Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:4 - ಕನ್ನಡ ಸಮಕಾಲಿಕ ಅನುವಾದ

4 ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಆ ಸರ್ಪ, “ಆ ಮಾತು ನಿಜವಲ್ಲ, ನೀವು ಸಾಯುವುದು ಸುಳ್ಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಸರ್ಪವು ಸ್ತ್ರೀಗೆ - ನೀವು ಹೇಗೂ ಸಾಯುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದಕ್ಕೆ ಸರ್ಪವು ಸ್ತ್ರೀಗೆ, “ನೀವು ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:4
13 ತಿಳಿವುಗಳ ಹೋಲಿಕೆ  

ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ಆದಾಮನು ವಂಚನೆಗೊಳಗಾಗಲಿಲ್ಲ, ಸ್ತ್ರೀಯು ವಂಚನೆಗೊಳಗಾಗಿ ಅಪರಾಧಿಯಾದಳು.


ಸೈತಾನನು ನಮ್ಮನ್ನು ವಂಚಿಸಲು ಅವಕಾಶ ಕೊಡಬಾರದು. ಅವನ ಕುತಂತ್ರಗಳನ್ನು ನಾವು ಅರಿತವರಲ್ಲವೇ?


ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.


“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.


ಅದಕ್ಕೆ ಎಲೀಷನು, “ನೀನು ಹೋಗಿ ಅವನಿಗೆ, ನಿಜವಾಗಿಯೂ ಸ್ವಸ್ಥನಾಗುವೆ, ಎಂದು ಹೇಳು. ಆದರೆ ಅವನು ಸಾಯುವನೆಂದು ಯೆಹೋವ ದೇವರು ನನಗೆ ತೋರಿಸಿದ್ದಾರೆ,” ಎಂದನು.


ಅರಸನಿಗೆ, “ಯೆಹೋವ ದೇವರ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರಿಲ್ಲವೆಂಬ ಹಾಗೆ ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನ್ನು ವಿಚಾರಿಸಲು ದೂತರನ್ನು ಕಳುಹಿಸಿದ ಕಾರಣ, ‘ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಅವರು ಅರಸನಿಗೆ, “ಒಬ್ಬ ಮನುಷ್ಯನು ನಮಗೆ ಎದುರಾಗಿ ಬಂದು, ‘ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿ ಹೋಗಿ, ಯೆಹೋವ ದೇವರು ಹೇಳುವುದು ಏನೆಂದರೆ: ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಜನರನ್ನು ಕಳುಹಿಸಿರುತ್ತೀ? ಇದರ ನಿಮಿತ್ತ, ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂಬುದಾಗಿ ಅವನಿಗೆ ಹೇಳಿರಿ, ಎಂದು ತಿಳಿಸಿದನು,” ಎಂದರು.


ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ ಎಂದು ಹೇಳು,” ಎಂದರು. ಆಗ ಎಲೀಯನು ಹೊರಟುಹೋಗಿ ಅದರಂತೆ ಹೇಳಿದನು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, “ನಾನು ಹಟ ಹಿಡಿದು, ಅವಿಧೇಯನಾದರೂ ನನಗೆ ಕ್ಷೇಮವೇ,” ಎಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವನು ಇರಬಾರದು. ಅಂಥವನು ನೀರಾವರಿ ನಾಡಿಗೂ ಒಣ ನಾಡಿಗೂ ನಾಶನವನ್ನು ತರುವನು.


ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸತ್ತು ಹೋಗುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದಳು.


“ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಯೆಹೋವ ದೇವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ, ಹೊರಟುಹೋಗಿ ಹಾಗೆ ಮಾಡು,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು