆ ದೂರ; ಆದರೆ ನೀತಿವಂತರ ಪ್ರಾರ್ಥನೆಯನ್ನು ಅವರು ಕೇಳುತ್ತಾರೆ.


ಮೋಶೆಯು ಯೆಹೋವ ದೇವರಿಗೆ, “ದೇವರೇ, ಅವಳನ್ನು ಈಗ ಗುಣಪಡಿಸು, ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು.


ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.


ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.


ಆದರೆ ಯೆಹೋವ ದೇವರು ಫರೋಹನನ್ನೂ, ಅವನ ಮನೆಯನ್ನೂ ಅಬ್ರಾಮನ ಹೆಂಡತಿ ಸಾರಯಳಿಗಾಗಿ ಭಯಂಕರವಾದ ರೋಗಗಳಿಂದ ಬಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು