Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:31 - ಕನ್ನಡ ಸಮಕಾಲಿಕ ಅನುವಾದ

31 ಆಗ ಯಾಕೋಬನು, “ಈ ಹೊತ್ತು ನಿನ್ನ ಜೇಷ್ಠ ಪುತ್ರನ ಹಕ್ಕನ್ನು ನನಗೆ ಮಾರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯಾಕೋಬನು ಅವನಿಗೆ, “ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು” ಅನ್ನಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ಯಕೋಬ, ‘ನಿನ್ನದಾಗಿರುವ ಜ್ಯೇಷ್ಠಪುತ್ರನ ಹಕ್ಕನ್ನು ನನಗೆ ಮೊದಲು ಮಾರಿಬಿಡು,’ ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯಾಕೋಬನು ಅವನಿಗೆ - ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿಬಿಡು ಅನ್ನಲು ಏಸಾವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಯಾಕೋಬನು, “ನಿನ್ನ ಚೊಚ್ಚಲತನದ ಹಕ್ಕನ್ನು ನೀನು ನನಗೆ ಈ ದಿನ ಮಾರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:31
9 ತಿಳಿವುಗಳ ಹೋಲಿಕೆ  

ಏಸಾವನು ಯಾಕೋಬನಿಗೆ, “ಆ ಕೆಂಪಾದ ಪದಾರ್ಥವನ್ನು ತಿನ್ನುವುದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ,” ಎಂದನು. ಆದ್ದರಿಂದ ಅವನಿಗೆ, ಎದೋಮ್, ಎಂದು ಹೆಸರಾಯಿತು.


ಏಸಾವನು, “ಇಗೋ, ನಾನು ಸಾಯುತ್ತಿದ್ದೇನೆ, ಜೇಷ್ಠ ಪುತ್ರನ ಹಕ್ಕಿನಿಂದ ನನಗೇನು ಲಾಭ?” ಎಂದನು.


ಅವನು ತನ್ನ ಪುತ್ರರಿಗೆ ತನ್ನ ಆಸ್ತಿಯನ್ನು ಹಂಚಿ ಕೊಡುವಾಗ, ತಾನು ಪ್ರೀತಿಮಾಡದ ಹೆಂಡತಿಯ ಚೊಚ್ಚಲ ಮಗನಿಗೆ ಬದಲಾಗಿ ಅವನು ಪ್ರೀತಿಸುವವಳ ಮಗನನ್ನು ಹಿರಿಯನೆಂದು ಮಾಡಕೂಡದು.


ಅವನು ಪ್ರೀತಿಮಾಡದವಳ ಮಗನಿಗೆ ತನ್ನ ಬಳಿಯಲ್ಲಿರುವ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು, ಅವನೇ ಜೇಷ್ಠ ಪುತ್ರನೆಂದು ಒಪ್ಪಿಕೊಳ್ಳಬೇಕು. ಏಕೆಂದರೆ ಅವನೇ ಅವನ ಪ್ರಥಮ ಫಲ. ಅವನಿಗೆ ಜೇಷ್ಠ ಪುತ್ರನ ಹಕ್ಕು ಉಂಟು.


ಇಸ್ರಾಯೇಲಿನ ಚೊಚ್ಚಲಮಗನಾದ ರೂಬೇನನ ಪುತ್ರರು ಇವರು: ಅವನು ಚೊಚ್ಚಲ ಮಗನಾಗಿದ್ದನು. ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರ ಮಾಡಿದ್ದರಿಂದ ಅವನ ಚೊಚ್ಚಲುತನದ ಹಕ್ಕು ಇಸ್ರಾಯೇಲಿನ ಮಗ ಯೋಸೇಫನ ಪುತ್ರರಿಗೆ ಕೊಡಲಾಗಿತ್ತು. ಆದ್ದರಿಂದ ಈ ವಂಶಾವಳಿಯು ಚೊಚ್ಚಲುತನದ ಪ್ರಕಾರ ಬರೆದಿರುವುದಿಲ್ಲ.


ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲುತನವು ಯೋಸೇಫನದಾಗಿತ್ತು.


ಅದಕ್ಕೆ ಏಸಾವನು, “ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ? ಅವನು ನನ್ನನ್ನು ಎರಡು ಸಾರಿ ವಂಚಿಸಿದ್ದಾನೆ. ಅವನು ನನ್ನ ಚೊಚ್ಚಲತನವನ್ನು ತೆಗೆದುಕೊಂಡಿದ್ದಾನೆ. ಇಗೋ, ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸಲಿಲ್ಲವೋ?” ಎಂದನು.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ಯಾವ ಕಾಮುಕರಾಗಲಿ, ಏಸಾವನಂಥ ಪ್ರಾಪಂಚಿಕರಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆಯಿಂದ ನೋಡಿಕೊಳ್ಳಿರಿ. ಅವನು ಒಂದು ತುತ್ತು ಅನ್ನಕ್ಕಾಗಿ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು