Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:49 - ಕನ್ನಡ ಸಮಕಾಲಿಕ ಅನುವಾದ

49 ಆದ್ದರಿಂದ ನೀವು ನನ್ನ ಯಜಮಾನನಿಗೆ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ವರ್ತಿಸುವುದಾದರೆ ನನಗೆ ತಿಳಿಸಿರಿ. ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ, ಎಡಗಡೆಯಾದರೂ ತಿರುಗಿಕೊಂಡುಹೋಗುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ, ನಂಬಿಕೆಯಿಂದಲೂ ನಡೆಯುವುದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ನನ್ನ ಪ್ರಯಾಣ ಮುಂದುವರೆಸುತ್ತೇನೆ” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಹೀಗಿರುವಲ್ಲಿ ನೀವು ನನ್ನೊಡೆಯನಿಗೆ ಪ್ರತಿ ಪ್ರೀತಿಯನ್ನೂ ಪ್ರಾಮಾಣಿಕತೆಯನ್ನೂ ತೋರಲು ಒಪ್ಪಿದರೆ ನನಗೆ ಹೇಳಿ; ಇಲ್ಲವಾದರೆ ಇಲ್ಲವೆನ್ನಿ; ಆಗ ಯಾವ ಕಡೆ ತಿರುಗಬೇಕೆಂದು ನನಗೆ ಗೊತ್ತಾಗುತ್ತದೆ,” ಎಂದು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಡೆಯುವದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ತಿರುಗಿಕೊಂಡು ಹೋಗುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಈಗ ನಿಮ್ಮ ಅಭಿಪ್ರಾಯವನ್ನು ತಿಳಿಸಿರಿ. ನೀವು ನನ್ನ ಒಡೆಯನಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಿಮ್ಮ ಮಗಳನ್ನು ಕೊಡುವಿರಾ? ಅಥವಾ ಕೊಡುವುದಿಲ್ಲವೇ? ನಿಮ್ಮ ಉತ್ತರಕ್ಕನುಸಾರವಾಗಿ ನಾನು ಮುಂದಿನ ಕಾರ್ಯದ ಬಗ್ಗೆ ಆಲೋಚಿಸುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:49
6 ತಿಳಿವುಗಳ ಹೋಲಿಕೆ  

ಇಸ್ರಾಯೇಲನ ಮರಣದ ಸಮಯವು ಸಮೀಪಿಸಿದಾಗ, ಅವನು ತನ್ನ ಮಗ ಯೋಸೇಫನನ್ನು ಕರೆಯಿಸಿ ಅವನಿಗೆ, “ಈಗ ನಿನ್ನ ಸಮ್ಮುಖದಲ್ಲಿ ನಾನು ದಯೆ ಹೊಂದಿದ್ದೇಯಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು, ನನಗೆ ಉಪಕಾರವನ್ನೂ, ನಂಬಿಗಸ್ತಿಕೆಯನ್ನೂ ತೋರಿಸು. ಈಜಿಪ್ಟಿನಲ್ಲಿ ನನ್ನನ್ನು ಹೂಳಿಡಬೇಡ.


ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು.


ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ, ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.


ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.


“ನಾವು ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಕ್ಕೂ ಬಲಕ್ಕೂ ತಿರುಗದೆ ರಾಜ ಮಾರ್ಗದಿಂದಲೇ ಹೋಗುವೆವು.


ನಮ್ಮನ್ನು ನಿನ್ನ ದೇಶದೊಳಗಿಂದ ದಾಟಿ ಹೋಗಗೊಡಿಸು; ನಾವು ಹೊಲವನ್ನಾದರೂ, ದ್ರಾಕ್ಷಿ ತೋಟವನ್ನಾದರೂ ದಾಟಿ ಹೋಗುವುದಿಲ್ಲ; ರಾಜಮಾರ್ಗದಲ್ಲಿ ಮಾತ್ರ ಹೋಗುತ್ತೇವೆ; ನಿನ್ನ ಮೇರೆಯನ್ನು ನಾವು ದಾಟುವವರೆಗೆ ಬಲಗಡೆಗಾದರೂ, ಎಡಗಡೆಗಾದರೂ ನಾವು ತಿರುಗುವುದಿಲ್ಲ,” ಎಂದು ವಿನಂತಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು