Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:3 - ಕನ್ನಡ ಸಮಕಾಲಿಕ ಅನುವಾದ

3 ಅಬ್ರಹಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಗೆ ತಡಿ ಕಟ್ಟಿ, ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗ ಇಸಾಕನನ್ನೂ, ದಹನಬಲಿಗಳಿಗಾಗಿ ಕಟ್ಟಿಗೆಗಳನ್ನೂ ತೆಗೆದುಕೊಂಡು, ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೆಳಿಗ್ಗೆ ಅಬ್ರಹಾಮನು ಎದ್ದು ಕತ್ತೆಗೆ ತಡಿಹಾಕಿಸಿ ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡಿಸಿ ತನ್ನ ಸೇವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮುಂಜಾನೆ ಅಬ್ರಹಾಮನು ಎದ್ದು ಕತ್ತೆಗೆ ತಡಿ ಹಾಕಿಸಿದನು; ಇಸಾಕನನ್ನೂ ಅವನೊಂದಿಗೆ ಇಬ್ಬರು ಸೇವಕರನ್ನೂ ಕರೆದುಕೊಂಡನು; ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದುಕೊಂಡನು. ಬಳಿಕ ದೇವರು ಹೇಳಿದ್ದ ಸ್ಥಳಕ್ಕೆ ಅವರು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:3
16 ತಿಳಿವುಗಳ ಹೋಲಿಕೆ  

ನಿಮ್ಮ ಆಜ್ಞೆಗಳನ್ನು ಪಾಲಿಸಲು ನಾನು ತಡಮಾಡದೆ ತ್ವರೆಪಟ್ಟಿದ್ದೇನೆ.


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


“ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.


ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.


ಅಬ್ರಹಾಮನು ತನ್ನ ಮಗ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರಿಗೂ ತಾನು ಕ್ರಯಕ್ಕೆ ತೆಗೆದುಕೊಂಡವರೆಲ್ಲರಿಗೂ ಹೀಗೆ ತನ್ನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ದೇವರು ತನಗೆ ಹೇಳಿದ ಹಾಗೆ, ಆ ದಿನವೇ ಸುನ್ನತಿ ಮಾಡಿಸಿದನು.


ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ಆಗ ದೇವರು, “ನೀನು ಪ್ರೀತಿ ಮಾಡುವ ನಿನ್ನ ಒಬ್ಬನೇ ಮಗ ಇಸಾಕನನ್ನು ಈಗ ತೆಗೆದುಕೊಂಡು, ಮೊರೀಯಾ ದೇಶಕ್ಕೆ ಹೋಗಿ, ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು,” ಎಂದರು.


ಮೂರನೆಯ ದಿನ ಅಬ್ರಹಾಮನು ಕಣ್ಣೆತ್ತಿ ನೋಡಿದಾಗ, ಆ ಸ್ಥಳವು ದೂರದಲ್ಲಿ ಕಾಣಿಸಿತು.


ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


ಉದಯಕಾಲದಲ್ಲಿ ಯೆಹೋಶುವನು ಎದ್ದು ಸೈನ್ಯವನ್ನು ಲೆಕ್ಕ ಮಾಡಿ, ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿ ಎಂಬ ಪಟ್ಟಣಕ್ಕೆ ಏರಿಹೋದರು.


ಯೆಹೋಶುವನು ಬೆಳಿಗ್ಗೆ ಎದ್ದು, ಅವನೂ, ಇಸ್ರಾಯೇಲರೆಲ್ಲರೂ ಶಿಟ್ಟೀಮಿನಿಂದ ಪ್ರಯಾಣಮಾಡಿ, ಯೊರ್ದನ್ ನದಿ ಬಳಿಗೆ ಬಂದು, ದಾಟುವುದಕ್ಕಿಂತ ಮುಂಚೆ ಅಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು