Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:11 - ಕನ್ನಡ ಸಮಕಾಲಿಕ ಅನುವಾದ

11 “ಒಡೆಯನೇ ಹಾಗಲ್ಲ, ನನ್ನ ಮಾತನ್ನು ಕೇಳು. ಆ ಹೊಲವನ್ನು ನಿನಗೆ ಕೊಡುತ್ತೇನೆ. ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ. ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ. ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಒಡೆಯಾ, ನನ್ನ ಮಾತಿಗೆ ಸ್ವಲ್ಪ ಕಿವಿಗೊಡಿ; ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ನಿಮಗೆ ದಾನಮಾಡಿಬಿಡುತ್ತೇನೆ; ನನ್ನ ಈ ಜನರ ಮುಂದೆಯೇ ದಾನಕೊಡುತ್ತೇನೆ; ಮೃತಳಾದ ನಿಮ್ಮ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹಾಗಲ್ಲ ಸ್ವಾಮೀ, ನನ್ನ ಮಾತನ್ನು ಲಾಲಿಸು. ಆ ಭೂವಿುಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ಸುಮ್ಮನೆ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ತೀರಿಹೋದ ನಿನ್ನ ಪತ್ನಿಗೆ ಅದರಲ್ಲಿ ಸಮಾಧಿಮಾಡಬಹುದು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಸ್ವಾಮೀ ನಾನು ಆ ಸ್ಥಳವನ್ನೂ ಆ ಗವಿಯನ್ನೂ ನನ್ನ ಜನರ ಎದುರಿನಲ್ಲಿಯೇ ನಿನಗೆ ಕೊಡುವೆನು. ನಿನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:11
15 ತಿಳಿವುಗಳ ಹೋಲಿಕೆ  

“ಯಜಮಾನನು ಹತ್ತಿರ ನಿಂತಿದ್ದವರಿಗೆ, ‘ಇವನಿಂದ ಆ ನಾಣ್ಯವನ್ನು ತೆಗೆದುಕೊಂಡು ಹತ್ತು ನಾಣ್ಯಗಳಿದ್ದವನಿಗೆ ಕೊಡಿರಿ,’ ಎಂದನು.


ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.


ಆಗ ಊರುಬಾಗಿಲಲ್ಲಿ ಕೂಡಿದ್ದ ಸಮಸ್ತ ಜನರೂ ಹಿರಿಯರೂ, “ನಾವು ಸಾಕ್ಷಿಗಳೇ, ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಯೆಹೋವ ದೇವರು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡಲಿ. ಎಫ್ರಾತದಲ್ಲಿ ಧನವಂತನಾಗಿರು, ಬೇತ್ಲೆಹೇಮಿನಲ್ಲಿ ಘನವಂತನಾಗಿರು.


ಆಗ ಬೋವಜನು ಹಿರಿಯರಿಗೂ ಸಮಸ್ತ ಜನರಿಗೂ, “ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬುದಕ್ಕೆ ಈ ದಿನ ನೀವು ಸಾಕ್ಷಿಗಳಾಗಿದ್ದೀರಿ.


ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ. ಬಿಡಿಸಿಕೊಳ್ಳದಿದ್ದರೆ ನಾನು ತಿಳಿದುಕೊಳ್ಳುವ ಹಾಗೆ ನನಗೆ ಹೇಳು. ಏಕೆಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ,” ಎಂದು ಹೇಳಿದನು. ಅದಕ್ಕೆ ಅವನು, “ನಾನು ಬಿಡಿಸಿಕೊಳ್ಳುವೆನು,” ಎಂದನು.


ಬೋವಜನು ಪಟ್ಟಣದ ಬಾಗಿಲ ಬಳಿ ಹೋಗಿ ಕುಳಿತುಕೊಂಡನು. ಆಗ ಬೋವಜನು ಹೇಳಿದ್ದ ಆ ವಿಮೋಚಕ ಬಂಧುವು ಹಾದುಹೋಗುತ್ತಿದ್ದನು. ಬೋವಜನು ಅವನಿಗೆ, “ನನ್ನ ಸ್ನೇಹಿತನೇ, ಈ ಕಡೆಗೆ ಬಂದು ಇಲ್ಲಿ ಕುಳಿತುಕೋ,” ಎಂದನು. ಅವನು ಬಂದು ಕುಳಿತುಕೊಂಡನು.


ಯಾವ ಅಕ್ರಮದ ನಿಮಿತ್ತವೂ, ಅಥವಾ ಪಾಪದ ನಿಮಿತ್ತವೂ ಒಬ್ಬ ಮನುಷ್ಯನಿಗೆ ವಿರೋಧವಾಗಿ ಒಬ್ಬ ಸಾಕ್ಷಿ ನಿಂತುಕೊಳ್ಳಬಾರದು. ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ವಿಷಯವು ಸ್ಥಿರವಾಗುವುದು.


ಒಬ್ಬನ ಸಾಕ್ಷಿಯ ಮಾತಿನಿಂದ ಮಾತ್ರ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಸಾಕ್ಷಿಗಳು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


“ ‘ಪ್ರಾಣಹತ್ಯೆ ಮಾಡಿದ ಕೊಲೆಪಾತಕನನ್ನು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಸಾಕ್ಷಿಯು ಒಂದು ಪ್ರಾಣಕ್ಕೆ ವಿರೋಧವಾಗಿ ಸಾಯುವ ಹಾಗೆ ಸಾಕ್ಷಿ ಕೊಡಬಾರದು.


ಹಿತ್ತಿಯರ ಮುಂದೆಯೂ, ಅವರ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ದೃಢವಾಯಿತು.


“ಒಡೆಯಾ, ನಮ್ಮ ಮಾತನ್ನು ಕೇಳು, ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ. ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಳಿಡು. ನಮ್ಮಲ್ಲಿ ಯಾರೂ ನಿನಗೆ ಸಮಾಧಿಯನ್ನು ಕೊಡುವುದಿಲ್ಲ ಎಂದು ಹೇಳಲಾರರು,” ಎಂದರು.


ಆಗ ಅಬ್ರಹಾಮನು ದೇಶದ ಜನರ ಮುಂದೆ ತಲೆಬಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು