Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:1 - ಕನ್ನಡ ಸಮಕಾಲಿಕ ಅನುವಾದ

1 ಆಗ ಯಾಕೋಬನು ಪ್ರಯಾಣವನ್ನು ಮುಂದುವರಿಸುತ್ತಾ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯಾಕೋಬನು ಪ್ರಯಾಣ ಮಾಡಿ ಪೂರ್ವ ದಿಕ್ಕಿನ ಜನರ ಸೀಮೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಳಿಕ ಯಕೋಬನು ಪ್ರಯಾಣವನ್ನು ಮುಂದುವರಿಸುತ್ತಾ ಮೂಡಣದವರ ನಾಡಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಯಾಕೋಬನು ದಾರಿ ಹಿಡಿದು ಮೂಡಲ ದೇಶದವರ ಸೀಮೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಯಾಕೋಬನು ತನ್ನ ಪ್ರಯಾಣವನ್ನು ಮುಂದುವರಿಸಿದನು. ಅವನು ಪೂರ್ವ ದಿಕ್ಕಿನಲ್ಲಿದ್ದ ನಾಡಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:1
17 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು,


ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಒಟ್ಟಾಗಿ ಕೂಡಿ, ಯೊರ್ದನ್ ಹೊಳೆ ದಾಟಿ ಬಂದು, ಇಜ್ರೆಯೇಲ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು. ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ, ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.


ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ನಿಮ್ಮ ಆಜ್ಞೆಗಳನ್ನು ಪಾಲಿಸಲು ನಾನು ತಡಮಾಡದೆ ತ್ವರೆಪಟ್ಟಿದ್ದೇನೆ.


ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ಓಡುವೆನು, ಏಕೆಂದರೆ ನೀವು ನನ್ನ ವಿವೇಕವನ್ನು ವಿಸ್ತಾರ ಮಾಡಿದ್ದೀರಿ.


ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನು ನನ್ನನ್ನು ಅರಾಮಿನಿಂದಲೂ, ಮೋವಾಬಿನ ಅರಸನು ಪೂರ್ವ ಪರ್ವತಗಳಿಂದಲೂ ಕರೆಯಿಸಿ, ‘ನನಗೋಸ್ಕರ ಯಾಕೋಬನನ್ನು ಶಪಿಸಿ ಬಾ, ಇಸ್ರಾಯೇಲನ್ನು ಎದುರಿಸುವುದಕ್ಕೆ ಬಾ,’ ಎಂದು ನನಗೆ ಹೇಳಿದ್ದಾನೆ.


ಸೊಲೊಮೋನನ ಜ್ಞಾನವು ಮೂಡಣ ದೇಶದ ಸಮಸ್ತರ ಜ್ಞಾನಕ್ಕಿಂತಲೂ, ಈಜಿಪ್ಟಿನ ಸಮಸ್ತರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.


ಜೆಬಹನೂ, ಚಲ್ಮುನ್ನನೂ ತಮ್ಮ ಸೈನ್ಯದ ಹೆಚ್ಚು ಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರಷ್ಟೂ, ಖಡ್ಗ ಹಿಡಿಯತಕ್ಕ ಒಂದು ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ, ಪೂರ್ವದೇಶದ ಸಮಸ್ತ ಜನರು ಅಲ್ಲಿ ಉಳಿದರು.


ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಮಲಗಿದ್ದರು. ಅವರ ಒಂಟೆಗಳು ಸಮುದ್ರದ ಮರಳಿನ ಹಾಗೆ ಅಸಂಖ್ಯವಾಗಿದ್ದವು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು.


ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನೂ, ತನ್ನ ಯಜಮಾನನಿಂದ ಎಲ್ಲಾ ತರಹದ ವಸ್ತ್ರಗಳನ್ನೂ ತೆಗೆದುಕೊಂಡು ಅರಾಮ್ ನಹರೈಮಿಗೆ ಹೊರಟು, ನಾಹೋರನು ವಾಸವಾಗಿದ್ದ ಊರನ್ನು ಸೇರಿದನು.


ಅಬ್ರಹಾಮನಿಗೆ ಇದ್ದ ಉಪಪತ್ನಿಯರ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು, ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಕಳುಹಿಸಿದನು.


ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು.


ಅಲ್ಲಿ ಅವನು ಬಲಿಪೀಠವನ್ನು ಕಟ್ಟಿ, ತಾನು ತನ್ನ ಸಹೋದರನ ಬಳಿಯಿಂದ ಓಡಿಹೋದಾಗ, ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು