Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:18 - ಕನ್ನಡ ಸಮಕಾಲಿಕ ಅನುವಾದ

18 ಭೂಮಿಯಲ್ಲಿ ಮುಳ್ಳುಗಿಡಗಳೂ ಕಳ್ಳಿಗಳೂ ಬೆಳೆಯುವುವು. ನೀನು ಹೊಲದ ಬೆಳೆಯನ್ನು ಉಣ್ಣುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು, ಹೊಲದ ಬೆಳೆಗಳು ನಿನಗೆ ಆಹಾರವಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬೆಳಸುವುದದು ಅತುಳ ಕಳೆಯನ್ನು, ಮುಳ್ಳುಗಿಡಗಳನ್ನು ತಿನ್ನಬೇಕಾಗುವುದು ನೀನು ಬೈಲಿನ ಬೆಳೆಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಭೂವಿುಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಹುಟ್ಟುವವು. ಹೊಲದ ಬೆಳೆಯನ್ನು ಅನುಭವಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು. ಹೊಲದಲ್ಲಿ ಬೆಳೆಯುವ ಬೆಳೆಯನ್ನು ನೀನು ತಿನ್ನುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:18
20 ತಿಳಿವುಗಳ ಹೋಲಿಕೆ  

ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆ ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.


ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.


ಹಸಿದವರು ಅವನ ಪೈರನ್ನು ತಿಂದುಬಿಡುವರು; ಮುಳ್ಳುಬೇಲಿ ಹಾಕಿದ್ದರೂ ಅದನ್ನು ತೆಗೆದುಕೊಳ್ಳುವರು; ಅವನ ಆಸ್ತಿಯನ್ನು ಬಾಯಾರಿಕೆಯಾದವರು ನುಂಗಿಬಿಡುವರು.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ನಿಷ್ಪ್ರಯೋಜಕವಾದದ್ದಾಗಿ ಶಾಪಕ್ಕೆ ಗುರಿಯಾಗಿ, ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಏಕೆಂದರೆ ಯೆಹೋವ ದೇವರು ಯೆಹೂದದ ಮತ್ತು ಯೆರೂಸಲೇಮಿನ ಜನರಿಗೆ ಹೀಗೆ ಹೇಳುತ್ತಾರೆ: “ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಗೆಯ್ಯಿರಿ. ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.


ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ.


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


ದುಷ್ಟರ ದಾರಿಯಲ್ಲಿ ಮುಳ್ಳುಗಳೂ, ಉರುಲುಗಳೂ ಇವೆ; ತನ್ನ ಜೀವವನ್ನು ಕಾಪಾಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.


ಗೋಧಿಗೆ ಬದಲಾಗಿ ಮುಳ್ಳುಗಳೂ, ಜವೆಗೋಧಿಗೆ ಬದಲಾಗಿ ಕಳೆಗಳೂ ಬೆಳೆಯಲಿ.” ಹೀಗೆ ಯೋಬನ ಮಾತುಗಳು ಮುಗಿದವು.


ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ.


ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”


ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಗಿತ್ತು.


ದೇವರು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುತ್ತಾರೆ, ಆಕಾಶವನ್ನು ಗುಡಾರದ ಹಾಗೆ ಹರಡಿಸಿದ್ದಾರೆ.


ನೀವು ಮನುಷ್ಯರನ್ನು ಪುನಃ ಮಣ್ಣಿಗೆ ಸೇರಿಸುತ್ತೀರಿ. “ಮನುಷ್ಯ ಪುತ್ರರೇ, ಮಣ್ಣಿಗೆ ಮರಳಿರಿ,” ಎಂದು ಹೇಳುತ್ತೀರಿ.


ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”


ಒಬ್ಬನ ವಿಶ್ವಾಸವು ಎಲ್ಲವನ್ನೂ ತಿನ್ನುವಂತೆ ಮಾಡುತ್ತದೆ. ಆದರೆ ವಿಶ್ವಾಸದಲ್ಲಿ ಬಲಹೀನನಾಗಿರುವವನು ಸಸ್ಯಾಹಾರಿಯಾಗಿಯೇ ಇರುತ್ತಾನೆ.


ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, “ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು, ಅದರ ಹುಟ್ಟುವಳಿಯನ್ನು ಉಣ್ಣುವೆ.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವುದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು