Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:17 - ಕನ್ನಡ ಸಮಕಾಲಿಕ ಅನುವಾದ

17 ದೇವರು ಆ ಹುಡುಗನ ಅಳುವ ಸ್ವರವನ್ನು ಕೇಳಿದರು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು, ಆಕೆಗೆ, “ಹಾಗರಳೇ, ವ್ಯಥೆಪಡುವುದೇಕೆ? ಅಂಜಬೇಡ ದೇವರು ಹುಡುಗನ ಸ್ವರವನ್ನು ಕೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು - ಹಾಗರಳೇ, ನಿನಗೇನಾಯಿತು? ಅಂಜಬೇಡ; ಆ ಹುಡುಗನು ಬಿದ್ದಿರುವ ಸ್ಥಳದಿಂದಲೇ ಅವನ ಶಬ್ದವು ದೇವರಿಗೆ ಕೇಳಿಸಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವದೂತನು ಆಕಾಶದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:17
31 ತಿಳಿವುಗಳ ಹೋಲಿಕೆ  

ಅನಂತರ ಯೆಹೋವ ದೇವರ ದೂತನು ಆಕೆಗೆ ಹೀಗೆ ಹೇಳಿದನು: “ನೀನು ಈಗ ಗರ್ಭಿಣಿಯಾಗಿರುವೆ, ಒಬ್ಬ ಮಗನನ್ನು ಹೆರುವೆ. ಅವನಿಗೆ, ಇಷ್ಮಾಯೇಲ್ ಎಂದು ಹೆಸರಿಡಬೇಕು. ಏಕೆಂದರೆ ಯೆಹೋವ ದೇವರು ನಿನ್ನ ವ್ಯಥೆಗೆ ಕಿವಿಗೊಟ್ಟಿದ್ದಾರೆ.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.


ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, “ಭಯಪಡಬೇಡ ನಂಬಿಕೆ ಮಾತ್ರ ಇರಲಿ,” ಎಂದರು.


ಯೇಸು ತಮ್ಮ ಶಿಷ್ಯರನ್ನು ಕರೆದು, “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ, ದಾರಿಯಲ್ಲಿ ಅವರು ಬಳಲಿ ಹೋಗುವರು. ಇವರನ್ನು ಉಪವಾಸವಾಗಿ ಕಳುಹಿಸುವುದಕ್ಕೆ ನನಗೆ ಮನಸ್ಸಿಲ್ಲ,” ಎಂದರು.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ದಿವ್ಯ ದರ್ಶನದ ತಗ್ಗಿನ ವಿಷಯವಾದ ಪ್ರವಾದನೆ: ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?


ಪ್ರಾರ್ಥನೆಯನ್ನು ಕೇಳುವವರೇ, ಎಲ್ಲಾ ಜನರು ನಿಮ್ಮ ಬಳಿಗೆ ಬರುವರು.


ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.


ಆಗ ಯೆಹೋವಾಹಾಜನು ಯೆಹೋವ ದೇವರನ್ನು ಬೇಡಿಕೊಂಡದ್ದರಿಂದ ಯೆಹೋವ ದೇವರು ಅವನ ಮೊರೆಯನ್ನು ಕೇಳಿದರು. ಅರಾಮ್ಯರ ಅರಸನು ಇಸ್ರಾಯೇಲರನ್ನು ಬಾಧೆಪಡಿಸಿದ್ದನ್ನು ಅವರು ಕಂಡು,


ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು, “ಜನರು ಅಳುವುದೇಕೆ?” ಎಂದು ಕೇಳಿದನು. ಅವರು ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.


ದಾನರು ತಮ್ಮ ಮುಖ ತಿರುಗಿಸಿ ಮೀಕನಿಗೆ, “ನೀನು ಗುಂಪು ಕೂಡಿಕೊಂಡು ಬರಲು ನಿನಗೆ ಏನಾಯಿತು?” ಎಂದರು.


ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವುದನ್ನು ಹೊದ್ದುಕೊಂಡು ಮಲಗಿಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ಏಕೆಂದರೆ ನಾನು ಅನುಕಂಪ ಉಳ್ಳವನು.


ನೀವು ಯಾವ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ಕೂಗಿದರೆ ನಾನು ನಿಶ್ಚಯವಾಗಿ ಅವರ ಕೂಗನ್ನು ಕೇಳುವೆನು.


ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.


ದೇವರು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗುವುದಕ್ಕೆ ಭಯಪಡಬೇಡ. ಏಕೆಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡ ಜನಾಂಗವಾಗಮಾಡುವೆನು.


ಯೆಹೋವ ದೇವರ ದೂತನು ಆಕೆಗೆ, “ನಿನ್ನ ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಆಕೆಗೆ ಅಧೀನಳಾಗಿರು,” ಎಂದನು.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಯೆಹೋವ ದೇವರ ದೂತನು ಮರುಭೂಮಿಯಲ್ಲಿ ಶೂರಿನ ಮಾರ್ಗವಾಗಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಹಾಗರಳನ್ನು ಕಂಡು,


ಆಗ ಯೆಹೋವ ದೇವರ ದೂತನು ಆಕಾಶದೊಳಗಿಂದ, “ಅಬ್ರಹಾಮನೇ, ಅಬ್ರಹಾಮನೇ,” ಎಂದು ಅವನನ್ನು ಕರೆದನು. ಅವನು, “ಇಲ್ಲಿ ಇದ್ದೇನೆ,” ಎಂದನು.


ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.


ಆಗ ಯೆಹೋವ ದೇವರ ದೂತನು ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ನೋಡಿದಾಗ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು ಆದಾಗ್ಯೂ ಪೊದೆಯು ಸುಟ್ಟು ಹೋಗಲಿಲ್ಲ.


ಆಗ ನಾವು ನಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ಮೊರೆಯಿಟ್ಟೆವು. ಯೆಹೋವ ದೇವರು ನಮ್ಮ ಸ್ವರವನ್ನು ಕೇಳಿ, ನಮ್ಮ ಸಂಕಟವನ್ನೂ ಕಷ್ಟವನ್ನೂ ದಬ್ಬಾಳಿಕೆಯನ್ನೂ ನೋಡಿದರು.


ಕೆಟ್ಟದ್ದನ್ನು ಮಾಡುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ, ಏಕೆಂದರೆ ಯೆಹೋವ ದೇವರು ನನ್ನ ಗೋಳಾಟವನ್ನು ಕೇಳಿದ್ದಾರೆ.


“ಸಾರಯಳ ದಾಸಿ ಹಾಗರಳೇ, ನೀನು ಎಲ್ಲಿಂದ ಬಂದೆ? ನೀನು ಎಲ್ಲಿಗೆ ಹೋಗುತ್ತೀ?” ಎಂದು ವಿಚಾರಿಸಿದನು. ಅವಳು, “ನನ್ನ ಯಜಮಾನಿ ಸಾರಯಳನ್ನು ಬಿಟ್ಟು ಓಡಿ ಹೋಗುತ್ತಿದ್ದೇನೆ,” ಎಂದಳು.


ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು