Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:43 - ಕನ್ನಡ ಸಮಕಾಲಿಕ ಅನುವಾದ

43 ಆದ್ದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು. ಎದ್ದು ಹಾರಾನಿನಲ್ಲಿರುವ ನನ್ನ ಸಹೋದರ ಲಾಬಾನನ ಬಳಿಗೆ ಓಡಿಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆದುದರಿಂದ ಮಗನೇ, ನನ್ನ ಮಾತನ್ನು ಕೇಳು; ನೀನು ಎದ್ದು ಖಾರಾನ್ ಊರಿನಲ್ಲಿರುವ ನನ್ನ ಅಣ್ಣ ಲಾಬಾನನ ಬಳಿಗೆ ಓಡಿಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆದದರಿಂದ ಮಗನೇ, ನನ್ನ ಮಾತನ್ನು ಕೇಳು; ನೀನು ಎದ್ದು ಖಾರಾನ್ ಊರಿನಲ್ಲಿರುವ ನನ್ನಣ್ಣನಾದ ಲಾಬಾನನ ಬಳಿಗೆ ಓಡಿಹೋಗಿ ಕೆಲವು ಕಾಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆದ್ದರಿಂದ ಮಗನೇ, ನಾನು ಹೇಳಿದಂತೆ ಮಾಡು. ನನ್ನ ಅಣ್ಣನಾದ ಲಾಬಾನನು ಹಾರಾನಿನಲ್ಲಿ ವಾಸವಾಗಿದ್ದಾನೆ. ಅವನ ಬಳಿಗೆ ಹೋಗಿ ಅಡಗಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:43
14 ತಿಳಿವುಗಳ ಹೋಲಿಕೆ  

ಆದ್ದರಿಂದ ಈಗ ನನ್ನ ಮಗನೇ, ನಾನು ನಿನಗೆ ಆಜ್ಞಾಪಿಸುವ ನನ್ನ ಮಾತಿಗೆ ವಿಧೇಯನಾಗು.


ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗುವುದಕ್ಕಾಗಿ ಕಸ್ದೀಯರ ಊರ್ ಪಟ್ಟಣವನ್ನು ಬಿಟ್ಟು, ಹಾರಾನ್ ಎಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸವಾಗಿದ್ದನು.


ಅವನ ತಾಯಿಯು ಅವನಿಗೆ, “ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ, ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ, ಅವುಗಳನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದಳು.


ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!


ರೇಕಾಬನ ಮಗ ಯೆಹೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.”


“ತನ್ನ ತಂದೆಯನ್ನು ಹಾಸ್ಯಮಾಡಿ, ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು, ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು. ರಣಹದ್ದುಗಳು ಅದನ್ನು ತಿಂದುಬಿಡುವವು.


ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ, ಪದ್ದನ್ ಅರಾಮಿಗೆ ಹೋದದ್ದನ್ನೂ


ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿದನು.


ಆಗ ಯಾಕೋಬನು ಬೇರ್ಷೆಬದಿಂದ ಹಾರಾನಿನ ಕಡೆಗೆ ಹೊರಟನು.


ರೆಬೆಕ್ಕಳಿಗೆ ತನ್ನ ಹಿರಿಯ ಮಗ ಏಸಾವನ ಬಗ್ಗೆ ಗ್ರಹಿಸಿದಾಗ, ಆಕೆಯು ತನ್ನ ಕಿರಿಯ ಮಗ ಯಾಕೋಬನನ್ನು ಕರೆದು ಅವನಿಗೆ, “ನಿನ್ನ ಸಹೋದರ ಏಸಾವನು ನಿನ್ನನ್ನು ಕೊಂದು, ತನ್ನನ್ನು ಸಂತೈಸಿಕೊಳ್ಳುವುದಕ್ಕಿದ್ದಾನೆ.


ಇಸಾಕನು ಯಾಕೋಬನನ್ನು ಕಳುಹಿಸಿದಾಗ, ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿ ರೆಬೆಕ್ಕಳ ಸಹೋದರ ಅರಾಮಿನವನಾದ ಬೆತೂಯೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.


ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು