Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:22 - ಕನ್ನಡ ಸಮಕಾಲಿಕ ಅನುವಾದ

22 ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗೆದಾಗ, ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು, “ಈಗ ಯೆಹೋವ ದೇವರು ನಮಗೆ ಸ್ಥಳವನ್ನು ಮಾಡಿದ್ದಾರೆ. ನಾವು ಈ ದೇಶದಲ್ಲಿ ಅಭಿವೃದ್ಧಿ ಹೊಂದುವೆವು,” ಎಂದು ಹೇಳಿ ಅದಕ್ಕೆ, ರೆಹೋಬೋತ್, ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ರೆಹೋಬೋತ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವನು ಅಲ್ಲಿಂದ ಮುಂದಕ್ಕೆ ತೆರಳಿ ಮತ್ತೊಂದು ಬಾವಿಯನ್ನು ಅಗೆಸಿದನು. ಅದರ ಬಗ್ಗೆ ಯಾರೂ ಜಗಳಕ್ಕೆ ಬರಲಿಲ್ಲ. ಈ ಕಾರಣ ಅವನು, “ಸರ್ವೇಶ್ವರ ನಮಗೀಗ ಸ್ಥಳಾವಕಾಶ ಮಾಡಿಕೊಟ್ಟಿದ್ದಾರೆ; ನಾವು ಅಭಿವೃದ್ಧಿಯಾಗುತ್ತೇವೆ,” ಎಂದು ಹೇಳಿ ಆ ಬಾವಿಗೆ ‘ರೆಹೋಬೋತ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ಅಗೆಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದದರಿಂದ ಅವನು - ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದಾನಾದದರಿಂದ ಅಭಿವೃದ್ಧಿಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸಾಕನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ತೋಡಿಸಿದನು. ಆ ಬಾವಿಯ ಕುರಿತು ವಾದಮಾಡಲು ಯಾರೂ ಬರಲಿಲ್ಲ. ಆದ್ದರಿಂದ ಇಸಾಕನು, “ಈಗ ಯೆಹೋವನು ನಮಗೋಸ್ಕರ ಒಂದು ಸ್ಥಳವನ್ನು ತೋರಿಸಿದ್ದಾನೆ. ನಾವು ಈ ಸ್ಥಳದಲ್ಲಿ ಅಭಿವೃದ್ಧಿಯಾಗೋಣ” ಎಂದು ಹೇಳಿ ಆ ಬಾವಿಗೆ “ರೆಹೋಬೋತ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:22
11 ತಿಳಿವುಗಳ ಹೋಲಿಕೆ  

ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹರಡಿಕೊಂಡು ಬಲಗೊಂಡರು, ಅದರಿಂದ ಆ ದೇಶವು ಅವರಿಂದ ತುಂಬಿತು.


ನಿನ್ನಿಂದ ಅನೇಕ ಜನಾಂಗಗಳೂ ಅರಸರೂ ಹುಟ್ಟುವರು.


ಇಕ್ಕಟ್ಟಿನೊಳಗಿಂದ ಯೆಹೋವ ದೇವರಿಗೆ ಕೂಗಿದೆನು; ಯೆಹೋವ ದೇವರು ಉತ್ತರಕೊಟ್ಟು, ನನ್ನನ್ನು ವಿಶಾಲವಾದ ಸ್ಥಳಕ್ಕೆ ತಂದರು.


ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು. “ನಾನು ಬಾಧೆಯನ್ನನುಭವಿಸಿದ ದೇಶ ಫಲಭರಿತವಾಗುವಂತೆ ದೇವರು ಮಾಡಿದ್ದಾರೆ,” ಎಂದನು.


ದೇವರು ನನ್ನನ್ನು ಹೊರಗೆ ವಿಶಾಲ ಸ್ಥಳಕ್ಕೆ ತಂದರು; ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ಕಾಪಾಡಿದರು.


ನನ್ನ ನೀತಿಯಾಗಿರುವ ದೇವರೇ, ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ. ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ; ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ.


ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಿ, ನೀನು ದೊಡ್ಡ ಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ.


ತರುವಾಯ ಅವರು ಇನ್ನೊಂದು ಬಾವಿಯನ್ನು ಅಗೆದಾಗ, ಅದಕ್ಕಾಗಿಯೂ ಅವರು ಜಗಳವಾಡಿದಾಗ, ಅವನು ಅದಕ್ಕೆ, ಸಿಟ್ನಾ, ಎಂದು ಹೆಸರಿಟ್ಟನು.


“ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ಮತ್ತು ನಿವಾಸದ ಪರದೆಗಳು ಹರಡಲಿ. ಹಿಂದೆಗೆಯಬೇಡ; ನಿನ್ನ ಗುಡಾರದ ಹಗ್ಗಗಳನ್ನು ಉದ್ದಮಾಡಿ, ಅದರ ಗೂಟಗಳನ್ನು ಬಲಪಡಿಸು.


ನೀನು ಬಲಗಡೆಗೂ, ಎಡಗಡೆಗೂ ಹಬ್ಬಿಕೊಳ್ಳುವೆ. ನಿನ್ನ ಸಂತಾನವು ಜನಾಂಗಗಳನ್ನು ವಶಪಡಿಸಿಕೊಂಡು, ಹಾಳಾದ ಪಟ್ಟಣಗಳನ್ನು ನಿವಾಸವಾಗ ಮಾಡುವುದು.


ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ಓಡುವೆನು, ಏಕೆಂದರೆ ನೀವು ನನ್ನ ವಿವೇಕವನ್ನು ವಿಸ್ತಾರ ಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು