Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:21 - ಕನ್ನಡ ಸಮಕಾಲಿಕ ಅನುವಾದ

21 ಆದರೆ ಆಕೆಯು ಬಂಜೆಯಾಗಿದ್ದುದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವ ದೇವರನ್ನು ಬೇಡಿಕೊಂಡನು. ಯೆಹೋವ ದೇವರು ಅವನ ಬೇಡಿಕೆಯನ್ನು ಪೂರೈಸಿದರು. ಆದ್ದರಿಂದ ಅವನ ಹೆಂಡತಿ ರೆಬೆಕ್ಕಳು ಗರ್ಭಿಣಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ರೆಬೆಕ್ಕಳಿಗೆ ಮಕ್ಕಳಾಗಲಿಲ್ಲ. ಸರ್ವೇಶ್ವರ ಅವನ ವಿಜ್ಞಾಪನೆಯನ್ನು ಆಲಿಸಿದರು. ರೆಬೆಕ್ಕಳು ಗರ್ಭವತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಕೆ ಬಂಜೆಯಾಗಿರಲಾಗಿ ಅವನು ಆಕೆಗೋಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:21
24 ತಿಳಿವುಗಳ ಹೋಲಿಕೆ  

ಆದ್ದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ದೇವರು ನಮ್ಮ ವಿಜ್ಞಾಪನೆಯನ್ನು ಕೇಳಿದರು.


ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’ ಎಂದು ಹೆಸರನ್ನಿಡಬೇಕು.


ಆಗ ನೀನು ಕರೆದರೆ ಯೆಹೋವ ದೇವರು ಉತ್ತರಕೊಡುವರು. ನೀನು ಕೂಗುವೆ, ಆಗ ಅವರು, ‘ನಾನು ಇಲ್ಲಿ ಇದ್ದೇನೆ,’ ಅನ್ನುವರು. “ನೀನು ನಿನ್ನ ಮಧ್ಯದೊಳಗಿಂದ ದಬ್ಬಾಳಿಕೆಯ ನೊಗವನ್ನೂ, ಬೆರಳ ಸನ್ನೆಯನ್ನೂ, ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,


ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.


ಇವರು ಅವರಿಗೆ ವಿರೋಧವಾಗಿ ಸಹಾಯ ಹೊಂದಿದ್ದರಿಂದ, ಹಗ್ರೀಯರೂ, ಅವರ ಸಂಗಡ ಕೂಡಿದ್ದವರೆಲ್ಲರೂ ಇವರ ಕೈವಶವಾದರು. ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು, ಅವರಲ್ಲಿ ಭರವಸೆ ಇಟ್ಟಿದ್ದರಿಂದ, ದೇವರು ಅವರ ಮನವಿಯನ್ನು ಕೇಳಿದರು.


ನಾನು ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದನ್ನು ಅವರು ನನಗೆ ಕೊಟ್ಟರು.


ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ, ಇದಲ್ಲದೆ ಅವರಿಬ್ಬರೂ ಬಹಳ ವಯಸ್ಸಾದವರಾಗಿದ್ದರು.


“ಇಸ್ರಾಯೇಲಿನ ಪರಿಶುದ್ಧನೂ, ಅದನ್ನು ರೂಪಿಸಿದವನೂ ಆಗಿರುವ ಯೆಹೋವ ದೇವರು, ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ, ನನ್ನ ಕೈಕೆಲಸದ ವಿಷಯವಾಗಿಯೂ ನೀವು ನನಗೆ ಆಜ್ಞಾಪಿಸುವುದೇನು?


ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು.


ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.


ಸಾರಯಳು ಬಂಜೆಯಾದದ್ದರಿಂದ ಆಕೆಗೆ ಮಕ್ಕಳಿರಲಿಲ್ಲ.


ತಮಗೆ ಭಯಪಡುವವರ ಇಷ್ಟವನ್ನು ನೆರವೇರಿಸುತ್ತಾರೆ. ಅವರ ಮೊರೆಯನ್ನು ಕೇಳಿ, ಅವರನ್ನು ರಕ್ಷಿಸುತ್ತಾರೆ.


ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು. ಗರ್ಭಫಲವು ದೇವರ ಬಹುಮಾನ.


ಪ್ರಾರ್ಥನೆಯನ್ನು ಕೇಳುವವರೇ, ಎಲ್ಲಾ ಜನರು ನಿಮ್ಮ ಬಳಿಗೆ ಬರುವರು.


ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು. ಅವರು ಇನ್ನೂ ಮಾತನಾಡುತ್ತಿರುವಾಗಲೇ ನಾನು ಕೇಳುವೆನು.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.


ಅವನಿಗೆ ಇಬ್ಬರು ಹೆಂಡತಿಯರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು. ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.


ಆಗ ಸಾರಯಳು ಅಬ್ರಾಮನಿಗೆ, “ನಾನು ಮಕ್ಕಳನ್ನು ಹೆರದಂತೆ ಯೆಹೋವ ದೇವರು ನನಗೆ ಅಡ್ಡಿ ಮಾಡಿದ್ದಾರೆ. ದಯಮಾಡಿ ನೀನು ನನ್ನ ದಾಸಿಯ ಬಳಿಗೆ ಹೋಗು. ಒಂದು ವೇಳೆ ನಾನು ಅವಳ ಮೂಲಕ ಕುಟುಂಬವನ್ನು ಕಟ್ಟಬಲ್ಲೆ,” ಎಂದಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.


ಆಗ ಏಲಿಯು ಅವಳಿಗೆ, “ಸಮಾಧಾನದಿಂದ ಹೋಗು. ಇಸ್ರಾಯೇಲಿನ ದೇವರು, ಅವರಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯಂತೆ ನಿನಗೆ ಕೊಡಲಿ,” ಎಂದನು.


ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿಕೊಂಡರು. ದೇವರು ಆಕೆಯ ಮೊರೆಯನ್ನು ಕೇಳಿ, ಆಕೆಗೆ ಮಕ್ಕಳಾಗುವಂತೆ ಅನುಗ್ರಹಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು