Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:22 - ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ತಿಳಿದು, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರನಾದ ದೇವರು, “ಮನುಷ್ಯನು ಈಗ ನಮ್ಮಲ್ಲಿ ಒಬ್ಬರಂತೆ ಒಳಿತು - ಕೆಡುಕುಗಳ ಜ್ಞಾನವನ್ನು ಪಡೆದುಬಿಟ್ಟಿದ್ದಾನೆ. ಇನ್ನು ಅಮರ ಜೀವಿಯಾಗಲು ಜೀವವೃಕ್ಷದ ಹಣ್ಣಿಗೆ ಕೈ ಚಾಚಿಬಿಡಬಾರದು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ಯೆಹೋವದೇವರು - ಈ ಮನುಷ್ಯನು ಒಳ್ಳೇದರ ಕೆಟ್ಟದ್ದರ ಭೇದವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ. ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತೆಗೆದು ತಿಂದು ಶಾಶ್ವತವಾಗಿ ಬದುಕುವವನಾಗಬಾರದು ಅಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರಾದ ಯೆಹೋವನು, “ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ತಿಳಿದುಕೊಂಡು ನಮ್ಮಂತಾದನು. ಈಗ ಮನುಷ್ಯನು ಜೀವದಾಯಕ ಮರದ ಹಣ್ಣನ್ನೇನಾದರೂ ತೆಗೆದುಕೊಂಡು ತಿಂದರೆ ಅವನು ಸದಾಕಾಲ ಬದುಕುವನು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:22
15 ತಿಳಿವುಗಳ ಹೋಲಿಕೆ  

ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


ಪಟ್ಟಣದ ಪ್ರಧಾನ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳಿಗೂ ಫಲವನ್ನು ಫಲಿಸುತ್ತಾ ಹನ್ನೆರಡು ಸಾರಿ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವಂಥದ್ದಾಗಿದ್ದವು.


ಜ್ಞಾನವನ್ನು ಹಿಡಿದುಕೊಳ್ಳುವವರಿಗೆ ಜ್ಞಾನವು ಜೀವವೃಕ್ಷವಾಗಿದೆ; ಅದನ್ನು ಭದ್ರವಾಗಿ ಇಟ್ಟುಕೊಳ್ಳುವವರು ಧನ್ಯರು.


ಯೆಹೋವ ದೇವರು ನೋಟಕ್ಕೆ ರಮ್ಯವೂ ಊಟಕ್ಕೆ ಒಳ್ಳೆಯವೂ ಆದ ಎಲ್ಲಾ ಮರಗಳನ್ನೂ ಭೂಮಿಯಲ್ಲಿ ಬೆಳೆಯುವಂತೆ ಮಾಡಿದರು. ತೋಟದ ಮಧ್ಯದಲ್ಲಿ ಜೀವದ ಮರವನ್ನೂ ಒಳ್ಳೆಯದರ ಮತ್ತು ಕೆಟ್ಟದ್ದರ ತಿಳುವಳಿಕೆಯ ಮರವನ್ನೂ ಬೆಳೆಯುವಂತೆ ಮಾಡಿದರು.


ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.


ನೀವು ಇದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯುವುವು, ನೀವು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿತವರಾಗಿ ದೇವರ ಹಾಗೆ ಇರುವಿರಿ. ಇದು ದೇವರಿಗೆ ತಿಳಿದಿದೆ,” ಎಂದು ಹೇಳಿತು.


ಓ, ‘ಲೆಬನೋನಿನಲ್ಲಿ’ ವಾಸಮಾಡುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡವಳೇ, ನಿನ್ನ ಮೇಲೆ ಬೇನೆಗಳೂ, ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ದುಃಖಕರವಾಗಿರುವೆ.


ದೀನರು ಉಂಡು ತೃಪ್ತರಾಗುವರು; ಯೆಹೋವ ದೇವರನ್ನು ಹುಡುಕುವವರು ಅವರನ್ನು ಸ್ತುತಿಸುವರು; ಅಂಥವರ ಹೃದಯವು ಎಂದೆಂದಿಗೂ ಚೈತನ್ಯ ಹೊಂದಲಿ.


ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದರು.


ಆದ್ದರಿಂದ ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕೆ ಯೆಹೋವ ದೇವರು ಏದೆನ್ ತೋಟದೊಳಗಿಂದ ಅವನನ್ನು ಹೊರಗೆ ಕಳುಹಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು