Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:8 - ಕನ್ನಡ ಸಮಕಾಲಿಕ ಅನುವಾದ

8 ಅಬ್ರಹಾಮನು, “ನನ್ನ ಮಗನೇ, ದೇವರೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿಸುವರು,” ಎಂದು ಉತ್ತರಕೊಟ್ಟನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಅಬ್ರಹಾಮನು, “ಬಲಿಗೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುತ್ತಾರೆ, ಮಗನೇ,” ಎಂದು ಉತ್ತರಕೊಟ್ಟ. ಅವರಿಬ್ಬರೂ ಹಾಗೇ ಮುಂದಕ್ಕೆ ಸಾಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಗನೇ, ಹೋಮಕ್ಕೆ ಬೇಕಾದ ಕುರಿಯನ್ನು ದೇವರೇ ಒದಗಿಸುವನು ಅಂದನು. ಹೀಗೆ ಅವರಿಬ್ಬರೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಬ್ರಹಾಮನು, “ಮಗನೇ, ಯಜ್ಞಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದು ಹೇಳಿದನು. ಹೀಗೆ ಅಬ್ರಹಾಮನು ಮತ್ತು ಅವನ ಮಗನು ಆ ಸ್ಥಳಕ್ಕೆ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:8
14 ತಿಳಿವುಗಳ ಹೋಲಿಕೆ  

ಆಗ ಯೇಸು ಹೋಗುತ್ತಿರುವುದನ್ನು ಕಂಡು ಅವನು, “ಇಗೋ, ದೇವರ ಕುರಿಮರಿ,” ಎಂದು ಹೇಳಿದನು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಅವರು, ಮಹಾಧ್ವನಿಯಿಂದ: “ವಧಿತರಾದ ಕುರಿಮರಿ ಆಗಿರುವವರು ಶಕ್ತಿ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಗೌರವ, ಮಹಿಮೆ, ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯರು!” ಎಂದು ಹೇಳಿದರು.


ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು.


ಆಗ ಅಮಚ್ಯನು ದೇವರ ಮನುಷ್ಯನಿಗೆ, “ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ 3,400 ಕಿಲೋಗ್ರಾಂ ಬೆಳ್ಳಿಯನ್ನು ಏನು ಮಾಡಬೇಕು?” ಎಂದನು. ಅದಕ್ಕೆ ದೇವರ ಮನುಷ್ಯನು, “ಯೆಹೋವ ದೇವರು ಇದಕ್ಕಿಂತ ಅಧಿಕವಾಗಿಯೇ ನಿನಗೆ ಕೊಡಲು ಶಕ್ತರು,” ಎಂದನು.


ಇಸಾಕನು ತನ್ನ ತಂದೆ ಅಬ್ರಹಾಮನಿಗೆ, “ಅಪ್ಪಾ,” ಎಂದನು. ಆಗ ಅಬ್ರಹಾಮನು, “ಏನು ಮಗನೇ?” ಎಂದನು. ಅದಕ್ಕೆ ಅವನು, “ಇಗೋ, ಬೆಂಕಿಯೂ, ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ?” ಎಂದನು.


ದೇವರು ಅವನಿಗೆ ಹೇಳಿದ ಸ್ಥಳಕ್ಕೆ ಬಂದಾಗ, ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ, ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ, ತನ್ನ ಮಗ ಇಸಾಕನನ್ನು ಕಟ್ಟಿ, ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.


ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ.


ಎಲೀಯನು ಅವನಿಗೆ, “ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೊರ್ದನಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರಿಬ್ಬರೂ ಮುಂದಕ್ಕೆ ನಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು