Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:1 - ಕನ್ನಡ ಸಮಕಾಲಿಕ ಅನುವಾದ

1 ಕೆಲವು ಕಾಲದ ನಂತರ, ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕಾಗಿ ಅವನಿಗೆ, “ಅಬ್ರಹಾಮನೇ,” ಎಂದು ಕರೆದರು. ಅದಕ್ಕವನು, “ಇಗೋ, ಇಲ್ಲಿದ್ದೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರಿಶೋಧಿಸಿದನು. ಹೇಗಂದರೆ ಆತನು ಅವನನ್ನು - ಅಬ್ರಹಾಮನೇ ಎಂದು ಕರೆಯಲು ಅವನು - ಇಗೋ, ಇದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇವುಗಳಾದ ಮೇಲೆ, ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಲು ನಿರ್ಧರಿಸಿ, “ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:1
24 ತಿಳಿವುಗಳ ಹೋಲಿಕೆ  

ಅಬ್ರಹಾಮನು ಪರೀಕ್ಷೆಗೆ ಒಳಗಾದಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಬಲಿಪೀಠದ ಮೇಲೆ ಅರ್ಪಿಸಿದಾಗ ನೀತಿನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?


ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.


ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.


ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು.


ಅವನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವ ದೇವರು ನೋಡಿದಾಗ, ದೇವರು ಪೊದೆಯೊಳಗಿಂದ ಅವನಿಗೆ, “ಮೋಶೇ, ಮೋಶೇ,” ಎಂದು ಕರೆದರು. ಆಗ ಅವನು, “ನಾನು ಇಲ್ಲಿ ಇದ್ದೇನೆ,” ಎಂದನು.


ಆಗ ಯೆಹೋವ ದೇವರ ದೂತನು ಆಕಾಶದೊಳಗಿಂದ, “ಅಬ್ರಹಾಮನೇ, ಅಬ್ರಹಾಮನೇ,” ಎಂದು ಅವನನ್ನು ಕರೆದನು. ಅವನು, “ಇಲ್ಲಿ ಇದ್ದೇನೆ,” ಎಂದನು.


ಇಸಾಕನು ತನ್ನ ತಂದೆ ಅಬ್ರಹಾಮನಿಗೆ, “ಅಪ್ಪಾ,” ಎಂದನು. ಆಗ ಅಬ್ರಹಾಮನು, “ಏನು ಮಗನೇ?” ಎಂದನು. ಅದಕ್ಕೆ ಅವನು, “ಇಗೋ, ಬೆಂಕಿಯೂ, ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ?” ಎಂದನು.


ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ,” ಎಂದೆನು.


ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.


ಆಗ ಯೆಹೋವ ದೇವರು ಮೋಶೆಗೆ, “ನಾನು ರೊಟ್ಟಿಯನ್ನು ನಿಮಗಾಗಿ ಆಕಾಶದಿಂದ ಸುರಿಸುತ್ತೇನೆ. ಜನರು ಹೊರಗೆ ಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದದ್ದನ್ನು ಕೂಡಿಸಲಿ. ಇದರಿಂದ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳುವರೋ, ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇನೆ.


ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.


ಇಸ್ರಾಯೇಲರು ತಮ್ಮ ತಂದೆಗಳು ಕೈಗೊಂಡು ನಡೆದ ಯೆಹೋವ ದೇವರ ಮಾರ್ಗದಲ್ಲಿ ತಾವು ಕೈಗೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ,


ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.


ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ, ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಅಬ್ರಹಾಮನಿಗೆ ತನ್ನ ಮಗನ ದೆಸೆಯಿಂದ ಬಹು ದುಃಖವಾಯಿತು.


ಆದ್ದರಿಂದ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಸಹೋದರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ. ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು,” ಎಂದನು. ಅದಕ್ಕೆ ಅವನು, “ಆಗಲಿ ಹೋಗುತ್ತೇನೆ,” ಎಂದನು.


ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, “ಯಾಕೋಬನೇ, ಯಾಕೋಬನೇ,” ಎಂದರು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.


ಆಗ ಯೆಹೋವ ದೇವರು ಸಮುಯೇಲನನ್ನು ಕರೆದರು. ಅದಕ್ಕವನು, “ಇಗೋ, ನಾನು ಇಲ್ಲಿದ್ದೇನೆ,” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು