Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:31 - ಕನ್ನಡ ಸಮಕಾಲಿಕ ಅನುವಾದ

31 ಲಾಬಾನನು ಅವನಿಗೆ, “ಯೆಹೋವ ದೇವರಿಂದ ಆಶೀರ್ವಾದ ಪಡೆದವನೇ, ಒಳಗೆ ಬಾ, ಏಕೆ ಹೊರಗೆ ನಿಂತಿರುವೆ? ನಾನು ಮನೆಯನ್ನೂ, ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನಿಗೆ, “ಯೆಹೋವನ ಆಶೀರ್ವಾದವನ್ನು ಹೊಂದಿದವನೇ, ಒಳಗೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯಲ್ಲಿ ಒಂಟೆಗಳಿಗೆ ಬೇಕಾದ ಸ್ಥಳವನ್ನೂ ಸಿದ್ಧಮಾಡಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದವನೇ, ಮನೆಗೆ ಬಾ; ಇಲ್ಲಿ ಹೊರಗೇಕೆ ನಿಂತಿರುವೆ? ನಿನಗೆ ಮನೆ ಸಿದ್ಧವಾಗಿದೆ; ಒಂಟೆಗಳಿಗೆ ಬೇಕಾದ ಸ್ಥಳವಿದೆ,” ಎಂದು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಬಂದಾಗ ಅವನಿಗೆ - ಯೆಹೋವನ ದಯೆಯನ್ನು ಹೊಂದಿದವನೇ, ಒಳಕ್ಕೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಲಾಬಾನನು ಅವನಿಗೆ, “ಯೆಹೋವನ ಆಶೀರ್ವಾದ ಹೊಂದಿದವನೇ, ಒಳಗೆ ಬಾ. ನೀನು ಹೊರಗಡೆ ನಿಂತುಕೊಳ್ಳಬೇಕಾಗಿಲ್ಲ. ನೀನು ಇಳಿದುಕೊಳ್ಳುವುದಕ್ಕಾಗಿ ಕೋಣೆಯನ್ನೂ ನಿನ್ನ ಒಂಟೆಗಳಿಗಾಗಿ ಸ್ಥಳವನ್ನೂ ಸಿದ್ಧಪಡಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:31
11 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು, “ನನ್ನ ಮಗಳೇ, ಯೆಹೋವ ದೇವರಿಂದ ನಿನಗೆ ಆಶೀರ್ವಾದವಾಗಲಿ, ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದುದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದ ದಯೆಯು ಹೆಚ್ಚಾಗಿದೆ.


ಅದೇನೆಂದರೆ, ನಾವು ನಿನ್ನನ್ನು ಮುಟ್ಟದೆ, ನಿನಗೆ ಒಳ್ಳೆಯದನ್ನೇ ಮಾಡಿ, ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು. ಏಕೆಂದರೆ ನೀನು ಈಗ ಯೆಹೋವ ದೇವರಿಂದ ಆಶೀರ್ವಾದ ಹೊಂದಿರುವೆ,” ಎಂದರು.


ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರಿಂದ ನೀವು ಆಶೀರ್ವಾದ ಹೊಂದಿದವರು.


ಅವನು ತನ್ನ ತಾಯಿಗೆ, “ನಿನ್ನ ಬಳಿಯಿಂದ ಸಾವಿರದ ನೂರು ಬೆಳ್ಳಿ ನಾಣ್ಯಗಳು ಕಳುವಾದಾಗ, ನೀನು ಆ ಹಣವನ್ನು ಕುರಿತು ಶಪಿಸಿದೆಯಲ್ಲಾ? ಇಗೋ, ಆ ನಾಣ್ಯಗಳು ನನ್ನ ಬಳಿಯಲ್ಲಿ ಇವೆ. ನಾನೇ ಅದನ್ನು ತೆಗೆದುಕೊಂಡೆನು,” ಎಂದನು. ಅದಕ್ಕೆ ಅವನ ತಾಯಿ, “ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದಳು.


ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.


ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ.


ಅಬ್ರಹಾಮನು ಅವರಿಗೆ, “ನನ್ನ ಸ್ವಾಮಿ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ, ನಿಮ್ಮ ದಾಸನ ಬಳಿಯಿಂದ ಹೊರಟು ಹೋಗಬೇಡಿ.


“ಸ್ವಾಮಿಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ತಂಗಿ, ರಾತ್ರಿ ಕಳೆಯಿರಿ. ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ. ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ಹಾಗಲ್ಲ, ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ,” ಎಂದರು.


ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ, ಅವರು ತಿರುಗಿಬಂದು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣ ಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿದನು. ಅವರು ಊಟಮಾಡಿದರು.


ಅವನು ಮೂಗುತಿಯನ್ನೂ, ತನ್ನ ಸಹೋದರಿಯ ಕೈಗಳಲ್ಲಿದ್ದ ಬಳೆಗಳನ್ನೂ ಕಂಡು, ಆ ಮನುಷ್ಯನು ತನ್ನ ಬಳಿ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿ ರೆಬೆಕ್ಕಳ ಮಾತುಗಳನ್ನು ಕೇಳಿ, ಆ ಮನುಷ್ಯನ ಬಳಿಗೆ ಬಂದನು. ಅವನು ಇನ್ನೂ ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.


ಲಾಬಾನನು ತನ್ನ ಸಹೋದರಿಯ ಮಗ ಯಾಕೋಬನ ಸುದ್ದಿಯನ್ನು ಕೇಳಿದಾಗ, ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು