Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:9 - ಕನ್ನಡ ಸಮಕಾಲಿಕ ಅನುವಾದ

9 ದೇವರು ಅವನಿಗೆ ಹೇಳಿದ ಸ್ಥಳಕ್ಕೆ ಬಂದಾಗ, ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ, ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ, ತನ್ನ ಮಗ ಇಸಾಕನನ್ನು ಕಟ್ಟಿ, ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ ಕಟ್ಟಿಗೆಯನ್ನು ಒಟ್ಟಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಬಿಗಿದು ಅವನನ್ನು ವೇದಿಯಲ್ಲಿ ಕಟ್ಟಿಗೆಯ ಮೇಲೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ತಿಳಿಸಿದ್ದ ಸ್ಥಳಕ್ಕೆ ಬಂದರು. ಅಲ್ಲಿ ಅಬ್ರಹಾಮನು ಒಂದು ಯಜ್ಞವೇದಿಕೆಯನ್ನು ಕಟ್ಟಿ ಅದರ ಮೇಲೆ ಕಟ್ಟಿಗೆಯನ್ನು ಜೋಡಿಸಿದನು; ಆಮೇಲೆ ಅವನು ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಯಜ್ಞವೇದಿಕೆಯ ಮೇಲಿದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:9
23 ತಿಳಿವುಗಳ ಹೋಲಿಕೆ  

ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಬಲಿಪೀಠದ ಮೇಲೆ ಅರ್ಪಿಸಿದಾಗ ನೀತಿನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.


ಕಂಚುಕಿ ಈ ವಾಕ್ಯಭಾಗವನ್ನು ಓದುತ್ತಿದ್ದನು: “ವಧಿಸಲಿಕ್ಕೆ ಒಯ್ದ ಕುರಿಯಂತೆ ಅವರನ್ನು ಕರೆದುಕೊಂಡು ಹೋದರು. ಉಣ್ಣೆ ಕತ್ತರಿಸುವವರ ಮುಂದೆ ಇರುವ ಕುರಿಮರಿಯಂತೆ ಅವರು ಮೌನವಾಗಿದ್ದರು. ಇನ್ನು ಅವರು ತಮ್ಮ ಬಾಯಿ ತೆರೆಯಲೇ ಇಲ್ಲ.


ಬೆಳಗಾದ ಕೂಡಲೇ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರ ಮತ್ತು ಆಲೋಚನಾ ಸಭೆಯವರೊಂದಿಗೆ ಸಮಾಲೋಚನೆ ಮಾಡಿಕೊಂಡು ಯೇಸುವಿಗೆ ಬೇಡಿಹಾಕಿಸಿ ಪಿಲಾತನಿಗೆ ಒಪ್ಪಿಸಿದರು.


ಅವರು ಯೇಸುವನ್ನು ಕಟ್ಟಿ, ಕರೆದುಕೊಂಡು ಹೋಗಿ ರಾಜ್ಯಪಾಲ ಪಿಲಾತನಿಗೆ ಒಪ್ಪಿಸಿದರು.


ಯೆಹೋವ ದೇವರು ದೇವರಾಗಿದ್ದಾನೆ; ನಮ್ಮ ಮೇಲೆ ಅವರ ಬೆಳಕನ್ನು ಪ್ರಕಾಶಿಸುವಂತೆ ಮಾಡಿದ್ದಾರೆ. ಕೊಂಬೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಕೊಂಬುಗಳವರೆಗೆ ಮೆರವಣಿಗೆಯಾಗಿ ಬನ್ನಿರಿ.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ನೋಹನು ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಶುದ್ಧವಾದ ಪ್ರತಿ ಪಶುಗಳಿಂದಲೂ ಶುದ್ಧವಾದ ಪ್ರತಿ ಪಕ್ಷಿಗಳಿಂದಲೂ ಕೆಲವೊಂದನ್ನು ಆಯ್ದುಕೊಂಡು, ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.


ಅಲ್ಲಿಂದ ಅವರು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ, ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರೂ ಇರುವ ಹಾಗೆ ತನ್ನ ಗುಡಾರವನ್ನು ಹಾಕಿಕೊಂಡನು. ಅಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಆರಾಧಿಸಿದನು.


ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.


ಅಬ್ರಹಾಮನು, “ನನ್ನ ಮಗನೇ, ದೇವರೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿಸುವರು,” ಎಂದು ಉತ್ತರಕೊಟ್ಟನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.


ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವುದಕ್ಕೆ ಕತ್ತಿ ತೆಗೆದುಕೊಂಡನು.


ತರುವಾಯ ಅವನು ಕಟ್ಟಿಗೆಗಳನ್ನು ಪೀಠದ ಮೇಲೆ ಇಟ್ಟು, ಹೋರಿಯನ್ನು ತುಂಡುತುಂಡಾಗಿ ಕಡಿದು, ಕಟ್ಟಿಗೆಗಳ ಮೇಲೆ ಇಟ್ಟು, “ನೀವು ನಾಲ್ಕು ಕೊಡ ನೀರು ತುಂಬಿಕೊಂಡು ದಹನಬಲಿಯ ಮೇಲೆಯೂ, ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು