Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:1 - ಕನ್ನಡ ಸಮಕಾಲಿಕ ಅನುವಾದ

1 ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರಲಿಲ್ಲ ಎಂದು ತಿಳಿದಾಗ, ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೆಕಿಚ್ಚು ಪಟ್ಟು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರಾಖೇಲಳು ತಾನು ಯಕೋಬನಿಗೆ ಮಕ್ಕಳನ್ನು ಹೆರಲಿಲ್ಲವೆಂದುಕೊಂಡು ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚು ಪಟ್ಟಳು. ಅಲ್ಲದೆ ಯಕೋಬನಿಗೆ, “ನನಗೆ ಮಕ್ಕಳನ್ನು ಕೊಡು; ಇಲ್ಲದಿದ್ದರೆ ಸಾಯುತ್ತೇನೆ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರಾಹೇಲಳು ತಾನು ಮಕ್ಕಳನ್ನು ಹೆರದೆ ಇರುವದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು ಯಾಕೋಬನಿಗೆ - ಮಕ್ಕಳನ್ನು ನನಗೆ ಕೊಡು; ಇಲ್ಲದಿದ್ದರೆ ಸಾಯುವೆನು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರಾಹೇಲಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿದಳು. ರಾಹೇಲಳಿಗೆ ತನ್ನ ಅಕ್ಕ ಲೇಯಳ ಮೇಲೆ ಹೊಟ್ಟೆಕಿಚ್ಚಾಯಿತು. ಆದ್ದರಿಂದ ರಾಹೇಲಳು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲವಾದರೆ ನಾನು ಸಾಯುವೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:1
26 ತಿಳಿವುಗಳ ಹೋಲಿಕೆ  

ಮೂಢನನ್ನು ಅಸಮಾಧಾನವು ಕೊಲ್ಲುವುದು; ಮುಗ್ಧನನ್ನು ಅಸುಹೆ ಸಾಯುವಂತೆ ಮಾಡುವುದು.


ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು.


ಹೀಗೆ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.


ದೈವಿಕ ದುಃಖವು ಪಶ್ಚಾತ್ತಾಪವನ್ನು ತಂದು ರಕ್ಷಣೆಗೆ ನಡೆಸುತ್ತದೆ. ಆ ಪಶ್ಚಾತ್ತಾಪದಲ್ಲಿ ವಿಷಾಧವಿರುವುದಿಲ್ಲ. ಆದರೆ ಪ್ರಾಪಂಚಿಕ ದುಃಖವು ಮರಣಕ್ಕೆ ನಡೆಸುತ್ತದೆ.


ಅಥವಾ ದೇವರು ನಮ್ಮಲ್ಲಿ ವಾಸವಾಗಿರಲು ನಮಗೆ ಕೊಟ್ಟಿರುವ ಪವಿತ್ರಾತ್ಮ ದೇವರು, ನಾವು ಅವರಿಗೆ ಮಾತ್ರ ಸೇರಿದವರಾಗಿರಬೇಕೆಂದು ಬಲವಾದ ಬಯಕೆ ಉಳ್ಳವರಾಗಿದ್ದಾರೆಂದು ಪವಿತ್ರ ವೇದವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸುತ್ತೀರೋ?


ನಿಮ್ಮ ಹೃದಯದೊಳಗೆ ಕಹಿಯಾದ ಹಗೆತನವನ್ನೂ ಸ್ವಾರ್ಥ ಉದ್ದೇಶವನ್ನು ಕೂಡಿಟ್ಟು ಕೊಂಡಿರುವಲ್ಲಿ, ನೀವು ಜ್ಞಾನದ ಕುರಿತು ಹೊಗಳಿಕೊಳ್ಳಬೇಡಿರಿ ಮತ್ತು ಸತ್ಯವನ್ನು ನಿರಾಕರಿಸಬೇಡಿರಿ.


ಏಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ಹೇಗೆಂದರೆ, ನಿಮ್ಮೊಳಗೆ ಅಸೂಯೆ, ಜಗಳಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದೀರಲ್ಲದೆ ಕೇವಲ ಮಾನವರಂತೆ ನಡೆಯುತ್ತೀರಲ್ಲವೇ?


ಶಾಂತ ಹೃದಯವು ದೇಹಕ್ಕೆ ಜೀವ; ಆದರೆ ಮತ್ಸರವು ಎಲುಬುಗಳಿಗೆ ಕ್ಷಯ.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.


ಯೇಸುವಿನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳಲು ಪಟ್ಟಣದೊಳಕ್ಕೆ ಹೋಗಿದ್ದರು.


ಫರಿಸಾಯರು ಕೇಳಿಸಿಕೊಂಡದ್ದನ್ನು ಯೇಸು ತಿಳಿದಾಗ, ಯೇಸು ಯೂದಾಯವನ್ನು ಬಿಟ್ಟು ಗಲಿಲಾಯಕ್ಕೆ ತಿರುಗಿ ಹೊರಟು ಹೋದರು.


ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ.


ಇಸ್ರಾಯೇಲರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವ ದೇವರಿಗೆ ಪ್ರತಿಷ್ಠಿತನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು.


ಯಾರಾದರೂ ನನ್ನ ವಿರುದ್ಧ ದೂರನ್ನು ತರಬಹುದೋ? ಹಾಗಿದ್ದರೆ ನಾನು ಮೌನವಾಗಿದ್ದು ಸತ್ತು ಹೋಗುವೆನು.


“ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ? ನಾನು ಗರ್ಭದಿಂದ ಬಂದಾಗಲೇ ಏಕೆ ಪ್ರಾಣ ಬಿಡಲಿಲ್ಲ?


ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.


ಮೋಶೆಯು ಅವನಿಗೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚು ಪಡುತ್ತೀಯೋ? ಯೆಹೋವ ದೇವರ ಜನರೆಲ್ಲಾ ಪ್ರವಾದಿಗಳಾಗಿದ್ದು, ಯೆಹೋವ ದೇವರು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೆಯದು,” ಎಂದನು.


ಈ ರೀತಿಯಲ್ಲಿ ನೀವು ನನ್ನನ್ನು ನಡೆಸುವುದಾದರೆ, ಈಗಲೇ ನನ್ನನ್ನು ಕೊಂದುಬಿಡಿ. ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತರೆ, ನಾನು ನನ್ನ ಸ್ವಂತ ನಾಶವನ್ನು ಎದುರಿಸದಂತೆ ಕಾಪಾಡಿ,” ಎಂದನು.


ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ಎಂದೂ ತೃಪ್ತಿ ಹೊಂದದ ಭೂಮಿ, ‘ಸಾಕು!’ ಎಂದು ಹೇಳದಿರುವ ಬೆಂಕಿ.


ಅವಳು ಬಹಳ ಮನಗುಂದಿದವಳಾಗಿ ಯೆಹೋವ ದೇವರನ್ನು ಪ್ರಾರ್ಥಿಸಿ, ಅತ್ತು ಒಂದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು