Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:16 - ಕನ್ನಡ ಸಮಕಾಲಿಕ ಅನುವಾದ

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿಕೊಂಡು, ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ಬೆಲೆ ಅಂದರೆ, ವರ್ತಕರಲ್ಲಿ ನಡೆಯುವ ನಾನೂರು ಬೆಳ್ಳಿ ನಾಣ್ಯಗಳನ್ನು ತೂಕಮಾಡಿ ಅವನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿ, ಅವನು ಆ ಹಿತ್ತಿಯರ ಮುಂದೆ ಸೂಚಿಸಿದ ನಾನೂರು ಬೆಳ್ಳಿ ನಾಣ್ಯಗಳನ್ನು, ವ್ಯಾಪಾರಿಗಳಲ್ಲಿ ಪ್ರಚಲಿತವಾಗಿದ್ದ ಬೆಳ್ಳಿಯಿಂದ ತೂಕಮಾಡಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ರೂಪಾಯಿಗಳನ್ನು ಅಬ್ರಹಾಮನು ಸಾಹುಕಾರರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:16
18 ತಿಳಿವುಗಳ ಹೋಲಿಕೆ  

ನಾನು ಅವರಿಗೆ, “ಇದು ನಿಮ್ಮ ಕಣ್ಣುಗಳಲ್ಲಿ ಒಳ್ಳೆಯದಾಗಿ ತೋರಿದರೆ, ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ,” ಎಂದೆನು. ಆಗ ಅವರು ನನಗೆ ಸಂಬಳವಾಗಿ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು.


ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು, ಅವನಿಗೆ ಹದಿನೇಳು ಬೆಳ್ಳಿನಾಣ್ಯ ತೂಕಮಾಡಿ ಕ್ರಯಕೊಟ್ಟೆನು.


ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.


ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಸಾಲವೇ ಹೊರತು ನಿಮಗೆ ಬೇರೆ ಯಾವ ಸಾಲವೂ ಇರಬಾರದು. ಏಕೆಂದರೆ ಮತ್ತೊಬ್ಬರನ್ನು ಪ್ರೀತಿಸುವವನು ಮೋಶೆಯ ನಿಯಮವನ್ನೇ ನೆರವೇರಿಸಿದ್ದಾನೆ.


ಆದ್ದರಿಂದ, ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಬಯಸುತ್ತೀರೋ, ಅದರಂತೆಯೇ ನೀವು ಅವರಿಗೆ ಮಾಡಿರಿ; ಇದೇ ನಿಯಮ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶವು.


ಒಂದು ಶೆಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು. ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು ಶೇಕೆಲು, ಇಪ್ಪತ್ತೈದು ಶೇಕೆಲು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ.


ಚೊಕ್ಕ ಬಂಗಾರಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲಾಗದು; ಜ್ಞಾನದ ಬೆಲೆಗೆ ಬೆಳ್ಳಿಯನ್ನು ತೂಕಮಾಡಲಾಗದು.


ಲೆಕ್ಕಿತರಾದವರಲ್ಲಿ ಸೇರುವ ಪ್ರತಿಯೊಬ್ಬ ಮನುಷ್ಯನು ಕೊಡಬೇಕಾದದ್ದು ಏನೆಂದರೆ ಶೆಕೆಲಿಗೆ ಇಪ್ಪತ್ತು ಗೇರಾಗಳ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರ್ಧ ಶೆಕೆಲ್ ಕೊಡಬೇಕು. ಅರ್ಧ ಶೆಕೆಲ್ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.


ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ, ಪ್ರತಿಯೊಬ್ಬನ ಹಣವು ಅವನವನ ಚೀಲದ ಬಾಯಲ್ಲಿ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರುಗಿ ತೆಗೆದುಕೊಂಡು ಬಂದಿದ್ದೇವೆ.


“ನನ್ನ ಒಡೆಯನೇ, ನನ್ನ ಮಾತನ್ನು ಕೇಳು. ಆ ಭೂಮಿಯು ನಾನೂರು ಬೆಳ್ಳಿಯ ನಾಣ್ಯಗಳ ಬೆಲೆಯುಳ್ಳದ್ದು, ಈ ಕುರಿತು ನಮ್ಮೊಳಗೇ ವಾದವೇಕೆ? ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.


ಅವರ ಮೃತಶರೀರವನ್ನು ಶೇಕೆಮಿಗೆ ತಂದರು. ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಕ್ರಯಕೊಟ್ಟು ಕೊಂಡುಕೊಂಡಿದ್ದ ಸಮಾಧಿಯಲ್ಲಿ ಇಟ್ಟರು.


ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ, “ನಾನು ನನ್ನ ಜನರೊಂದಿಗೆ ಸೇರಿಕೊಳ್ಳುತ್ತೇನೆ. ನನ್ನ ಪಿತೃಗಳ ಸಂಗಡ ಹಿತ್ತಿಯನಾದ ಎಫ್ರೋನನ ಹೊಲದಲ್ಲಿರುವ ಗವಿಯಲ್ಲಿ


ಅವನ ಪುತ್ರರು ಅವನನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡುಹೋಗಿ, ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವಂಥ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿದರು.


ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರ್ಷದ ಕೊನೆಯಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ರಾಜರ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗಿರುತ್ತಿತ್ತು.


ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆಹಾಕಿ, ಸಾಕ್ಷಿಗಳನ್ನಿಟ್ಟು, ಬೆಳ್ಳಿಯನ್ನು ತ್ರಾಸಿನಲ್ಲಿ ತೂಕಮಾಡಿದೆನು.


ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು