Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:22 - ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಾನು ಸ್ಮಾರಕಸ್ತಂಭವಾಗಿ ನೆಟ್ಟಿರುವ ಈ ಕಲ್ಲು ದೇವರ ಮನೆಯಾಗುವುದು; ಅದು ಮಾತ್ರವಲ್ಲ, ನೀವು ನನಗೆ ಕೊಡುವ ಎಲ್ಲ ಆಸ್ತಿಪಾಸ್ತಿಯಲ್ಲಿ ಹತ್ತರಲ್ಲಿ ಒಂದು ಪಾಲನ್ನು ನಿಮಗೆ ಸಮರ್ಪಿಸುತ್ತೇನೆಂದು ಮಾತುಕೊಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ನಾನು ಕಂಬವಾಗಿ ನಿಲ್ಲಿಸಿರುವ ಈ ಕಲ್ಲು ದೇವರ ಮನೆಯಾಗುವದು. ಇದಲ್ಲದೆ ನಿನ್ನಿಂದ ನನಗೆ ಬರುವ ಎಲ್ಲಾ ಆಸ್ತಿಯಲ್ಲಿ ಹತ್ತರಲ್ಲೊಂದು ಪಾಲನ್ನು ನಿನಗೆ ಸಮರ್ಪಿಸುವೆನೆಂಬದಾಗಿ ಮಾತುಕೊಡುತ್ತೇನೆ ಎಂದು ಹರಕೆಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:22
13 ತಿಳಿವುಗಳ ಹೋಲಿಕೆ  

ಅಲ್ಲಿ ಅವನು ಬಲಿಪೀಠವನ್ನು ಕಟ್ಟಿ, ತಾನು ತನ್ನ ಸಹೋದರನ ಬಳಿಯಿಂದ ಓಡಿಹೋದಾಗ, ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.


ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ದೇವರು ಸ್ತುತಿಹೊಂದಲಿ.” ಅಬ್ರಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನು.


ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು.


ಅಲ್ಲಿ ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.


ಅವನು ಭಯಪಟ್ಟು, “ಈ ಸ್ಥಳವು ಎಷ್ಟೋ ಗಂಭೀರವಾದದ್ದು, ಇದು ದೇವರ ಮನೆಯೇ ಹೊರತು ಬೇರೆಯಲ್ಲ. ಇದೇ ಪರಲೋಕದ ಬಾಗಿಲು,” ಎಂದನು.


ಅಲ್ಲಿಂದ ಅವರು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ, ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರೂ ಇರುವ ಹಾಗೆ ತನ್ನ ಗುಡಾರವನ್ನು ಹಾಕಿಕೊಂಡನು. ಅಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಆರಾಧಿಸಿದನು.


ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು, ಅಲ್ಲಿ ನಿತ್ಯ ದೇವರಾಗಿರುವ ಯೆಹೋವ ದೇವರ ಹೆಸರನ್ನು ಹೇಳಿ ಆರಾಧಿಸಿದನು.


ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ಉಳಿದ ನಾಲ್ಕು ಪಾಲು ಹೊಲದ ಬೀಜಕ್ಕಾಗಿಯೂ, ನಿಮ್ಮ ಆಹಾರಕ್ಕಾಗಿಯೂ, ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ,” ಎಂದನು.


ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬುದನ್ನು ಈಜಿಪ್ಟಿನ ಭೂಮಿಗೆ ಇಂದಿನವರೆಗೂ ನಿಯಮವಾಗಿ ಸ್ಥಾಪಿಸಿದನು. ಯಾಜಕರ ಭೂಮಿಯು ಮಾತ್ರ ಫರೋಹನದಾಗಲಿಲ್ಲ.


ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು