Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:21 - ಕನ್ನಡ ಸಮಕಾಲಿಕ ಅನುವಾದ

21 ಆಗ ಯೆಹೋವ ದೇವರು ತನ್ನ ಪ್ರಯಾಣನ್ನು ಸಫಲ ಮಾಡಿದರೋ ಏನೋ, ಎಂದು ತಿಳಿದುಕೊಳ್ಳುವುದಕ್ಕೆ ಆ ಮನುಷ್ಯನು ಆಕೆಯನ್ನು ಗಮನಿಸುತ್ತಾ, ಆಶ್ಚರ್ಯಪಟ್ಟು ಮೌನವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ಮನುಷ್ಯ, ತನ್ನ ಪ್ರಯಾಣವನ್ನು ಸರ್ವೇಶ್ವರ ಸಫಲಗೊಳಿಸಿದರೋ ಇಲ್ಲವೋ ಎಂದು ಯೋಚಿಸುತ್ತಾ ಏನೂ ಮಾತಾಡದೆ ಆಕೆಯನ್ನೇ ದೃಷ್ಟಿಸಿ ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ - ಯೆಹೋವನು ನನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವದಕ್ಕಾಗಿ ಕಾದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಸೇವಕನು ಆಕೆಯನ್ನೇ ಗಮನಿಸುತ್ತಾ, ಯೆಹೋವನು ತನ್ನ ಪ್ರಾರ್ಥನೆಗೆ ಉತ್ತರ ಕೊಟ್ಟನೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಲು ಕಾದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:21
13 ತಿಳಿವುಗಳ ಹೋಲಿಕೆ  

ಜ್ಞಾನಿಗಳು ಇವುಗಳನ್ನು ಗಮನಿಸಲಿ, ಯೆಹೋವ ದೇವರ ಪ್ರೀತಿಕೃತ್ಯಗಳನ್ನು ಗ್ರಹಿಸಿಕೊಳ್ಳಲಿ.


ಆಗ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರೇ, ಈ ಹೊತ್ತು ನನಗೆ ಅನುಕೂಲವನ್ನು ಉಂಟುಮಾಡಿ, ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸಿರಿ.


ಬಳಿಕ ಯೇಸು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನರಾಗಿದ್ದರು. ಆದರೆ ಯೇಸುವಿನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ದೇವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರ ಉಪಕಾರಮಾಡಲಿ, ಮಾನವರಿಗೆ ದೇವರು ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.


ಯೆಹೋವ ದೇವರನ್ನು ಕೊಂಡಾಡಿರಿ, ಅವರು ಒಳ್ಳೆಯವರು; ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.


ಆಗ ಅವನು ಅವರಿಗೆ, “ನನ್ನನ್ನು ತಡೆಯಬೇಡಿರಿ, ಯೆಹೋವ ದೇವರು ನನ್ನ ಮಾರ್ಗವನ್ನು ಸಫಲ ಮಾಡಿದ್ದಾರಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವಂತೆ ನನ್ನನ್ನು ಕಳುಹಿಸಿರಿ,” ಎಂದನು.


ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ತೊಟ್ಟಿಯಲ್ಲಿ ಹೊಯ್ದು, ತಿರುಗಿ ಸೇದುವುದಕ್ಕೆ ಬಾವಿಯ ಬಳಿಗೆ ಓಡಿ, ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ಸೇದಿದಳು.


ಇದಲ್ಲದೆ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ. ಅವರು ನನ್ನ ಯಜಮಾನನನ್ನು ಕೈಬಿಡದೆ, ತಮ್ಮ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಿದ್ದಾರೆ. ನಾನು ಮಾರ್ಗದಲ್ಲಿರುವಾಗ ಯೆಹೋವ ದೇವರು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೇ ನಡೆಸಿದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು